Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸತ್ಯಕ್ಕಾಗಿ ಮಡಿದ ವಿಚಾರವಾದಿಗಳ ಬದುಕು...

ಸತ್ಯಕ್ಕಾಗಿ ಮಡಿದ ವಿಚಾರವಾದಿಗಳ ಬದುಕು ಮಾದರಿ: ಡಾ.ಮುಹಮ್ಮದ್ ತಾಹಾ ಮತೀನ್

ವಾರ್ತಾಭಾರತಿವಾರ್ತಾಭಾರತಿ17 Sept 2017 11:55 PM IST
share

ಬೆಂಗಳೂರು, ಸೆ.17: ತಮ್ಮ ಬದುಕಿನುದ್ದಕ್ಕೂ ಸತ್ಯವನ್ನು ಪ್ರತಿಪಾದಿಸಿದಕ್ಕಾಗಿ ಮೂಲಭೂತವಾದಿಗಳಿಂದ ಹತ್ಯೆಗೀಡಾದ ವಿಚಾರವಾದಿಗಳಾದ ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್, ಡಾ.ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಂಕೇಶ್ ತತ್ವ ಸಿದ್ಧಾಂತಗಳು ನಮಗೆ ಮಾದರಿಯಾಗಲಿ ಎಂದು ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯ ಕಾರ್ಯದರ್ಶಿ ಡಾ.ಮುಹಮ್ಮದ್ ತಾಹಾ ಮತೀನ್ ಆಶಿಸಿದ್ದಾರೆ.

ರವಿವಾರ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ನಗರದ ದಾರುಸ್ಸಲಾಮ್ ಸಭಾಂಗಣದಲ್ಲಿ ಆಯೋಜಿಸಿದ್ದ ‘ಈದ್ ಸೌಹಾರ್ದ’ ಕೂಟ ಉದ್ಘಾಟಿಸಿ ಮಾತನಾಡಿದ ಅವರು, ಸತ್ಯವನ್ನು ಪ್ರತಿಪಾದಿಸಲು ಯಾರಿಗೂ ಎದರಬೇಕಾಗಿಲ್ಲ. ಸತ್ಯವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲವೆಂದು ವಿಚಾರವಾದಿಗಳು ನಮಗೆ ಮನಗಾಣಿಸಿದ್ದಾರೆ ಎಂದು ತಿಳಿಸಿದರು.

ಸಮಾಜದಲ್ಲಿ ಹಸಿವಿನಿಂದ ಸಾಯುವವರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಮಹಿಳೆ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಲಿದೆ. ಕಷ್ಟಪಟ್ಟು ದುಡಿದ ರೈತರು ಬೆಳೆಗೆ ಸೂಕ್ತ ಬೆಲೆ ಸಿಗದೆ ಕಾಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರ ನಡುವೆಯೂ ಕೆಲವರು 4 ಕೋಟಿ ರೂ.ಮೌಲ್ಯದ ಕೈ ಚೀಲವನ್ನು ಹೆಗಲಿಗೇರಿಸಿಕೊಂಡು ಹೋಗುವವರನ್ನು ಕಾಣುತ್ತಿದ್ದೇವೆ ಎಂದು ಅವರು ವಿಷಾದಿಸಿದರು.

ಸಮಾಜದಲ್ಲಿ ಸಂಪನ್ಮೂಲ ಅಸಮಾನ ಹಂಚಿಕೆಯಾಗುತ್ತಿದೆ. ದೇಶದ ಬಹುತೇಕ ಸಂಪತ್ತು ಕೆಲವೇ ವ್ಯಕ್ತಿಗಳ ಬಳಿ ಕೇಂದ್ರಕೃತವಾಗುತ್ತಿದೆ. ಬಡವರು ಮತ್ತಷ್ಟು ಬಡವರಾಗುತ್ತಾ, ಕನಿಷ್ಠ ಮೂಲಭೂತ ಅಗತ್ಯಗಳನ್ನೂ ಪೂರೈಸಿಕೊಳ್ಳಲಾಗದಂತಹ ಪರಿಸ್ಥಿತಿಯಲ್ಲಿ ನರಳುತ್ತಿದ್ದಾರೆ. ಇದೆಲ್ಲವನ್ನು ಗಮನಿಸಿದರೆ ಪ್ರಸ್ತುತ ಸಮಾಜ ಸಂವೇದನಾ ಹೀನತೆಯತ್ತ ಸಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

‘ವಾರ್ತಾಭಾರತಿ’ ಪತ್ರಿಕೆ ಅಂಕಣಕಾರ ರಂಜಾನ್ ದರ್ಗಾ ಮಾತನಾಡಿ, ಪ್ರಸ್ತುತ ದೇಶವು ಅತ್ಯಂತ ಆತಂಕದ ಸ್ಥಿತಿಯಲ್ಲಿದ್ದು, ಮೂಲಭೂತವಾದಿಗಳು ವಿಜೃಂಭಿಸುತ್ತಿದ್ದಾರೆ. ಇವರ ಹಿಡಿತದಲ್ಲಿ ದಲಿತರು, ಮಹಿಳೆಯರು, ಅಲ್ಪಸಂಖ್ಯಾತರು ನರಳುವಂತಾಗಿದೆ. ಇಂತಹ ಪರಿಸ್ಥಿತಿಯಿಂದ ಹೊರ ಬರಬೇಕಾದರೆ ಮಾನವೀಯ ಮೌಲ್ಯಗಳುಳ್ಳ ಪ್ರತಿಯೊಬ್ಬರು ಸಂಘಟಿರಾಗಬೇಕಾಗಿದೆ ಎಂದು ತಿಳಿಸಿದರು.

ದಸಂಸ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ಅಲಿಖಿತ ಸಂವಿಧಾನ ನಮ್ಮನ್ನು ಆಳುತ್ತಿದ್ದು, ಇಲ್ಲಿನ ಬಹುಸಂಸ್ಕೃತಿ, ಬಹು ಧರ್ಮಗಳನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ದೇಶಾದ್ಯಂತ ಗಲಭೆಗಳನ್ನು ಸೃಷ್ಟಿಸಲಾಗುತ್ತಿದೆ. ಇಂತಹ ಹೊತ್ತಿನಲ್ಲಿ ಎಲ್ಲ ಧರ್ಮಗಳಲ್ಲಿರುವ ಮಾನವೀಯ ಮೌಲ್ಯಗಳನ್ನು ಗೌರವಿಸುವವರು ಮನುವಾದಿಗಳ ವಿರುದ್ಧ ಒಟ್ಟಾಗಿ ಹೋರಾಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ಸಮಾಜಿಕ ಕಾರ್ಯಕರ್ತೆ ಕಾತ್ಯಾಯನಿ ಚಾಮರಾಜ್ ಮಾತನಾಡಿ, ಇಸ್ಲಾಮ್ ಧರ್ಮ ಪ್ರತಿಪಾದಿಸುವ ತತ್ವಗಳಿಗೂ ಅಂಬೇಡ್ಕರ್‌ರವರ ಸಂವಿಧಾನದ ಆಶಯಗಳಲ್ಲಿ ವ್ಯತ್ಯಾಸವಿಲ್ಲ. ಹೀಗಾಗಿ ಮುಸ್ಲಿಮ್ ಧರ್ಮದ ಆಶಯಗಳು ಅನ್ಯ ಧರ್ಮಿಗಳಿಗೂ ತಲುಪುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮೀ ಹಿಂದ್ ಬೆಂಗಳೂರಿನ ಸಂಚಾಲಕ ಡಾ.ಬೆಳಗಾಮಿ ಮುಹಮ್ಮದ್ ಸಾದ್ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X