Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂಡಿಯಾ ಗೇಟ್‌ಗೆ ತೆರಳಿದ ಕೇಂದ್ರ...

ಇಂಡಿಯಾ ಗೇಟ್‌ಗೆ ತೆರಳಿದ ಕೇಂದ್ರ ಸಚಿವರಿಗೆ ತ್ಯಾಜ್ಯಗಳ ‘ವ್ಯವಸ್ಥೆ’ ಮಾಡಿದರು!

ಹೀಗೂ ನಡೆಯುತ್ತದೆ ನೋಡಿ 'ಸ್ವಚ್ಛತಾ ಅಭಿಯಾನ'!

ವಾರ್ತಾಭಾರತಿವಾರ್ತಾಭಾರತಿ17 Sept 2017 10:19 PM IST
share
ಇಂಡಿಯಾ ಗೇಟ್‌ಗೆ ತೆರಳಿದ ಕೇಂದ್ರ ಸಚಿವರಿಗೆ ತ್ಯಾಜ್ಯಗಳ ‘ವ್ಯವಸ್ಥೆ’ ಮಾಡಿದರು!

ಹೊಸದಿಲ್ಲಿ,ಸೆ.17: ಎರಡು ವಾರಗಳ ಕಾಲ ಹಮ್ಮಿಕೊಳ್ಳಲಾಗಿರುವ ‘ಸ್ವಚ್ಛತೆಯೇ ಸೇವೆ’ ಅಭಿಯಾನದ ಪ್ರಚಾರಕ್ಕಾಗಿ ರವಿವಾರ ಇಲ್ಲಿಯ ಪ್ರಮುಖ ಪ್ರವಾಸಿ ತಾಣ ಇಂಡಿಯಾ ಗೇಟ್‌ಗೆ ಭೇಟಿ ನೀಡಿದ್ದ ಕೇಂದ್ರದ ನೂತನ ಪ್ರವಾಸೋದ್ಯಮ ಸಚಿವ ಆಲ್ಫೋನ್ಸ್ ಕಣ್ಣಂತನಂ ಅವರು ಅಲ್ಲಿಯ ನಿಗದಿತ ಸ್ಥಳಗಳಿಗೆ ತೆರಳಿದಾಗ ಅವರು ಸ್ವಚ್ಛಗೊಳಿಸಲು ಅಲ್ಲಿ ಕಸವೇ ಇರಲಿಲ್ಲ!.

ಇದರಿಂದ ಗೊಂದಲಕ್ಕೊಳಗಾದ ಸಚಿವಾಲಯದ ಅಧಿಕಾರಿಗಳು ಮತ್ತು ಸ್ವಯಂಸೇವಕರು ಲಗುಬಗೆಯಿಂದ ಅಲ್ಲಿಂದಿಲ್ಲಿಗೆ ಓಡಾಡಿ ಸಚಿವರಿಗಾಗಿ ಸ್ವಲ್ಪ ‘ಕಸಗಳನ್ನು’ ವ್ಯವಸ್ಥೆ ಮಾಡಲು ಪರದಾಡುತ್ತಿದ್ದರೆ, ಕಣ್ಣಂತನಂ ಅಲ್ಲಿ ಬಿದ್ದಿದ್ದ ಒಂದೆರಡು ಖಾಲಿ ನೀರಿನ ಬಾಟ್ಲಿಗಳು, ಪಾನ್ ಮಸಾಲಾದ ಸ್ಯಾಚೆಟ್‌ಗಳನ್ನು ಎತ್ತಿ ‘ಸ್ವಚ್ಛ’ಗೊಳಿಸಿದರು.

ಕಣ್ಣಂತನಂ ಅಲ್ಲಿ ನಿಂತಿದ್ದ ಹಲವರಿಗೆ ಹಸ್ತಲಾಘವ ನೀಡಿ ಕೆಲವರ ಬೆನ್ನು ತಟ್ಟಿ, ಸ್ಥಳವನ್ನು ಸ್ವಚ್ಛವಾಗಿರಿಸುವಂತೆ ಕೇಳಿಕೊಂಡರು. ಆದರೆ ಹೆಚ್ಚಿನವರಿಗೆ ಅವರು ಸಚಿವರು ಎನ್ನುವುದು ಗೊತ್ತಾಗಿರಲಿಲ್ಲ.

ಅಲ್ಲಿ ಗೋಲ್‌ಗಪ್ಪಾದಂತಹ ಬೀದಿಬದಿ ಆಹಾರಗಳನ್ನು ಮಾರುತ್ತಿದ್ದವರನ್ನು ಮಾತಿಗೆಳೆದ ಕಣ್ಣಂತನಂ ಅವರ ಗಳಿಕೆಯ ಬಗ್ಗೆ ಕೆಲವು ಪ್ರಶ್ನೆಗಳನ್ನು ಕೇಳಿದರಲ್ಲದೆ, ತಿಂದು ಉಳಿದ ತಿನಿಸು ಮತ್ತು ಪ್ಲೇಟ್‌ಗಳನ್ನು ಕಸದ ತೊಟ್ಟಿಗಳಲ್ಲಿಯೇ ಹಾಕಲು ತಮ್ಮ ಗ್ರಾಹಕರಿಗೆ ಸೂಚಿಸುವಂತೆ ಅವರಿಗೆ ತಿಳಿಸಿದರು.
ಇಂಡಿಯಾ ಗೇಟ್ ಪ್ರದೇಶವನ್ನು ಪ್ರತಿದಿನವೂ ಸ್ವಚ್ಛಗೊಳಿಸಲಾಗುತ್ತಿದೆಯಾದರೂ ಸ್ವಚ್ಛತೆ ಇನ್ನಷ್ಟು ಹೆಚ್ಚುವ ಅಗತ್ಯವಿದೆ ಎಂದು ಕಣ್ಣಂತನಂ ಹೇಳಿದರು.
ಇಂಡಿಯಾ ಗೇಟ್ ಸ್ವಚ್ಛತೆಗಾಗಿ ತಾನಿಲ್ಲಿ ಬಂದಿದ್ದೇನೆ. ಸ್ವಚ್ಛತಾ ಕಾರ್ಯ ದೇಶಾದ್ಯಂತ ನಡೆಯುತ್ತಿದೆ. ನಾವು ಭಾರತವನ್ನು ಸ್ವಚ್ಛವಾಗಿರಿಸಬೇಕು ಎನ್ನುವುದು ಇದರ ಸಂದೇಶ ವಾಗಿದೆ. ಕೇವಲ ಸರಕಾರಿ ಅಧಿಕಾರಿಗಳು ಮಾತ್ರವಲ್ಲ, ದೇಶದ ಪ್ರತಿಯೊಬ್ಬರೂ ಇದರಲ್ಲಿ ಭಾಗವಹಿಸಬೇಕಿದೆ. ಇದು ಕೇವಲ ವಾರ್ಷಿಕ ಅಥವಾ ಕ್ಯಾಮೆರಾಗಳೆದುರಿನ ಕಾರ್ಯ ವಾಗದೆ ದಿನನಿತ್ಯದ ಕಾರ್ಯವಾಗಬೇಕು ಎಂದು ಕಣ್ಣಂತನಂ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X