Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾತೃಪೂರ್ಣ ಯೋಜನೆ ಅಂಗನವಾಡಿಗಳ ಮೂಲಕ...

ಮಾತೃಪೂರ್ಣ ಯೋಜನೆ ಅಂಗನವಾಡಿಗಳ ಮೂಲಕ ಜಾರಿಗೆ ಖಂಡನೆ

ಸೆ.22 ರಂದು ರಾಜ್ಯಾದ್ಯಂತ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2017 7:38 PM IST
share

ಬೆಂಗಳೂರು, ಸೆ. 18: ರಾಜ್ಯ ಸರಕಾರದ ಮಹತ್ವದ ಯೋಜನೆ ‘ಮಾತೃಪೂರ್ಣ ಯೋಜನೆ’ಯನ್ನು ಅಂಗನವಾಡಿಗಳ ಮೂಲಕ ಜಾರಿ ಮಾಡಲು ಮುಂದಾಗಿರುವುದನ್ನು ಖಂಡಿಸಿ ಸೆ.22 ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾ ಮಂಡಳಿ ನಿರ್ಧರಿಸಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿ ಕಾರ್ಯದರ್ಶಿ ಬಿ.ನಾಗರತ್ನಮ್ಮ, ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಧ್ನಾಹ್ನ ಪೌಷ್ಠಿಕ ಬಿಸಿಯೂಟ ನೀಡುವ ಸಲುವಾಗಿ ಮಾತೃಪೂರ್ಣ ಯೋಜನೆಯನ್ನು ಅನುಷ್ಠಾನ ಮಾಡಲು ಮುಂದಾಗಿದೆ. ಆದರೆ, ಇದನ್ನು ಜಾರಿ ಮಾಡುವ ಮೊದಲು ಯಾವುದೇ ಸಮಗ್ರವಾದ ಅಧ್ಯಯನ ನಡೆಸದೆ, ತರಾತುರಿಯಲ್ಲಿ ಏಕಾಏಕಿ ಜಾರಿ ಮಾಡಲು ಮುಂದಾಗಿದ್ದಾರೆ ಎಂದು ದೂರಿದರು.

ಸರಕಾರ ಮಾತೃಪೂರ್ಣ ಯೋಜನೆ ಕುರಿತು ಆಲೋಚನೆ ಮಾಡಿದಾಗಲೇ ಅಂಗನವಾಡಿ ಕೇಂದ್ರಗಳ ಸ್ಥಿತಿಗತಿಗಳ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಬೇಕಿತ್ತು. ಅಲ್ಲದೆ, ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತೆಯರು, ಗರ್ಭಿಣಿ ಹಾಗೂ ಬಾಣಂತಿ ಫಲಾನುಭವಿಗಳು, ಸಲಹಾ ಸಮಿತಿ ಸದಸ್ಯರುಗಳನ್ನು ಒಳಗೊಂಡಂತೆ ಸಮರ್ಪಕವಾದ ಚರ್ಚೆ ನಡೆಸಬೇಕಿತ್ತು. ಆದರೆ, ಇದ್ಯಾವುದನ್ನು ಮಾಡದೇ ಅ.2 ರಂದು ರಾಜ್ಯಾದ್ಯಂತ ಏಕ ಕಾಲಕ್ಕೆ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿರುವ 61 ಸಾವಿರಕ್ಕೂ ಅಧಿಕ ಅಂಗನವಾಡಿಗಳಲ್ಲಿ 34 ಸಾವಿರಕ್ಕೂ ಅಧಿಕ ಸ್ವಂತ ಕಟ್ಟಡಗಳಿಲ್ಲದೆ, 26 ಸಾವಿರಕ್ಕೂ ಅಧಿಕ ಅಂಗನವಾಡಿಗಳು ಸಮರ್ಪಕವಾದ ಸೌಲಭ್ಯಗಳಿಲ್ಲದೆ ನರಳುತ್ತಿವೆ. ಅಲ್ಲದೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ, ಸೂಕ್ತವಾದ ಸ್ಥಳವಿಲ್ಲ. ಹೀಗಿರುವಾಗ ಗರ್ಭಿಣಿ ಅಥವಾ ಬಾಣಂತಿಯರಿಗೆ ಅಂಗನವಾಡಿಗಳಲ್ಲಿ ಹೇಗೆ ಊಟ ನೀಡಲು ಸಾಧ್ಯವಾಗುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬಾಣಂತಿಯರಿಗೆ ಹಾಗೂ ಗರ್ಭಿಣಿಯರಿಗೆ ಬೇಕಾಗುವ ಪೌಷ್ಠಿಕ ಆಹಾರವನ್ನು ಅವರುಗಳ ಮನೆಗೆ ನೀಡಲಾಗುತ್ತಿತ್ತು. ಈಗ ಅದನ್ನು ಬದಲಿಸಿ ಅಂಗನವಾಡಿ ಕೇಂದ್ರಗಳಲ್ಲಿ ಊಟ ನೀಡಲು ಸರಕಾರ ತೀರ್ಮಾನಿಸಿದೆ. ಆದರೆ, ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ 1-2 ಕಿ.ಮೀ. ಅಂಗನವಾಡಿ ಕೇಂದ್ರಗಳಿಗೆ ಬಂದು ದಿನನಿತ್ಯ ಊಟ ಮಾಡಿ ಮನೆಗೆ ಹೋಗಲು ಸಾಧ್ಯವಾ ಎಂದು ಪ್ರಶ್ನಿಸಿದ ಅವರು, ಕೂಡಲೇ ಸರಕಾರ ಈ ಯೋಜನೆಯನ್ನು ಕೈ ಬಿಡಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X