Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಅಂಡಮಾನ್-ಅದ್ಭುತ ಜೀವಾವಾಸ

ಅಂಡಮಾನ್-ಅದ್ಭುತ ಜೀವಾವಾಸ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ21 Sept 2017 11:52 PM IST
share
ಅಂಡಮಾನ್-ಅದ್ಭುತ ಜೀವಾವಾಸ

ಅಂಡಮಾನ್ ಬಗ್ಗೆ ಹಲವರು ತಮ್ಮ ಅನುಭವಗಳನ್ನು ದಾಖಲಿಸಿದ್ದಾರೆ. ಅಂಡಮಾನ್ ನಿಸರ್ಗ ಕಾರಣಕ್ಕಾಗಿ, ಇತಿಹಾಸ ಕಾರಣಕ್ಕಾಗಿ, ಜೀವವೈವಿಧ್ಯಗಳ ಪ್ರಾಚೀನತೆಗಾಗಿ ಸದಾ ಜನರನ್ನು ಸೆಳೆಯುತ್ತದೆ. ನಿಸರ್ಗದ ತಾಜಾತನಗಳು ಇನ್ನೂ ಅಲ್ಪಸ್ವಲ್ಪ ಉಳಿದಿರುವ ಪ್ರದೇಶವಾಗಿ ನಾವು ಅಂಡಮಾನ್ ದ್ವೀಪವನ್ನು ಗುರುತಿಸುತ್ತೇವೆ. ಅಂಡಮಾನ್‌ನ ಭೇಟಿ ನಮಗೊಂದು ಚೈತನ್ಯಪೂರ್ಣ ಅನುಭವವನ್ನು ನೀಡುತ್ತದೆ. ಅಂಡಮಾನನ್ನು ಅಣು ಅಣುವಾಗಿ ಅನುಭವಿಸಿ, ಕಣ ಕಣವಾಗಿ ಆನಂದಿಸಿದ ಅನುಭವಗಳು, ಮಾನವನ ವಿಕಾಸದ ಇತಿಹಾಸದ ಪಳೆಯುಳಿಕೆಗಳಾಗಿ ಉಳಿದಿರುವ ಜರವಾಗಳ ಭೇಟಿ ನಿಜಕ್ಕೂ ಮುದ ನೀಡುವ ಅನುಭವಗಳು. ಅಂಡಮಾನಿಗೆ ಪ್ರವಾಸ ಹೋಗ ಬಯಸುವವರು ಸ್ವಲ್ಪವಾದರೂ ಅಲ್ಲಿಯ ಜೀವಾವಾಸಗಳನ್ನು ತಿಳಿದುಕೊಂಡು ಹೊರಟರೆ ಖಂಡಿತವಾಗಿಯೂ ಅವರ ಪ್ರವಾಸ ಮತ್ತಷ್ಟು ಅರ್ಥಪೂರ್ಣ ವಾಗುತ್ತದೆ. ಅಂತಹ ಒಂದು ಕಿರು ಪರಿಚಯವನ್ನು ಕೊಡುವ ಪ್ರಾಮಾಣಿಕ ಪ್ರಯತ್ನವನ್ನು ಲೇಖಕಿ ಸುಮಂಗಲಾ ಎಸ್. ಮುಮ್ಮಿಗಟ್ಟಿಯವರು ತಮ್ಮ ‘ಅದ್ಭುತ ಜೀವಾವಾಸ ಅಂಡಮಾನ್’ ಕೃತಿಯಲ್ಲಿ ಮಾಡಿದ್ದಾರೆ. ಇದೊಂದು ಪ್ರವಾಸ ಕಥನವಾಗಿದೆ. ಮುಖ್ಯವಾಗಿ ಪ್ರಕೃತಿಯನ್ನೇ ಕೇಂದ್ರೀಕರಿಸಿ ಲೇಖಕಿ ತನ್ನ ಅನುಭವವನ್ನು ಬರೆದಿದ್ದಾರೆ. ಪೋರ್ಟ್ ಬ್ಲೇರ್‌ನಲ್ಲಿ ಶತಮಾನದ ಸಾಮಿಲ್, ಹೆವಲಾಕ್ ಎಂಬ ಹೆವನ್, ಜರವಾಗಳ ಕಾಡಿನಲ್ಲಿ, ಮ್ಯಾಂಗ್ರೂವ್‌ಗಳ ಮಾಯಾಜಾಲ ಮತ್ತು ಲೈಮ್‌ಸ್ಟೋನ್ ಕೇವ್ಸ್, ಮಡ್ ವಾಲ್ಕೆನೋ ಹೀಗೆ ಅಂಡಮಾನಿನೊಳಗೆ ಬಚ್ಚಿಟ್ಟುಕೊಂಡಿರುವ ಹಲವು ಸೋಜಿಗಗಳನ್ನು ಅವರು ಈ ಕೃತಿಯಲ್ಲಿ ಹಂಚಿಕೊಳ್ಳುತ್ತಾರೆ. ಜರವಾಗಳ ಕುರಿತ ಅಧ್ಯಾಯ, ಲೇಖಕಿಗೆ ಅವರ ಬಗ್ಗೆ ಇರುವ ಕುತೂಹಲ ಕೃತಿಯನ್ನು ಇನ್ನಷ್ಟು ಇಷ್ಟಪಡುವಂತೆ ಮಾಡುತ್ತದೆ. ಭೂಮಿಯ ಅಭಿಮಾನ ಅಂಡಮಾನ್ ಎಂದು ಲೇಖಕಿ ಕರೆಯುವುದರ ಹಿಂದೆ, ನಾವು ಆಧುನಿಕತೆಯ ಕಡೆಗೆ ಸಾಗುತ್ತಾ ಹೋದ ಹಾಗೆ ಕಳೆದುಕೊಳ್ಳುತ್ತಿರುವುದು ಏನನ್ನು ಎನ್ನುವುದನ್ನು ಸೂಚ್ಯವಾಗಿ ತಿಳಿಸುವ ಪ್ರಯತ್ನವನ್ನು ಮಾಡುತ್ತಾರೆ. ಈ ಪ್ರವಾಸ ಕಥನ ಅಂಡಮಾನಿನ ಎಲ್ಲವನ್ನು ಹೇಳುವುದಿಲ್ಲವಾದರೂ, ಅಂಡಮಾನಿನ ಕಡೆಗೆ ಪ್ರವಾಸ ಹೊರಡುವವರಿಗೆ ಇದೊಂದು ಪುಟ್ಟ ಕೈ ಬಿಡಿಯಾಗುತ್ತದೆ. ನವಕರ್ನಾಟಕ ಪ್ರಕಾಶನ ಹೊರತಂದಿರುವ ಕೃತಿಯ ಮುಖಬೆಲೆ 135 ರೂಪಾಯಿ. ಕೃತಿಯ ಒಟ್ಟು ಪುಟಗಳು 144.

share
-ಕಾರುಣ್ಯಾ
-ಕಾರುಣ್ಯಾ
Next Story
X