Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾಳಿ ಮಾಡಬೇಕಾದ ವಿಳಾಸಕ್ಕೆ ಹೋಗದೆ...

ದಾಳಿ ಮಾಡಬೇಕಾದ ವಿಳಾಸಕ್ಕೆ ಹೋಗದೆ ನ್ಯಾಯಾಧೀಶರ ಮನೆಗೆ ನುಗ್ಗಿದ ಸಿಬಿಐ ಅಧಿಕಾರಿಗಳು !

ವಾರ್ತಾಭಾರತಿವಾರ್ತಾಭಾರತಿ21 Sept 2017 11:53 PM IST
share
ದಾಳಿ ಮಾಡಬೇಕಾದ ವಿಳಾಸಕ್ಕೆ ಹೋಗದೆ ನ್ಯಾಯಾಧೀಶರ ಮನೆಗೆ ನುಗ್ಗಿದ ಸಿಬಿಐ ಅಧಿಕಾರಿಗಳು !

ಹೊಸದಿಲ್ಲಿ, ಸೆ. 21: ದಾಳಿ ನಡೆಸಬೇಕಿದ್ದ ಸ್ಥಳದ ಬದಲಾಗಿ ನ್ಯಾಯಾಧೀಶರ ಮನೆಗೆ ನುಗ್ಗಿದ್ದು ಸಿಬಿಐಗೆ ಫಜೀತಿಯನ್ನುಂಟು ಮಾಡಿದೆ. ಅದರ ಅಧಿಕಾರಿಯೋರ್ವರ ವಿರುದ್ಧ ಅತಿಕ್ರಮ ಪ್ರವೇಶ ಮತ್ತು ಇತರ ಆರೋಪಗಳನ್ನು ಜಡಿಯಲಾಗಿದೆ. ಸಿಬಿಐ ಅಧಿಕಾರಿ ಗಳು ಮಂಗಳವಾರ ಭುವನೇಶ್ವರದಲ್ಲಿರುವ ಒಡಿಶಾ ಉಚ್ಚ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಾಧೀಶ ಐ.ಎಂ.ಖುದ್ದೂಸಿ ಅವರ ನಿವಾಸದ ಮೇಲೆ ದಾಳಿ ನಡೆಸಬೇಕಾ ಗಿತ್ತು, ಆದರೆ ಅವರು ಒಡಿಶಾ ನ್ಯಾಯಾಲಯದ ಹಾಲಿ ನ್ಯಾಯಾಧೀಶ ಚಿತ್ತಾ ಅವರ ನಿವಾಸಕ್ಕೆ ನುಗ್ಗಿದ್ದರು.

ತಮ್ಮ ತಪ್ಪಿನ ಅರಿವಾದ ಬಳಿಕ ಅಧಿಕಾರಿಗಳು ಅಲ್ಲಿಂದ ತೆರಳಿದ್ದರು ಎಂದು ಸಿಬಿಐ ಹೇಳಿಕೊಂಡಿದೆ. ಈ ಘಟನೆಯ ಬಳಿಕ ಒಡಿಶಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಡಿಜಿಪಿ ಮತ್ತು ಕಮಿಷನರ್ ಅವರನ್ನು ಕರೆಸಿದ್ದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ವೈ.ಬಿ.ಖುರಾನಿಯಾ ಅವರು ಸಿಬಿಐ ಒಡಿಶಾ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನಿವಾಸವನ್ನು ಪ್ರವೇಶಿಸುವಾಗ ನಿಗದಿತ ಕಾರ್ಯಾಚರಣೆ ವಿಧಿವಿಧಾನಗಳನ್ನು ಅನುಸರಿಸಿರಲಿಲ್ಲ ಎಂದು ತಿಳಿಸಿದರು.

ಸಿಬಿಐ ಅಧಿಕಾರಿ ಪಿ.ಕೆ.ಮಿಶ್ರಾ ಮತ್ತು ಅವರ ತಂಡದ ವಿರುದ್ಧ ಅತಿಕ್ರಮಣ, ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿ ಆರೋಪಗಳು ಸೇರಿದಂತೆ ಐಪಿಸಿಯ ವಿವಿಧ ಕಲಮ್‌ಗಳಡಿ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಸಿಬಿಐ ದಿಲ್ಲಿಯಲ್ಲಿರುವ ಖುದ್ದೂಸಿ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು. ನ್ಯಾಯಾಲಯದಲ್ಲಿರುವ ಪ್ರಕರಣವೊಂದನ್ನು ಲಕ್ನೋದ ಮೆಡಿಕಲ್ ಕಾಲೇಜೊಂದರ ಪರವಾಗಿ ಇತ್ಯರ್ಥಗೊಳಿಸಲು ಖುದ್ದೂಸಿ ಸಂಚು ಹೂಡಿದ್ದರು ಎಂದು ಆರೋಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭ್ರಷ್ಟಾಚಾರದ ಮಧ್ಯವರ್ತಿ ವಿಶ್ವನಾಥ ಅಗರವಾಲ್‌ನ ಭುವನೇಶ್ವರ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿದೆ.

ಏನಿದು ಪ್ರಕರಣ ?

ನಿವೃತ್ತ ನ್ಯಾ.ಐ.ಎಂ.ಖುದ್ದೂಸಿ, ಬಿ.ಪಿ.ಯಾದವ, ಲಕ್ನೋದಲ್ಲಿ ಮೆಡಿಕಲ್ ಕಾಲೇಜು ನಡೆಸುತ್ತಿರುವ ಪ್ರಸಾದ ಶಿಕ್ಷಣ ಸಂಸ್ಥೆಯ ಪಲಾಷ್ ಯಾದವ, ವಿಶ್ವನಾಥ ಅಗರವಾಲ, ಭಾವನಾ ಪಾಂಡೆ ಮತ್ತು ಸುಧೀರ ಗಿರಿ ಅವರ ವಿರುದ್ಧ ಈ ಪ್ರಕರಣ ದಾಖಲಾಗಿದೆ.

ಮೂಲಸೌಕರ್ಯ ಕೊರತೆಯ ಕಾರಣದಿಂದ ಭಾರತೀಯ ವೈದ್ಯಕೀಯ ಮಂಡಳಿಯು ಮುಂದಿನ ಎರಡು ವರ್ಷಗಳವರೆಗೆ ಹೊಸದಾಗಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿರುವ 46 ಮೆಡಿಕಲ್ ಕಾಲೇಜುಗಳಲ್ಲಿ ಲಕ್ನೋದ ಪ್ರಸಾದ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸೇರಿದೆ. ಕಾಲೇಜು ತನ್ನ ವಿರುದ್ಧದ ನಿಷೇಧವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಿದೆ.

ತನ್ನ ಸಂಪರ್ಕಗಳ ಮೂಲಕ ಪ್ರಕರಣದ ತೀರ್ಪು ಕಾಲೇಜಿನ ಪರವಾಗಿ ಹೊರ ಬೀಳುವಂತೆ ಮಾಡುವುದಾಗಿ ಖುದ್ದೂಸಿ ಭರವಸೆ ನೀಡಿದ್ದರೆನ್ನಲಾಗಿದೆ. ಮೀರತ್‌ನ ವೆಂಕಟೇಶ್ವರ ಮೆಡಿಕಲ್ ಕಾಲೇಜಿನ ಸುಧೀರ ಗಿರಿಯ ಮೂಲಕ ಆರೋಪಿ ಬಿ.ಪಿ.ಯಾದವ ನ್ಯಾ.ಖುದ್ದೂಸಿ ಮತ್ತು ಭಾವನಾ ಪಾಂಡೆ ಅವರ ಸಂಪರ್ಕವನ್ನು ಬೆಳೆಸಿದ್ದ. ಸಂಬಂಧಿಸಿದ ಹಿರಿಯ ಸರಕಾರಿ ಅಧಿಕಾರಿಗಳೊಂದಿಗೆ ಸಂಪರ್ಕವಿದೆ ಎಂದು ಹೇಳಿಕೊಂಡಿದ್ದ ಮಧ್ಯವರ್ತಿ ವಿಶ್ವನಾಥ ಅಗರವಾಲ್‌ನನ್ನು ಖುದ್ದೂಸಿ ಅವರೇ ಸಂಚಿನಲ್ಲಿ ಸೇರಿಸಕೊಂಡಿದ್ದರು ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X