Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾವಿಂದು ಹಿಂದೂ ಏಕಸಂಸ್ಕೃತಿಯಲ್ಲಿ...

ನಾವಿಂದು ಹಿಂದೂ ಏಕಸಂಸ್ಕೃತಿಯಲ್ಲಿ ಕುಗ್ಗುತ್ತಿದ್ದೇವೆ: ಖ್ಯಾತ ಲೇಖಕಿ ನಯನತಾರಾ ಸೆಹಗಲ್

ವಾರ್ತಾಭಾರತಿವಾರ್ತಾಭಾರತಿ19 Sept 2017 8:10 PM IST
share
ನಾವಿಂದು ಹಿಂದೂ ಏಕಸಂಸ್ಕೃತಿಯಲ್ಲಿ ಕುಗ್ಗುತ್ತಿದ್ದೇವೆ: ಖ್ಯಾತ ಲೇಖಕಿ ನಯನತಾರಾ ಸೆಹಗಲ್

ಹೊಸದಿಲ್ಲಿ,ಸೆ.19: ಹೆಚ್ಚುತ್ತಿರುವ ಹಿಂಸೆ, ಗುಂಪುಗಳಿಂದ ಹತ್ಯೆಗಳು ಮತ್ತು ವಿಚಾರವಾದಿಗಳ ಧ್ವನಿ ಅಡಗಿಸುವಿಕೆಗೆ ದೇಶವು ಸಾಕ್ಷಿಯಾಗುತ್ತಿರುವ ಈ ಸಂದರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ನಯನಾತಾರಾ ಸೆಹಗಲ್ ಅವರು ಈ ದೇಶವು ಹಿಂದೂ ಏಕಸಂಸ್ಕೃತಿಯಲ್ಲಿ ಸಂಕುಚಿತಗೊಳ್ಳುತ್ತಿದೆ ಎಂದು ಅಭಿಪ್ರಾಯಿಸಿದ್ದಾರೆ.

ಹಿಂದೂ ಧರ್ಮವೆಂದು ಇಂದು ಬಿಂಬಿಸಲಾಗುತ್ತಿರುವುದು ನಿಜವಾದ ಹಿಂದೂ ಧರ್ಮದ ವಿಕಟಾನುಕರಣೆಯಾಗಿದೆ. ಹಿಂದುತ್ವವು ಹಿಂದು ಧರ್ಮದ ವಿಕೃತಗೊಂಡ ರೂಪವಾಗಿದ್ದು, ನಾವಿಂದು ಅದರಲ್ಲಿ ಸಂಕುಚಿತಗೊಳ್ಳುತ್ತಿದ್ದೇವೆ ಮತ್ತು ಇದೇ ಇಂದು ನಡೆಯುತ್ತಿದೆ ಎಂದು ಭಾರತೀಯ ಲೇಖಕರ ವೇದಿಕೆಯು ಏರ್ಪಡಿಸಿದ್ದ ಫೇಸ್‌ಬುಕ್ ಲೈವ್ ಚಾಟ್‌ನಲ್ಲಿ ಗೀತಾ ಹರಿಹರನ್ ಜೊತೆ ಸಂಭಾಷಿಸುತ್ತಿದ್ದ ಸೆಹಗಲ್ ಹೇಳಿದರು.

1947ರಲ್ಲಿ ದೇಶಕ್ಕೆ ಸ್ವಾತಂತ್ರ ದೊರಕಿದಾಗಿನಿಂದ ಈವರೆಗೆ ಬದಲಾಗುತ್ತಿರುವ ಕಾಲಗಳ ಬಗ್ಗೆ ಚರ್ಚಿಸಿದ ಅವರು, 1975ರಲ್ಲಿ ತುರ್ತುಸ್ಥಿತಿ ಹೇರಲ್ಪಟ್ಟಿದ್ದಾಗ ನಾವು ಸರ್ವಾಧಿಕಾರದ ಹಿಡಿತದಲ್ಲಿ ಸಿಲುಕಿದ್ದೇವೆ ಎನ್ನುವುದು ನಮಗೆ ಗೊತ್ತಿತ್ತು. ಆಗಿನ ಪರಿಸ್ಥಿತಿಯ ಅರಿವು ನಮಗಿತ್ತು. ಆದರೆ ಇಂದು ಪರಿಸ್ಥಿತಿಯು ಹೆಚ್ಚು ಅಪಾಯಕಾರಿ ಯಾಗಿದೆ. ಏಕೆಂದರೆ ಪ್ರಜಾಪ್ರಭುತ್ವದ ನೆರಳಿನಡಿ ಗುಂಪುಗಳಿಂದ ಹತ್ಯೆ, ಪತ್ರಕರ್ತರು ಮತ್ತು ವಿಚಾರವಾದಿಗಳ ಕೊಲೆಗಳು ನಡೆಯುತ್ತಿವೆ ಎಂದರು.

ಅಸಹಿಷ್ಣುತೆಯು ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯದ ವಿರುದ್ಧ ಹೆಚ್ಚುತ್ತಿದೆಯೇ ಹೊರತು ಇತರ ಅಲ್ಪಸಂಖ್ಯಾತ ಸಮುದಾಯಗಳ ವಿರುದ್ಧವಲ್ಲ ಎಂದು ಬೆಟ್ಟು ಮಾಡಿದ ಅವರು, ಭಾರತವು ಕೇವಲ ಹಿಂದೂಗಳಿಗೆ ಸೇರಿದ ಭೂಮಿಯಾಗಿದೆ ಎನ್ನುವ ಪರಿಕಲ್ಪನೆ ಯನ್ನು ಹಿಂದುತ್ವವು ಪ್ರತಿಪಾದಿಸುತ್ತಿದೆ. ಮುಸ್ಲಿಮರು ತಮ್ಮ ಜಾಗವೆಲ್ಲಿದೆಯೋ ಅಲ್ಲಿಗೇ ತೆರಳಬೇಕು ಎನ್ನುವುದು ಅದರ ನಿಲುವಾಗಿದೆ ಎಂದರು.

ಇಷ್ಟೆಲ್ಲ ಹಿಂಸೆ ನಡೆಯುತ್ತಿದ್ದರೂ ಚಿತ್ರತಾರೆಯರು, ಬುದ್ಧಿಜೀವಿಗಳಿಂದ ದಲಿತರವರೆಗೆ ಸಮಾಜದ ವಿವಿಧ ಗುಂಪುಗಳಿಂದ ಪ್ರತಿಭಟನೆಗಳು ಹೆಚ್ಚುತ್ತಿವೆ ಎಂದು ಒತ್ತಿ ಹೇಳಿದ ಅವರು, ಇದು ಸಂಕಷ್ಟಕ್ಕೆ ಗುರಿಯಾಗಿರುವ ಜನರ ಪಾಲಿಗೆ ಆಶಾಕಿರಣವಾಗಿದ್ದು, ಅವರಿಗೆ ಧೈರ್ಯ ನೀಡುತ್ತಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X