Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರ ಆದಾಯ ಇಮ್ಮಡಿಗೊಳಿಸಲು ಸಹಕಾರಿ...

ರೈತರ ಆದಾಯ ಇಮ್ಮಡಿಗೊಳಿಸಲು ಸಹಕಾರಿ ಕ್ಷೇತ್ರವು ಹೊಸ ಉದ್ಯಮಗಳಲ್ಲಿ ತೊಡಗಿಕೊಳ್ಳಬೇಕು: ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ21 Sept 2017 6:27 PM IST
share
ರೈತರ ಆದಾಯ ಇಮ್ಮಡಿಗೊಳಿಸಲು ಸಹಕಾರಿ ಕ್ಷೇತ್ರವು ಹೊಸ ಉದ್ಯಮಗಳಲ್ಲಿ ತೊಡಗಿಕೊಳ್ಳಬೇಕು: ಪ್ರಧಾನಿ

ಹೊಸದಿಲ್ಲಿ,ಸೆ.21: 2022ರ ವೇಳೆಗೆ ರೈತರು ತಮ್ಮ ಆದಾಯವನ್ನು ಇಮ್ಮಡಿ ಗೊಳಿಸಿಕೊಳ್ಳುವಲ್ಲಿ ನೆರವಾಗಲು ಜೇನು ಸಾಕಣೆ ಮತ್ತು ಸಮುದ್ರ ಕಳೆ ಕೃಷಿಯಂತಹ ನೂತನ ಉದ್ಯಮ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಗ್ರಾಮೀಣ ಆರ್ಥಿಕತೆಯನುಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಹಕಾರಿ ರಂಗಕ್ಕೆ ಸೂಚಿಸಿದರು.

‘ಸಹಕಾರಿ ಸ್ಫೂರ್ತಿ’ಯನ್ನು ಜೀವಂತವಾಗಿರಿಸಬೇಕು ಮತ್ತು ಅದನ್ನು ಇನ್ನಷ್ಟು ಬಲಗೊಳಿಸಬೇಕು ಎಂದು ಅವರು ಒತ್ತಿ ಹೇಳಿದರು.

ಇಲ್ಲಿ ಆಯೋಜಿಸಲಾಗಿದ್ದ ಮಹಾರಾಷ್ಟ್ರದ ಸಹಕಾರಿ ಧುರೀಣ ಲಕ್ಮ್ಮಣ ಮಾಧವರಾವ್ ಇನಾಮದಾರ್ ಅವರ ಜನ್ಮಶತಾಬ್ದಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಮೋದಿ, ಭಾರತದಲ್ಲಿ ಸಹಕಾರಿ ಕ್ಷೇತ್ರವು ಬೆಳವಣಿಗೆ ಹೊಂದಿ ಮಿಂಚುವುದು ಸಹಜವಾಗಿದೆ. ಧನಾತ್ಮಕ ಬದಲಾವಣೆಗಳನ್ನು ತರುವಲ್ಲಿ ಸಹಕಾರಿ ರಂಗವು ನೆರವಾಗಬಹುದಾದ ಹಲವಾರು ಕ್ಷೇತ್ರಗಳಿವೆ ಎಂದರು.

 ಸಹಕಾರಿ ಆಂದೋಲನದ ಮೂಲಕ 2022ರ ವೇಳೆಗೆ ರೈತರ ಆದಾಯವನ್ನು ಹೇಗೆ ಇಮ್ಮಡಿಗೊಳಿಸಬಹುದು ಎಂಬ ಬಗ್ಗೆ ಚಿಂತನೆ ನಡೆಸುವಂತೆ ಸಹಕಾರಿ ಸಂಘಗಳಿಗೆ ಸೂಚಿಸಿದ ಅವರು, ಅಭಿವೃದ್ಧಿಯ ಪಥದಲ್ಲಿ ಗ್ರಾಮೀಣ ಭಾರತವು ಹಿಂದುಳಿಯಬಾರದು ಎಂದು ಒತ್ತಿ ಹೇಳಿದರು.

 ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದ ಅವರು, ರೈತರು ಸಗಟು ದರದಲ್ಲಿ ಖರೀದಿ ಮತ್ತು ಮಾರಾಟ ಮಾಡುವಂತಾಗಲು ವ್ಯವಸ್ಥೆಯೊಂದನ್ನು ರೂಪಿಸುವ ಅಗತ್ಯವಿದೆ. ಇಂದು ರೈತರು ತಮಗೆ ಅಗತ್ಯ ಕೃಷಿ ಸಾಮಗ್ರಿಗಳನ್ನು ಚಿಲ್ಲರೆ ದರಗಳಲ್ಲಿ ಖರೀದಿಸುತ್ತಿದ್ದಾರೆ ಮತ್ತು ತಮ್ಮ ಉತ್ಪನ್ನಗಳನ್ನು ಸಗಟು ದರಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಇದನ್ನು ತಿರುಗು ಮುರುಗು ಮಾಡಲು ಸಾಧ್ಯವಿಲ್ಲವೇ? ರೈತರು ಕೃಷಿಗೆ ಅಗತ್ಯ ಸಾಮಗ್ರಿಗಳನ್ನು ಸಗಟು ದರಗಳಲ್ಲಿ ಖರೀದಿಸಿ ತಮ್ಮ ಉತ್ಪನ್ನಗಳನ್ನು ಚಿಲ್ಲರೆ ದರಗಳಲ್ಲಿ ಮಾರಾಟ ಮಾಡಿದರೆ ಯಾರೂ...ಮಧ್ಯವರ್ತಿಗಳು ಸಹ ಅವರನ್ನು ದೋಚಲು ಸಾಧ್ಯವಿಲ್ಲ ಎಂದರು. ಸಹಕಾರಿ ಡೇರಿಗಳೊಂದಿಗೆ ಗುರುತಿಸಿಕೊಂಡಿರುವ ರೈತರು ಈ ತತ್ತ್ವವನ್ನು ಅನುಸರಿಸಿ ಅಭಿವೃದ್ಧಿಗೊಂಡಿರುವುದನ್ನು ಅವರು ಬೆಟ್ಟುಮಾಡಿದರು.

ಸಹಕಾರಿ ರಂಗವು ಮುಖ್ಯವಾಗಿ ಸಕ್ಕರೆ ಮತ್ತು ಹೈನುಗಾರಿಕೆ ಕ್ಷೇತ್ರಗಳಿಗೆ ಸೀಮಿತ ವಾಗಿದೆ ಎಂದ ಅವರು, ಸಹಕಾರಿ ವ್ಯವಸ್ಥೆಯು ನಮ್ಮ ದೇಶಕ್ಕೆ ಸೂಕ್ತವಾಗಿದೆ ಮತ್ತು ಹೊಸ ಉದ್ಯಮಗಳತ್ತ ಗಮನ ಹರಿಸಬೇಕಾದ ಅಗತ್ಯವಿದೆ ಎಂದರು.

ರೈತರಿಗೆ ನೆರವಾಗಲು ಸಹಕಾರಿ ರಂಗವು ತೊಡಗಿಕೊಳ್ಳಬಹುದಾದ ವಿವಿಧ ಕ್ಷೇತ್ರಗಳನ್ನು ಉದಾಹರಿಸಿದ ಪ್ರಧಾನಿ, ಯೂರಿಯಾ ಗೊಬ್ಬರದ ಲೇಪನದಲ್ಲಿ ಬಳಕೆಯಾಗುವ ಬೇವಿನ ಎಣ್ಣೆಗೆ ಹೆಚ್ಚಿನ ಬೇಡಿಕೆಯಿದ್ದು, ಅದರ ತಯಾರಿಕೆಗೆ ಅಗತ್ಯವಾಗಿರುವ ಕಚ್ಚಾ ವಸ್ತುಗಳನ್ನು ರೈತಾಪಿ ಮಹಿಳೆಯರು ಸಂಗ್ರಹಿಸಬಹುದಾಗಿದೆ. ಅದೇ ರೀತಿ ಜೇನು ಸಾಕಣೆಯನ್ನು ಕೈಗೊಳ್ಳುವ ಮೂಲಕ ರೈತರು ‘ಸಿಹಿ ಕ್ರಾಂತಿ’ಯನ್ನು ತರಬಹುದಾಗಿದೆ. ಮೀನುಗಾರರು ಕೆಲಸವಿಲ್ಲದ ದಿನಗಳಲ್ಲಿ ಸಮುದ್ರ ಕಳೆ ಕೃಷಿಯಲ್ಲಿ ತೊಡಗಿಕೊಳ್ಳಬಹುದು. ಸಮುದ್ರ ಕಳೆಗೆ ಔಷಧಿ ತಯಾರಿಕೆ ಕ್ಷೇತ್ರದಲ್ಲಿ ಭಾರೀ ಬೇಡಿಕೆಯಿದ್ದು, ಅದರ ರಸವು ಮಣ್ಣಿನ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X