Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೆಲ ರೊಹಿಂಗ್ಯಾ ನಿರಾಶ್ರಿತರನ್ನು ವಾಪಸ್...

ಕೆಲ ರೊಹಿಂಗ್ಯಾ ನಿರಾಶ್ರಿತರನ್ನು ವಾಪಸ್ ಪಡೆಯಲು ಸಿದ್ಧ: ಸೂಕಿ

ವಾರ್ತಾಭಾರತಿವಾರ್ತಾಭಾರತಿ19 Sept 2017 10:34 PM IST
share
ಕೆಲ ರೊಹಿಂಗ್ಯಾ ನಿರಾಶ್ರಿತರನ್ನು ವಾಪಸ್ ಪಡೆಯಲು ಸಿದ್ಧ: ಸೂಕಿ

ನೇಪಿಡಾವ್ (ಮ್ಯಾನ್ಮಾರ್), ಸೆ. 19: ಮ್ಯಾನ್ಮಾರ್ ಸೇನೆಯಿಂದ ದಬ್ಬಾಳಿಕೆಗೆ ಒಳಗಾಗಿರುವ ರೊಹಿಂಗ್ಯಾ ಮುಸ್ಲಿಮ್ ಅಲ್ಪಸಂಖ್ಯಾತರ ವಿಷಯದಲ್ಲಿ ಆ ದೇಶದ ನಾಯಕಿ ಆಂಗ್ ಸಾನ್ ಸೂ ಕಿ ಮೊದಲ ಬಾರಿಗೆ ಮಂಗಳವಾರ ಮೌನ ಮುರಿದಿದ್ದಾರೆ.

ಬಿಕ್ಕಟ್ಟಿನ ಜಾಗತಿಕ ಪರಿಶೀಲನೆಗೆ ತಾನು ಹೆದರುವುದಿಲ್ಲ ಎಂದಿದ್ದಾರೆ.ಅಂತಾರಾಷ್ಟ್ರೀಯ ಸಮುದಾಯವನ್ನು ಸಂತೈಸುವ ಧ್ವನಿಯಲ್ಲಿ ಮಾತನಾಡಿರುವ ಅವರು, ದೇಶದ ಧಾರ್ಮಿಕ ಮತ್ತು ಜನಾಂಗೀಯ ಗುಂಪುಗಳನ್ನು ಒಂದುಗೂಡಿಸಲು ಸಹಾಯ ಮಾಡುವಂತೆ ಅವರು ಹೊರಗಿನ ದೇಶಗಳನ್ನು ಒತ್ತಾಯಿಸಿದ್ದಾರೆ ಹಾಗೂ ಸೇನಾ ದಬ್ಬಾಳಿಕೆಯಿಂದ ಪಲಾಯನಗೈದಿರುವ ರೊಹಿಂಗ್ಯ ಮುಸ್ಲಿಮರ ಪೈಕಿ ಕೆಲವರು ದೇಶಕ್ಕೆ ಮರಳಲು ಅವಕಾಶ ನೀಡುವ ವ್ಯವಸ್ಥೆಯೊಂದನ್ನು ಜಾರಿಗೆ ತರುವ ಭರವಸೆಯನ್ನೂ ನೀಡಿದ್ದಾರೆ.

ಆಗಸ್ಟ್ 25ರಂದು ರಖೈನ್ ರಾಜ್ಯದಲ್ಲಿ ಸಂಘರ್ಷ ಆರಂಭಗೊಂಡ ಬಳಿಕ 4.1 ಲಕ್ಷಕ್ಕೂ ಅಧಿಕ ರೊಹಿಂಗ್ಯ ಮುಸ್ಲಿಮರು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶಕ್ಕೆ ಪಲಾಯನಗೈದಿದ್ದಾರೆ ಎನ್ನಲಾಗಿದೆ.

ಅದೇ ವೇಳೆ, ಮ್ಯಾನ್ಮಾರ್‌ನಲ್ಲಿ ಜನಾಂಗೀಯ ನಿರ್ಮೂಲನೆ ನಡೆಯುತ್ತಿದೆ ಎಂಬುದಾಗಿ ವಿಶ್ವಸಂಸ್ಥೆ ಆರೋಪಿಸಿದೆ.

ದೇಶವಿಲ್ಲದ ರೊಹಿಂಗ್ಯಾಗಳ ಪರವಾಗಿ ಸಾರ್ವಜನಿಕವಾಗಿ ಮಾತನಾಡಲು ವಿಫಲವಾಗಿರುವ ಬಗ್ಗೆ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆಯೂ ಆಗಿರುವ ಸೂಕಿ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿದ್ದವು.

ಆದರೆ, ಮಂಗಳವಾರ ಟಿವಿಯಲ್ಲಿ ದೇಶವನ್ನುದ್ದೇಶಿಸಿ 30 ನಿಮಿಷದ ಭಾಷಣ ಮಾಡಿದ ಸೂ ಕಿ, ತನ್ನ ಟೀಕಾಕಾರನ್ನು ಸಂತೈಸುವ ಪ್ರಯತ್ನಗಳನ್ನು ಮಾಡಿದರು.

 ಹಿಂಸೆಯಿಂದ ಸಂತ್ರಸ್ತರಾದ ‘ಎಲ್ಲಾ’ ಗುಂಪುಗಳಿಗೆ ವಿಷಾದ ವ್ಯಕ್ತಪಡಿಸಿದ ಅವರು, ‘ಪರಿಶೀಲನೆ’ ಪ್ರಕ್ರಿಯೆಯ ಬಳಿಕ ನಿರಾಶ್ರಿತರನ್ನು ‘ಯಾವುದೇ ಸಮಯದಲ್ಲಿ’ ಮರಳಿ ಪಡೆಯಲು ತನ್ನ ದೇಶ ಸಿದ್ಧವಿದೆ ಎಂದು ಅವರು ಈ ಸಂದರ್ಭದಲ್ಲಿ ಘೋಷಿಸಿದರು.

ಆದರೆ, 72 ವರ್ಷದ ನಾಯಕಿಗೆ ತನ್ನ ಸೇನೆಯ ಮೇಲೆ ನಿಯಂತ್ರಣವಿಲ್ಲ ಎಂದು ಅವರ ಬೆಂಬಲಿಗರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X