Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ...

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ದೆಹಲಿಯಲ್ಲಿ ಈದ್ ಸ್ನೇಹಕೂಟ

ವಾರ್ತಾಭಾರತಿವಾರ್ತಾಭಾರತಿ19 Sept 2017 10:02 PM IST
share
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ದೆಹಲಿಯಲ್ಲಿ ಈದ್ ಸ್ನೇಹಕೂಟ

ಹೊಸದಿಲ್ಲಿ, ಸೆ. 19: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಹೊಸದಿಲ್ಲಿಯಲ್ಲಿ ಇತ್ತೀಚೆಗೆ ಈದ್ ಸ್ನೇಹಕೂಟ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪತ್ರಕರ್ತರು, ಕಾರ್ಯರ್ತರು ಮತ್ತು  ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪಾಪ್ಯುಲರ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಅಬ್ದುಲ್ ವಾಹಿದ್ ಸೇಠ್ ಸಭೆಯನ್ನುದ್ದೇಶಿಸಿ ಮಾತನಾಡಿದರು ಮತ್ತು ಸಂಘಟನೆಯನ್ನು ಪರಿಚಯಿಸಿದರು. ಮುಸ್ಲಿಮರನ್ನು ಅಪರಾಧಿಗಳಂತೆ ಚಿತ್ರಿಸುವ ಮತ್ತು ಫ್ಯಾಶಿಸ್ಟ್ ಶಕ್ತಿಗಳ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುವ ಮಾಧ್ಯಮಗಳಿಂದ ಇಲ್ಲಿನ ಅಲ್ಪಸಂಖ್ಯಾತರು, ಅದರಲ್ಲೂ ವಿಶೇಷವಾಗಿ ಮುಸ್ಲಿಮರು ಕಿರುಕುಳಕ್ಕೊಳಗಾಗುತ್ತಿದ್ದು, ಅದನ್ನು ವಿರೋಧಿಸಬೇಕೆಂದು ಅವರು ಸಭಿಕರಲ್ಲಿ ಮನವಿ ಮಾಡಿದ್ದಾರೆ. ಪಾಪ್ಯುಲರ್ ಫ್ರಂಟ್  ಆಫ್ ಇಂಡಿಯಾ ಸಂಘಟನೆಯು ಕೂಡಾ ಇಂತಹ ಪ್ರಯತ್ನಗಳಿಗೆ ಬಲಿಪಶುವಾಗಿದ್ದು, ಅದೇ ಕಾರಣಕ್ಕಾಗಿ ಭಯೋತ್ಪಾದನಾ ನಂಟು ಕಲ್ಪಿಸಿ ಅಥವಾ ಹೋಲಿಸಿ ಸಂಘಟನೆಯ ಮೇಲೆ ತಪ್ಪಾಗಿ ಸುಳ್ಳಾರೋಪ ಮಾಡಲಾಗುತ್ತಿದೆ. ಹಾದಿಯಾ ಮತಾಂತರ ಪ್ರಕರಣದಲ್ಲಿ ಸಂಘಟನೆಯ ‘‘ದಅ್ವಾ ತಂಡ’’ ಭಾಗಿಯಾಗಿದೆ ಎಂಬ ಎನ್‌ಐಎ ಇತ್ತೀಚೆಗೆ ಮಾಡಿದ ಗುಪ್ತ ವರದಿಯನ್ನು ಆಧರಿಸಿ ಮಾಧ್ಯಮಗಳಲ್ಲಿ ಸಂಘಟನೆಯನ್ನು ಅತ್ಯುಗ್ರವಾಗಿ ಚಿತ್ರಿಸಲಾಗುತ್ತಿದೆ. ಅಲ್ಲದೇ ವರದಿಯು, ಸಂಘಟನೆಯು ಲವ್‌ಜಿಹಾದನ್ನು ಉತ್ತೇಜಿಸುತ್ತಿದೆ ಎಂದು ಚಿತ್ರಿಸಿ ಮುಸ್ಲಿಮ್ ವಿರೋಧಿ ನೀತಿಯನ್ನು ಪ್ರಚಾರಪಡಿಸುವುದನ್ನು ಅವರು ಖಂಡಿಸಿದರು.

ಇದರ ಅನುಸಾರ, ಪಾಪ್ಯುಲರ್ ಫ್ರಂಟ್  ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಇ.ಎಂ.ಅಬ್ದುಲ್ ರಹಿಮಾನ್ ಅವರು ಪ್ರಸ್ತಾಪಿಸಿದ ವಿಷಯದ ಕುರಿತು ಮುಕ್ತ ಚರ್ಚೆ ನಡೆಯಿತು. ದೆಹಲಿಯ ಅಲ್ಪಸಂಖ್ಯಾತ ಸಮಿತಿಯ ಸದಸ್ಯ ಡಾ.ಝಫರುಲ್ ಇಸ್ಲಾಮ್ ಖಾನ್, ಪತ್ರಕರ್ತ ತಸ್ನೀಮ್ ಕೌಸರ್, ಮಾಧ್ಯಮ ನಿರೂಪಕ ಡಾ.ತಸ್ಲೀಮ್ ರಹ್ಮಾನಿ ಮತ್ತು ಇನ್ನಿತರರು ಚರ್ಚೆಯಲ್ಲಿ ಉಪಸ್ಥಿತರಿದ್ದರು. ಅವರು ತಮ್ಮ ಅನುಭವಗಳನ್ನು ಮತ್ತು ಈ ಪ್ರಯತ್ನವನ್ನು ಹೇಗೆ ಎದುರಿಸಬೇಕೆಂಬ ಸಲಹೆಗಳನ್ನು ನೀಡಿದರು.

ಪಾಪ್ಯುಲರ್ ಫ್ರಂಟ್ ಉತ್ತರ ವಲಯಾಧ್ಯಕ್ಷ ಇಸ್ಮಾಯಿಲ್, ದೆಹಲಿ ರಾಜ್ಯಾಧ್ಯಕ್ಷ ಫರ್ವೇಝ್ ಅಹ್ಮದ್ ಮತ್ತು ಅಡ್ವಕೇಟ್ ಮುಹಮ್ಮದ್ ಯೂಸುಫ್ ಮತ್ತು ಇತರರು  ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X