Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಸೆ.21ರಂದು ‘ವಿಶ್ವ ಆಲ್ಝೈಮರ್...

ಉಡುಪಿ: ಸೆ.21ರಂದು ‘ವಿಶ್ವ ಆಲ್ಝೈಮರ್ ದಿನ’ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ19 Sept 2017 11:11 PM IST
share

ಉಡುಪಿ, ಸೆ.19: ಡಿಮೆನ್ಷಿಯಾ (ಮರೆಗುಳಿತನ) ಇದು ಹೆಚ್ಚಾಗಿ ವೃದ್ಧಾಪ್ಯ ದಲ್ಲಿ ಬರುವ ಗಂಭೀರ ಸ್ವರೂಪದ ಕಾಯಿಲೆ. ಮಾನಸಿಕ ಅಸಮತೋಲನ ಉಂಟುಮಾಡುವ ಈ ಕಾಯಿಲೆಯಲ್ಲಿ ವ್ಯಕ್ತಿಯ ಸ್ಮರಣ ಶಕ್ತಿ ನಶಿಸುವುದಲ್ಲದೆ ವ್ಯಕ್ತಿಯ ಸಾಮಾಜಿಕ, ಪರಸ್ಪರ ಭಾಷೆ, ತೀರ್ಪು, ದೈನಂದಿನ ಚಟುವಟಿಕೆ ಮತ್ತು ಯೋಜನೆಗಳಲ್ಲಿ ದುರ್ಬಲತೆಯನ್ನು ಉಂಟುಮಾಡುತ್ತದೆ. ಡಿಮೆನ್ಷಿಯಾದ ಪರಿಣಾಮಗಳು ವೈಯುಕ್ತಿಕ ಮಾತ್ರವಲ್ಲದೇ, ಕುಟುಂಬದ ಸಾಮಾಜಿಕ ಜೀವನದ ಮೇಲೂ ತೀವ್ರವಾದ ಪರಿಣಾಮಗಳನ್ನು ಉಂಟು ಮಾಡುತ್ತವೆ.

ಈ ಹಿನ್ನೆಲೆಯಲ್ಲಿ ಸೆ.21ರಂದು ‘ವಿಶ್ವ ಆಲ್ಝೈಮರ್ ದಿನ’ದ ಅಂಗವಾಗಿ ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಹಾಗೂ ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಆಶ್ರಯದಲ್ಲಿ ಬೆಳಗ್ಗೆ 10 ಕ್ಕೆ ಬ್ರಹ್ಮಗಿರಿಯ ಐಎಂಎ ಹಾಲ್‌ನಲ್ಲಿ ಉಚಿತ ಕಾರ್ಯಾಗಾ ವೊಂದನ್ನು ಹಮ್ಮಿಕೊಳ್ಳಲಾಗಿದೆ.

ಪ್ರಸ್ತುತ ಭಾರತದಲ್ಲಿ ಸುಮಾರು 3.7 ಮಿಲಿಯ ಜನರು ಆಲ್ಝೈಮರ್ (ಮರೆಗುಳಿ) ಕಾಯಿಲೆಯಿಂದ ಬಳಲುತ್ತಿದ್ದಾರೆ. ಮರೆಗುಳಿತನ ಕಾಯಿಲೆ ಇರುವ ರೋಗಿಯ ಪೋಷಕರಿಗೆ ಈ ಕಾಯಿಲೆ ಬಗ್ಗೆ ಅರಿವು ಇಲ್ಲದಿರುವುದು, ರೋಗಿಯ ಆರೈಕೆಯನ್ನು ಯಾವ ರೀತಿ ಮಾಡಬಹುದು ಎಂಬ ಸೂಕ್ತ ಮಾಹಿತಿ ಇಲ್ಲದೆ ರೋಗಿಯ ಆರೈಕೆ ಮಾಡುವುದರೊಂದಿಗೆ ಬಹುಬೇಗನೆ ಒತ್ತಡಕ್ಕೆ ಒಳಗಾಗುತ್ತಾರೆ. ಇಂಥ ಒತ್ತಡ ಕಡಿಮೆ ಮಾಡಿ ರೋಗಿ ಆರೈಕೆ ಕುರಿತಂತೆ ಸೂಕ್ತ ಮಾಹಿತಿ ನೀಡುವ ಉದ್ದೇಶದಿಂದ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಡಾ.ಎ.ವಿ.ಬಾಳಿಗಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹಾಗೂ ಖ್ಯಾತ ಮನೋರೋಗ ತಜ್ಞ ಡಾ.ಪಿ.ವಿ.ಭಂಡಾರಿ ತಿಳಿಸಿದ್ದಾರೆ.

ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಉಡುಪಿ ಹಿರಿಯ ನಾಗರಿಕರ ಸಂಘದ ಗೌರವಾಧ್ಯಕ್ಷ ಕೆ.ಪಿ.ಕೊಡಂಚ ಹಾಗೂ ಅಧ್ಯಕ್ಷ ಸಿ.ಎಸ್.ರಾವ್ ಭಾಗವಹಿಸಲಿದ್ದಾರೆ. ಡಾ.ಪಿ. ವಿ.ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನೆಯ ನಂತರ ಕಾರ್ಯಗಾರದಲ್ಲಿ ಮರೆಗುಳಿತನ, ಹಿರಿಯ ನಾಗರಿಕರಲ್ಲಿ ಕಂಡುಬರುವ ಇನ್ನಿತರ ಮಾನಸಿಕ ಸಮಸ್ಯೆಗಳು ಮತ್ತು ಹಿರಿಯ ನಾಗರಿಕರ ಆರೈಕೆ ಕುರಿತು ಮಾಹಿತಿ ನೀಡಲಾಗುವುದು.

ಪ್ರಾಯ ಸಂದಂತೆ ಹಿರಿಯ ನಾಗರೀಕರಲ್ಲಿ ಸಕ್ಕರೆ ಕಾಯಿಲೆ, ಬಿಪಿ, ರಕ್ತನಾಳ ಗಳ ಒತ್ತಡ, ಹೃದಯ ಸಂಬಂಧಿ ತೊಂದರೆ ಜೊತೆಗೆ, ಮರೆಗುಳಿತನ, ಖಿನ್ನತೆ, ಸ್ಟ್ರೋಕ್ ಇತ್ಯಾದಿ ನರ-ಮಾನಸಿಕ ರೋಗಗಳು ಕಂಡುಬರುವುದರಿಂದ ಹಿರಿಯ ನಾಗರಿಕರು ಅಂಗಾಂಗಗಳ ಮೇಲಿನ ಹತೋಟಿ ಕಳೆದುಕೊಂಡು ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳಲು ಅಸಮರ್ಥರಾಗುತ್ತಾರೆ. ಈ ಎಲ್ಲಾ ಕಾರಣ ಗಳಿಗಾಗಿ ಸೆ. 21ರಂದು ಆಯೋಜಿಸಿರುವ ಕಾರ್ಯಾಗಾರ ಉಪಯುಕ್ತವಾಗಿದ್ದು, ಇದರ ಸದುಪಯೋಗವನ್ನು ಆಸಕ್ತರು, ಹಿರಿಯ ನಾಗರಿಕರು ಪಡೆದುಕೊಳ್ಳಬೇಕೆಂದು ಡಾ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X