Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯುತ್ ಕೃಷಿ ಪಂಪುಗಳಿಗೆ 10,000ರೂ....

ವಿದ್ಯುತ್ ಕೃಷಿ ಪಂಪುಗಳಿಗೆ 10,000ರೂ. ವಸೂಲಿ ಕೂಡಲೇ ನಿಲ್ಲಿಸಿ: ಕೃಷಿಕ ಸಂಘ

ವಾರ್ತಾಭಾರತಿವಾರ್ತಾಭಾರತಿ21 Sept 2017 9:48 PM IST
share

ಉಡುಪಿ, ಸೆ.21: ಜಿಲ್ಲೆಯಲ್ಲಿ ವಿದ್ಯುತ್ ಸಂಪರ್ಕಗೊಂಡ ಕೃಷಿ ಪಂಪುಗಳಿಗೆ 2013ರಿಂದ ಪೂರ್ವನ್ವಯವಾಗುವಂತೆ ಇದೀಗ ಮೂಲಭೂತ ಸೌಕರ್ಯದ ಬಾಬ್ತು 10,000 ರೂ.ವನ್ನು ಕೃಷಿಕರು ಪಾವತಿಸಬೇಕೆಂದು ಮೆಸ್ಕಾಂನಿಂದ ಆದೇಶ ಬಂದಿರುವುದನ್ನು ಉಡುಪಿ ಜಿಲ್ಲಾ ಕೃಷಿಕ ಸಂಘ ವಿರೋಧಿಸಿದೆ.

ಈ ಆದೇಶದ ನೊಟೀಸು ಪಡೆದ ಸಣ್ಣ- ಅತಿ ಸಣ್ಣ ರೈತರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ. ಅಸಮಂಜಸ ಹಾಗೂ ನ್ಯಾಯ ಬದ್ಧವಲ್ಲದ ಈ ಆದೇಶವನ್ನು ಯಾವುದೇ ಸಮಜಾಯಿಷಿ ನೀಡದೆ ನಿಷ್ಶರ್ತವಾಗಿ ಹಿಂದೆಗೆದುಕೊಳ್ಳಬೇಕೆಂದು ಕೃಷಿಕ ಸಂಘ ಮೆಸ್ಕಾಂ ಮತ್ತು ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಮೆಸ್ಕಾಂ 4 ವರ್ಷಗಳ ನಂತರ ಈ ವಸೂಲಿಗೆ ಮುಂದಾಗಿರುವುದು ಸರ್ವತಾ ಸಮರ್ಥನೀಯವಲ್ಲ. ಈಗಾಗಲೇ ಅಕಾಲಿಕ, ಸಮರ್ಪಕ ಮಳೆಯಿಂದ ಬೆಳೆ ಇಲ್ಲದೇ ಕೃಷಿಕರು ಕಂಗೆಟ್ಟಿದ್ದಾರೆ. ಈ ಸಂದರ್ಭದಲ್ಲೇ ಏಕಾಏಕಿ 10,000ರೂ. ವನ್ನು ಸಾಮಾನ್ಯ ಕೃಷಿಕರು ಎಲ್ಲಿಂದ ತಂದು ಪಾತಿಸಬೇಕು ಎಂದು ಸಂಘ ಪ್ರಶ್ನಿಸಿದೆ.

ಈ ಆದೇಶವನ್ನು ರಾಜ್ಯ ಸರಕಾರ 2014ರ ಜುಲೈ ತಿಂಗಳಲ್ಲಿ ಹೊರಡಿಸಿದ್ದರೆ, ಅದು ತಡವಾಗಿ ಪ್ರಕಟಗೊಳ್ಳಲು ಕೃಷಿಕರು ಕಾರಣರಲ್ಲ. ಸರಕಾರ ಮಾಡಿರುವ ತಪ್ಪಿಗೆ ಆಗಲೇ ಕ್ರಮ ಕೈಗೊಳ್ಳದೇ ಈಗ ವಸೂಲಿಗೆ ಹೊರಟಿವುದು ಸರಿಯೇ ಎಂದು ಕೇಳಿರುವ ಸಂಘ, ಬೇರೆ ವರ್ಗಗಳ ವಿದ್ಯುತ್ ಗ್ರಾಹಕರನ್ನು ಬಿಟ್ಟು ಕೇವಲ ಕೃಷಿಕರಿಂದ ಮಾತ್ರ ಈ ಮೊತ್ತ ವಸೂಲು ಮಾಡಲು ಕಾರಣವೇನು ಎಂದು ಖಾರವಾಗಿ ಪ್ರಶ್ನಿಸಿದೆ.

ಈಗಾಗಲೇ ಆರ್ಥಿಕವಾಗಿ ಬಸವಳಿದು ಸಾಲ ಮಾಡಿರುವ ಹಿಂದುಳಿದ ಸಣ್ಣ ರೈತರು, ಸಮಸಯೆಗಳಿಗೆ ಪರಿಹಾರದ ದಾರಿ ಕಾಣದೇ ಕಂಗೆಟ್ಟಿರುವಾಗ ಗಾಯದ ಮೇಲೆ ಬರೆ ಎಳೆವಂತೆ ಇದೀಗ ನೋಟೀಸು ತಲುಪಿ, ಒಂದು ತಿಂಗಳೊಳಗೆ 10,000 ರೂ. ಪಾವತಿಸುವಂತೆ ಮೆಸ್ಕಾಂನ ಆದೇಶ ಕೃಷಿಕರ ಕೈಸೇರಿದೆ. ಇದು ರೈತರ ಆತ್ಮಹತ್ಯೆಗೆ ಪ್ರಚೋದನೆ ನೀಡುವಂತಿದೆ ಎಂದು ಕೆಂಡ ಕಾರಿದೆ.

ಕೃಷಿಕರ ಪರ ಎಂದು ಹೇಳಿಕೊಳ್ಳುವ ರಾಜ್ಯ ಸರಕಾರ ಈ ಆದೇಶವನ್ನು ವಾಪಾಸು ಪಡೆಯಬೇಕು. ಬಲವಂತದ ವಸೂಲಿಗೆ ಹೊರಟರೆ ಜಿಲ್ಲಾ ಕೃಷಿಕ ಸಂಘ ಇದರ ವಿರುದ್ಧ ಹೋರಾಟ ನಡೆಸಲಿದೆ ಎಂದು ಸಂಘ ಪ್ರಕಟಣೆಯಲ್ಲಿ ಎಚ್ಚರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X