Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎನ್‌ಜಿಒಗಳ ಜೊತೆಗಿನ ಒಪ್ಪಂದ...

ಎನ್‌ಜಿಒಗಳ ಜೊತೆಗಿನ ಒಪ್ಪಂದ ರದ್ದುಪಡಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Sept 2017 9:30 PM IST
share

ಬೆಂಗಳೂರು, ಸೆ. 21: ಖಾಸಗಿ ಸಂಘ ಸಂಸ್ಥೆ(ಎನ್‌ಜಿಒ)ಗಳೊಂದಿಗೆ ಶಿಕ್ಷಣ ಇಲಾಖೆ ಮಾಡಿಕೊಂಡಿರುವ ನೂತನ ಒಪ್ಪಂದ ರದ್ದುಪಡಿಸಬೇಕು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವರದಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಸಮಾನ ಶಿಕ್ಷಣ್ಕಾಗಿ ಸಮನ್ವಯ ವೇದಿಕೆ ಆಗ್ರಹಿಸಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ, ಕಳೆದ ಎರಡು ಶತಮಾನಗಳಿಂದ ಶೈಕ್ಷಣಿಕ ಸಮಾನತೆಗಾಗಿ ದುಡಿಯುತ್ತಿದ್ದರೂ ಇಂದಿಗೂ ಶಿಕ್ಷಣ ಮರೀಚಿಕೆಯಾಗಿದೆ. ಸಮಾಜದಲ್ಲಿ ಅಸಮಾನತೆಯ ಪಿಡುಗು ವ್ಯಾಪಿಸುತ್ತಿದೆ. ಸಮಾಜವಾದ ಸಿದ್ಧಾಂತಕ್ಕೆ ಬದ್ಧರಾದವರೂ ಖಾಸಗೀಕರಣದ ಕಡೆಗೆ ಸಾಗುತ್ತಿದ್ದಾರೆ. ಇದರಿಂದಾಗಿ ಸಮಾನ ಶಿಕ್ಷಣ ಆಶಯವನ್ನು ಅನುಷ್ಠಾನಗೊಳಿಸಬೇಕಾದ ಸರಕಾರಗಳು ಖಾಸಗೀಕರಣದತ್ತ ಮುಖ ಮಾಡಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ವರಿಗೂ ಸಮಾನ ಶಿಕ್ಷಣದ ಕನಸು ಬರಿ ಕನಸಾಗಿಯೇ ಉಳಿಯುವ ಆತಂಕ ಎದುರಾಗಿದೆ. ಕಾರ್ಪರೇಟ್ ವಲಯದೊಂದಿಗೆ ಕೈಜೋಡಿಸಿ ಶಿಕ್ಷಣವನ್ನು ಮಾರಾಟ ಮಾಡಲಾಗುತ್ತಿದೆ. ಶಿಕ್ಷಣದ ವ್ಯಾಪಾರೀಕರಣ ತೊಲಗಬೇಕು. ರಾಜ್ಯದಲ್ಲಿನ ಸರಕಾರಿ ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸದೃಢಗೊಳಿಸಬೇಕು. ಸರಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ, ಸವಲತ್ತುಗಳು ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವರದಿಯ ಶಿಫಾರಸುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ವೇದಿಕೆ ಸಂಚಾಲಕ ಶ್ರೀಪಾದ ಭಟ್ ಮಾತನಾಡಿ, ಸಚಿವ ತನ್ವೀರ್ ಸೇಠ್ ಇತ್ತೀಚಿಗೆ ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಜೀಂ ಪ್ರೇಮ್‌ಜೀ ಪ್ರತಿಷ್ಠಾನ, ಪ್ರಥಮ್ ಪ್ರತಿಷ್ಠಾನ, ಖಾನ್ ಅಕಾಡಮಿ ಹಾಗೂ ಶಿಕ್ಷಣ ಪ್ರತಿಷ್ಠಾನದೊಂದಿಗೆ ನೂತನ ಒಡಂಬಡಿಕೆ ಮಾಡಿಕೊಂಡಿದ್ದಾರೆ. ಈ ಮೂಲಕ ಖಾಸಗೀಕರಣಕ್ಕೆ ಒತ್ತು ನೀಡಿ ಸರಕಾರಿ ಶಾಲೆಗಳನ್ನು ನಿರ್ನಾಮ ಮಾಡಲು ಹೊರಟಿದ್ದಾರೆ. ಸರಕಾರಿ ಶಾಲೆಗಳಿಗೆ ಸರಿಯಾದ ಮೂಲಭೂತ ಸೌಲಭ್ಯಗಳಿಲ್ಲದಿದ್ದರೂ, ಸಾವಿರಾರು ರೂ.ಗಳು ಖರ್ಚು ಮಾಡಿ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾಜದಲ್ಲಿ ಒಂದು ಕಡೆಗೆ ಶಿಕ್ಷಣದ ಸಬಲೀಕರಣಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಮತ್ತೊಂದು ಕಡೆ ಶಿಕ್ಷಣ ಇಲಾಖೆಯನ್ನು ಕ್ರಮವಾಗಿ ಖಾಸಗೀಕರಣ ಮಾಡುವ ಹುನ್ನಾರ ನಡೆಯುತ್ತಿದೆ. ಪ್ರಸ್ತುತ ದಿನಗಳಲ್ಲಿನ ಸಮಸ್ಯೆಗಳಾಗಿ ತಲೆದೋರಿರುವ ಕೋಮುವಾದ, ಜಾತಿ ತಾರತಮ್ಯ ನಮ್ಮ ಕಲಿಕಾ ಪದ್ಧತಿಯ ದೋಷಗಳಾಗಿವೆ. ಇದನ್ನು ತೊಲಗಿಸಬೇಕಾದರೆ ಸರಕಾರಿ ಶಾಲೆಗಳನ್ನು ಉನ್ನತೀಕರಿಸಿ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಅಗತ್ಯವಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಉಳಿಸಿಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಶಿಕ್ಷಣ ಇಲಾಖೆಯಲ್ಲಿರುವ ಮಾನವ ಸಂಪನ್ಮೂಲವನ್ನೇ ಉಪಯೋಗಿಸಿಕೊಂಡು ಸರಕಾರಿ ಶಾಲೆಗಳನ್ನು ಬಲಪಡಿಸುವತ್ತ ಗಮನಹರಿಸಬೇಕು. ಆದರೆ, ಪ್ರಾಧಿಕಾರದ ವರದಿ ಬಗ್ಗೆ ಧ್ವನಿ ಎತ್ತದ ಸಚಿವರು, ಒಪ್ಪಂದಗಳನ್ನು ಹೆಚ್ಚೆಚ್ಚು ಪ್ರಚುರ ಪಡಿಸುವಲ್ಲಿ ನಿರತರಾಗಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸುಗಳನ್ನು ಈ ಕೂಡಲೇ ಜಾರಿಗೊಳಿಸಬೇಕು. ಸರಕಾರೇತರ ಸಂಸ್ಥೆಗಳೊಂದಿಗೆ ಮಾಡಿಕೊಂಡಿರುವ ಒಪ್ಪಂದಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಎಸ್‌ಡಿಎಂಸಿ ಸಮನ್ವಯ ವೇದಿಕೆ ಮುಖಂಡ ಕುಮಾರ್ ಹಾಗೂ ಮುತ್ತುರಾಜು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X