Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಗಾದೆ ಮಾತಿನ ಒಳ ಹೂರಣ ಹುಡುಕುತ್ತಾ...

ಗಾದೆ ಮಾತಿನ ಒಳ ಹೂರಣ ಹುಡುಕುತ್ತಾ...

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ21 Sept 2017 12:12 AM IST
share
ಗಾದೆ ಮಾತಿನ ಒಳ ಹೂರಣ ಹುಡುಕುತ್ತಾ...

ಒಂದು ಭಾಷೆಯ ಸಮೃದ್ಧಿಯಲ್ಲಿ ಗಾದೆ ಮಾತಿನ ಪಾತ್ರ ಬಹುದೊಡ್ಡದು. ಗಾದೆಗಳು ಬದುಕಿನ ಜೊತೆಗೆ ಅವಿನಾಭಾವ ಸಂಬಂಧವನ್ನು ಹೊಂದಿದೆ. ದೈನಂದಿನ ಬದುಕಿನ ಕಷ್ಟಕಾರ್ಪಣ್ಯಗಳ ನಡುವೆ ಗಾದೆಗಳು ಹುಟ್ಟುತ್ತವೆ. ಜನರು ಬದುಕಿನಲ್ಲಿ ಕಲಿತ ಪಾಠದ ಫಸಲು ಅದು. ಗಾದೆಗಳು ಹುಟ್ಟಿರುವುದು ಮಹಾನ್ ಪಂಡಿತರಿಂದಲ್ಲ. ಜನಸಾಮಾನ್ಯರಿಂದ. ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎನ್ನುವ ಒಂದು ಗಾದೆಯೇ ಗಾದೆಗಳ ಹಿರಿಮೆಯನ್ನು ಹೇಳುತ್ತದೆ. ನವ ಕರ್ನಾಟಕ ಪ್ರಕಾಶನವು ಕನ್ನಡ ಕಲಿಕೆಯ ಭಾಗವಾಗಿ ‘ಗಾದೆ ಮಾತು-ಅರ್ಥ ವಿಸ್ತರಣೆ’ ಎನ್ನುವ ಕಿರು ಪುಸ್ತಕವನ್ನು ಹೊರತಂದಿದೆ. ಟಿ. ಎಸ್. ಗೋಪಾಲ್ ಅವರು ಈ ಕೃತಿಯನ್ನು ಬರೆದಿದ್ದಾರೆ. ಹಲವು ಗಾದೆಗಳನ್ನು ಸಂಗ್ರಹಿಸಿ, ಅದರ ವ್ಯಾಖ್ಯಾನವನ್ನು ನೀಡುವ ಪ್ರಯತ್ನ ಮಾಡಿದ್ದಾರೆ.
ಆರಂಭದಲ್ಲಿ ಗಾದೆಯ ಮಹಿಮೆಯನ್ನು ವಿವರಿಸುವ ಪ್ರಯತ್ನವನ್ನು ಮಾಡಿದ್ದಾರೆ. ಗಾದೆಯ ಪ್ರಾಚೀನತೆಯನ್ನು ಸಂಕ್ಷಿಪ್ತವಾಗಿ ಅವರು ಪರಿಚಯಿಸಿದ್ದಾರೆ. ಅದಕ್ಕಿರುವ ಬೇರೆ ಬೇರೆ ಸಾಮಾಜಿಕ ಹಿನ್ನೆಲೆಗಳನ್ನು ವಿವರಿಸಿದ್ದಾರೆ. ‘‘ಗಾದೆ ಬರಿಯ ಉಪದೇಶವಲ್ಲ. ಪ್ರತಿಯೊಂದು ಭಾಷೆಯಲ್ಲೂ ಹೇರಳವಾಗಿರುವ ಗಾದೆಗಳು ಹೇಳದ ವಿಷಯವಿಲ್ಲ. ಗಾದೆ ಒಳಗೊಳ್ಳದ ವಸ್ತು ವಿಷಯ ಯಾವುದೂ ಇರಲಿಕ್ಕಿಲ್ಲ. ಗಾದೆಗಳ ಸಂಗ್ರಹವನ್ನು ‘ಜನಸಾಮಾನ್ಯರ ವಿಶ್ವಕೋಶ’ ಎಂದು ಕರೆಯುವುದರಲ್ಲಿ ಗಾದೆಗಳ ವ್ಯಾಪ್ತಿ, ವಸ್ತು ವೈವಿಧ್ಯ, ಸಂಖ್ಯಾಬಾಹುಳ್ಯ ಹಾಗೂ ಜೀವನ ದರ್ಶನದ ಅರಿವಾಗುತ್ತದೆ’’ ಎಂದು ಲೇಖಕರು ಹೇಳುತ್ತಾರೆ.
ಒಂದು ಭಾಷೆಯೇ ಸಾಯುತ್ತಿರುವಾಗ ಗಾದೆಗಳು ಉಳಿಯುವುದು ಕಷ್ಟ. ಇಂದಿನ ತಲೆಮಾರು ಮಾತನಾಡುವುದಕ್ಕಷ್ಟೇ ಕನ್ನಡ ಎಂದು ತಿಳಿದುಕೊಂಡಂತಿದೆ. ಈ ಕಾರಣದಿಂದಲೇ, ಗಾದೆಯ ಮೂಲಕ ಸಂವಹನದ ಲೋಕ ಅವರಿಗೆ ಪರಿಚಯವಿಲ್ಲ. ಈ ನಿಟ್ಟಿನಲ್ಲಿ ಈ ಪುಟ್ಟ ಕೃತಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಪೋಷಕರಿಗೆ ಎಲ್ಲರಿಗೂ ಪ್ರಯೋಜನವಾಗುವಂತಹದು.

share
-ಕಾರುಣ್ಯಾ
-ಕಾರುಣ್ಯಾ
Next Story
X