Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಮುಖಂಡ ಸುರೇಶ್‍ಕುಮಾರ್ ಹೇಳಿಕೆಗೆ...

ಬಿಜೆಪಿ ಮುಖಂಡ ಸುರೇಶ್‍ಕುಮಾರ್ ಹೇಳಿಕೆಗೆ ತೀವ್ರ ಆಕ್ಷೇಪ

ಗೌರಿ ಲಂಕೇಶ ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ19 Sept 2017 11:42 PM IST
share

ಶಿವಮೊಗ್ಗ, ಸೆ.19: ಪತ್ರಕರ್ತೆ, ವಿಚಾರವಾದಿ ಹಾಗೂ ಚಿಂತಕಿ ಗೌರಿ ಲಂಕೇಶ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯನ್ನು ಕಾಂಗ್ರೆಸ್ ಪ್ರಾಯೋಜಿತ ಕಾರ್ಯಕ್ರಮ ಎಂದು ಟೀಕಿಸಿರುವ ಬಿಜೆಪಿ ನಾಯಕರಾದ ಆರ್.ಅಶೋಕ್ ಹಾಗೂ ಸುರೇಶ್‍ಕುಮಾರ್ ಹೇಳಿಕೆಯನ್ನು ಗೌರಿ ಹತ್ಯೆ ವಿರೋಧಿ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಮುಖಂಡ ಕೆ.ಪಿ. ಶ್ರೀಪಾಲ್, ಬೆಂಗಳೂರಿನಲ್ಲಿ ಸೆ. 12ರಂದು ನಡೆದ ಹೋರಾಟದ ಸಂದರ್ಭದಲ್ಲಿ ಎಲ್ಲರೂ ಕೂಡ ಸ್ವಯಂ ಪ್ರೇರಿತರಾಗಿ ಹಣ ನೀಡಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನು ಆರ್.ಅಶೋಕ್ ಹಾಗೂ ಸುರೇಶ್‍ಕುಮಾರ್ ಕಾಂಗ್ರೆಸ್ ಪ್ರಾಯೋಜಿತ ಎಂದು ಹೇಳಿರುವುದು ಅವರ ಮನ:ಸ್ಥಿತಿಯನ್ನು ತೋರಿಸುತ್ತದೆ ಎಂದರು.

ಶಿವಮೊಗ್ಗ ನಗರದಲ್ಲಿ ಸೆ.14 ರಂದು ಗೌರಿ ಹತ್ಯೆ ಖಂಡಿಸಿ ನಮ್ಮ ಒಕ್ಕೂಟದಿಂದ ನಡೆದ ಪಂಜಿನ ಮೆರವಣಿಗೆಗೂ ಸ್ಥಳದಲ್ಲಿಯೇ ಹಣವನ್ನು ಸಂಗ್ರಹಿಸಲಾಯಿತು. ಒಟ್ಟು 19,400 ರೂ. ಶೇಖರಣೆಯಾಯಿತು. ದರಲ್ಲಿ 14,400 ರೂ. ಮೈಕ್, ಪ್ಲೆಕ್ಸ್, ಸ್ಟೇಜ್ ಮುಂತಾದವರುಗಳಿಗೆ ವೆಚ್ಚವಾಯಿತು. ಉಳಿದ 5000 ರೂ. ಅಂಬೇಡ್ಕರ್ ಕಾಲನಿಯಲ್ಲಿರುವ ಹಕ್ಕಿಪಿಕ್ಕಿ ನಿವಾಸಿಗಳಿಗೆ ನೀಡಲಾಗುತ್ತದೆ ಎಂದು ಹೇಳಿದರು.

ಗೌರಿ ಲಂಕೇಶ ಬಗ್ಗೆ ಕೆಳ ಸಮುದಾಯದಿಂದ ಎಲ್ಲಾ ವರ್ಗದ ಜನರ ಬೆಂಬಲವಿದೆ. ಇದರಿಂದಾಗಿಯೇ ಬೆಂಗಳೂರು ಹಾಗೂ ಶಿವಮೊಗ್ಗದಲ್ಲಿ ನಡೆದ ಪ್ರತಿಭಟನೆಗಳಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ ಎಂದ ಅವರು, ಸುರೇಶ್‍ಕುಮಾರ್ ಅಂತಹ ಒಬ್ಬ ಸಜ್ಜನಿಕೆಯ ವ್ಯಕ್ತಿ ಸಾವನ್ನು ಸಂಭ್ರಮಿಸುವ ರೀತಿಯಲ್ಲಿ ಮಾತನಾಡಿರುವುದು ಖಂಡನೀಯ. ಬಿಜೆಪಿಯಲ್ಲಿ ತಾನು ಕಳೆದುಹೋಗುತ್ತಿರುವ ಭಯದಿಂದ ಸುರೇಶ್‍ಕುಮಾರ್, ಅಸ್ತಿತ್ವವನ್ನು ತೋರಿಸುವುದಕ್ಕಾಗಿ ಗೌರಿ ಹತ್ಯೆ ವಿರೋಧಿ ಪ್ರತಿಭಟನೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದರು.

ಕೆ.ಎಲ್. ಅಶೋಕ್ ಮಾತನಾಡಿ, ವಿಕೃತ ಮನಸ್ಸು ಮಾತ್ರ ಸಾವನ್ನು ಸಂಭ್ರಮಿಸುತ್ತದೆ. ಇದನ್ನು ಖಂಡಿಸದವರು ಪರೋಕ್ಷವಾಗಿ ಸಾವನ್ನು ಸಮರ್ಥಿಸಿಕೊಡಂತಾಗುತ್ತದೆ. ಸುರೇಶ್‍ಕುಮಾರ್ ಸಜ್ಜನ ರಾಜಕಾರಣಿ ಎನ್ನುವುದನ್ನು ಇಲ್ಲಿಯವರೆಗೆ ತಿಳಿಯಲಾಗಿತ್ತು. ಆದರೆ ಕಾಂಗ್ರೆಸ್ ಪ್ರಾಯೋಜಿತ ಹೋರಾಟ ಎನ್ನುವ ಮೂಲಕ ತಮ್ಮ ಮುಖವಾಡ ಕಳಚಿಕೊಂಡಿದ್ದಾರೆ ಎಂದರು.

ಡಿಎಸ್‍ಎಸ್ ಮುಖಂಡ ಗುರುಮೂರ್ತಿ ಮಾತನಾಡಿ, ಗೌರಿ ಹತ್ಯೆ ವಿರೋಧಿಸಿ ನಡೆದ ಪ್ರತಿಭಟನೆಯನ್ನು ಕಾಂಗ್ರೆಸ್ ಪ್ರಾಯೋಜಿತ ಎನ್ನುವುದಾದರೆ  ಇವರ ನಿಲುವು ಏನು ಎಂಬುದು ಅರ್ಥವಾಗುತ್ತದೆ. ತಮ್ಮ ಕಚೇರಿಯಲ್ಲಿ ಅಂಬೇಡ್ಕರ್ ಹಾಗೂ ಗಾಂಧೀಜಿಯವರ ಭಾವಚಿತ್ರವನ್ನು ಹಾಕದ ಇವರ ಔಚಿತ್ಯವನ್ನು ನಾವು ಪ್ರಶ್ನಿಸಬೇಕಾಗುತ್ತದೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಕೆ.ಎಲ್. ಅಶೋಕ್, ಎನ್.ಮಂಜುನಾಥ್, ಶಿವಕುಮಾರ್, ಚಂದ್ರೇಗೌಡ ಮುಂತಾದವರು ಉಪಸ್ಥಿತರಿದ್ದರು.

ಪ್ರಜ್ಞಾವಂತ ರಾಜಕಾರಣಿ ಸುರೇಶ್‍ಕುಮಾರ್ ಹೇಳಿಕೆ ಖಂಡನಾರ್ಹ. ಗೌರಿ ಹತ್ಯೆಯನ್ನು ಕನಿಷ್ಠ ಖಂಡಿಸಲೂ ಆಗದವರುನ್ನು ಪ್ರಜ್ಞಾವಂತರೆನ್ನಬೇಕೆ ಎನ್ನುವ ಸಂಶಯ ಉಂಟಾಗಿದೆ. ಹತ್ಯೆ ಸಂಭ್ರಮಿಸಿದ್ದನ್ನೂ ಖಂಡಿಸದ ಅವರಲ್ಲಿ ಮಾನವೀಯತೆಯ ಸೆಲೆ ಬತ್ತುತ್ತಿದೆ ಎನ್ನುವುದರ ಅರಿವಾಗುತ್ತಿದೆ. ಗೌರಿ ಸಾವಿನಲ್ಲಿ ಎಲ್ಲವೂ ಅಂತ್ಯವಾಗಬೇಕಿತ್ತು. ಆದರೆ ಅವರು ನೀಡುತ್ತಿರುವ ಪ್ರತಿಕ್ರಿಯೆಯಿಂದ ಅಪರಾಧಿಯಾಗುತ್ತಿದ್ದಾರೆ.

-ಚಂದ್ರೇಗೌಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X