Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಂಗೀತಮಯವಾದ ಮೂರು ಗಂಟೆ..!

ಸಂಗೀತಮಯವಾದ ಮೂರು ಗಂಟೆ..!

ವಾರ್ತಾಭಾರತಿವಾರ್ತಾಭಾರತಿ20 Sept 2017 9:48 AM IST
share
ಸಂಗೀತಮಯವಾದ ಮೂರು ಗಂಟೆ..!

ಚಿತ್ರದ ಹೆಸರು '3ಘಂಟೆ 30ದಿನ 30 ಸೆಕೆಂಡ್'. ಆದರೆ  ಚಿತ್ರದ ಹಾಡುಗಳ ಬಿಡುಗಡೆಗೆ ತೆಗೆದುಕೊಂಡಿದ್ದು ಮೂರು ಗಂಟೆಯ ಕಾಲಾವಧಿ ಮಾತ್ರ. ಮಲ್ಲೇಶ್ವರದ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರದ ಹಾಡುಗಳ‌ ಬಿಡುಗಡೆಯನ್ನು ಆಕರ್ಷಕವಾಗಿ ನೆರವೇರಿಸಲಾಯಿತು.

ಚಿತ್ರದ ನಿರ್ದೇಶಕ ಜಿ.ಕೆ ಮಧುಸೂಧನ್ ಮಾತನಾಡಿ ಸಿನಿಮಾ ನಿರ್ದೇಶಕನಾಗಿ ಇದು ನನಗೆ ಪ್ರಥಮ ಅನುಭವ. ಆದರೆ ಬಣ್ಣದ ಲೋಕ ಹೊಸ ಪರಿಚಯವೇನಲ್ಲ ಎಂದರು. ಚಿತ್ರದ ಒಂದು ಹಾಡನ್ನು ಹೊರತುಪಡಿಸಿ ಎಲ್ಲವನ್ನೂ ನಾನೇ ಬರೆದಿದ್ದೇನೆ. ಒಂದು ಹಾಡನ್ನು ಮಾತ್ರ ಜಯಂತ ಕಾಯ್ಕಿಣಿ ಬರೆದಿದ್ದಾರೆ ಎಂದು ಮಧುಸೂಧನ್ ಹೇಳಿದರು.

ಕಾಯ್ಕಿಣಿಯ ರಚನೆಗಳ ಬಗ್ಗೆ ಹೇಳುತ್ತಾ,  ಸಂಗೀತ ನಿರ್ದೇಶಕ ಹಂಸಲೇಖ ಅವರು " ಕನ್ನಡ ಚಿತ್ರರಂಗದಲ್ಲಿ ಹಾಡು ಬರೆಯುವವರಲ್ಲಿ ಎರಡು ಬಣಗಳಿವೆ. ಒಂದು ‌ಕುರಾ ಸೀ ಮತ್ತು ವಿಜಯನಾರಸಿಂಹರ ಗರಡಿ. ಇನ್ನೊಂದು ಹುಣಸೂರು ಕೃಷ್ಣಮೂರ್ತಿಯವರ ಗರಡಿ. ನಾನು ಹುಣಸೂರು ಕೃಷ್ಣಮೂರ್ತಿಯವರ ಗರಡಿಯವನು. ಜಯಂತ ಕಾಯ್ಕಿಣಿಯದು ಕೂಡ ನಮ್ಮದೇ ಗರಡಿ" ಎಂದರು.

ಇದೇ ವೇಳೆ " ಈ ಚಿತ್ರದ ಸಂಗೀತ ನಿರ್ದೇಶಕ ಶ್ರೀಧರ ಸಂಭ್ರಮ್ ನನ್ನ ಶಿಷ್ಯ. ನನ್ನ ಜನಪ್ರಿಯ ಗೀತೆಗಳಲ್ಲೊಂದಾದ "ಕೂರಕ್ ಕುಕ್ರಳ್ಳಿ ಕೆರೆ.." ಹಾಡಿಗೆ ಪ್ರೋಗ್ರಾಮಿಂಗ್ ಮಾಡಿದವನು ಈತನೇ. ಅದರ ಖ್ಯಾತಿಯಲ್ಲಿ ಈತನಿಗೂ ಪಾಲಿದೆ" ಎಂಬ ಮೆಚ್ಚುಗೆಯ ಮಾತುಗಳನ್ನು ಅವರು ನುಡಿದರು. ಉಳಿದ ಹಾಡುಗಳನ್ನು ಖ್ಯಾತ ನಿರ್ದೇಶಕರಾದ ಭಗವಾನ್, ಜೋ ಸೈಮನ್, ಭಾರ್ಗವ, ಸುನೀಲ್ ಕುಮಾರ್ ದೇಸಾಯಿ ಮೊದಲಾದವರು ಬಿಡುಗಡೆಗೊಳಿಸಿದರು.

ಸಂಗೀತ ನಿರ್ದೇಶಕ ಶ್ರೀಧರ್ ಸಂಭ್ರಮ್ ಹಾಡುಗಳು‌ ಎಲ್ಲರ ಮೆಚ್ಚುಗೆ ಪಡೆದಿರುವುದಕ್ಕೆ ಖುಷಿ ವ್ಯಕ್ತಪಡಿಸುತ್ತಾ ತಾವೇ ಹಾಡಿದ ಗೀತೆಯೊಂದನ್ನು ವೇದಿಕೆಯ ಮೇಲೆ ಪ್ರಸ್ತುತ ಪಡಿಸಿದರು.

ಮಹರ್ಷಿ ಡಾ.‌ಆನಂದ ಗುರೂಜಿ ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ವಿವಿಧ ರೀತಿಯ ನೃತ್ಯ ಪ್ರದರ್ಶನ ಸಮಾರಂಭದ ಆಕರ್ಷಣೆಯಾಗಿತ್ತು. ಚಿತ್ರದ ನಾಯಕ ಅರುಣ್ ಗೌಡ, ನಾಯಕಿ ಕಾವ್ಯಾ ಶೆಟ್ಟಿ, ನಿರ್ಮಾಪಕ ಚಂದ್ರಶೇಖರ್ ಆರ್ ಪದ್ಮಶಾಲಿ ಮತ್ತು ಸಹ ನಿರ್ಮಾಪಕರು ಸೇರಿದಂತೆ  ಬಿ ಟಿವಿ ವಾಹಿನಿಯ ಮುಖ್ಯಸ್ಥ ಕುಮಾರ್, ಸಾಹಿತಿ ವಿ ನಾಗೇಂದ್ರ ಪ್ರಸಾದ್ ಹಾಗೂ ಚಿತ್ರೋದ್ಯಮದ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X