Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ವಾರ್ತಾಭಾರತಿ’ ವಿರುದ್ಧದ ಶೋಕಾಸ್...

‘ವಾರ್ತಾಭಾರತಿ’ ವಿರುದ್ಧದ ಶೋಕಾಸ್ ನೋಟಿಸ್ ಗೆ ಹೈಕೋರ್ಟ್ ತಡೆ

ಕೇಂದ್ರ, ರಾಜ್ಯ ಸರಕಾರಗಳಿಗೆ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ22 Sept 2017 8:41 PM IST
share
‘ವಾರ್ತಾಭಾರತಿ’ ವಿರುದ್ಧದ ಶೋಕಾಸ್ ನೋಟಿಸ್ ಗೆ ಹೈಕೋರ್ಟ್ ತಡೆ

ಬೆಂಗಳೂರು, ಸೆ.22: ಸುದ್ದಿಯೊಂದಕ್ಕೆ ಸಂಬಂಧಿಸಿ ‘ವಾರ್ತಾ ಭಾರತಿ’ ಪತ್ರಿಕೆಯ ವಿರುದ್ಧ ಮಂಗಳೂರು ಉಪ ವಿಭಾಗ ಸಹಾಯಕ ಆಯುಕ್ತರು ನೀಡಿದ್ದ ಶೋಕಾಸ್ ನೋಟಿಸ್‌ಗೆ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ತಡೆ ನೀಡಿದೆ.

ಈ ಸಂಬಂಧ ಶೋಕಾಸ್ ನೋಟಿಸ್ ರದ್ದು ಕೋರಿ ‘ವಾರ್ತಾ ಭಾರತಿ’ ಪ್ರಧಾನ ಸಂಪಾದಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ನ್ಯಾಯಪೀಠವು ಶೋಕಾಸ್ ನೋಟಿಸ್‌ಗೆ ತಡೆ ನೀಡಿ,  ಮಂಗಳೂರು ಉಪ ವಿಭಾಗ ಸಹಾಯಕ ಆಯುಕ್ತರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ, ಸಂವಿಧಾನ ತಜ್ಞ ಪ್ರೊ.ರವಿವರ್ಮಕುಮಾರ್ ಅವರು, ವಾರ್ತಾ ಭಾರತಿ ಪತ್ರಿಕೆಯು ಯಾವುದೇ ಕೋಮುಭಾವನೆ ಸೃಷ್ಟಿಸುವಂತಹ  ಸುದ್ದಿಯನ್ನು ಪ್ರಕಟಿಸಿಲ್ಲ. ಆದರೂ ಮಂಗಳೂರು ಕಂದಾಯ ಇಲಾಖೆಯ ಉಪ ವಿಭಾಗ ಸಹಾಯಕ ಆಯುಕ್ತರು, ದಿ ಪ್ರೆಸ್ ಆ್ಯಂಡ್ ರಿಜಿಸ್ಟ್ರೇಷನ್ ಆಫ್ ಬುಕ್ಸ್ ಆ್ಯಕ್ಟ್ 1867ರ ಕಲಂ 14 ಮತ್ತು 15ಕಲಂ 8(ಬಿ) ಅಡಿ ಪತ್ರಿಕೆಯ ಮುದ್ರಣ ಮತ್ತು ಪ್ರಚಾರಕ್ಕಾಗಿ ನೀಡಲಾದ ಅನುಮತಿಯನ್ನು ವಜಾ ಮಾಡಿ, ಪತ್ರಿಕೆಯ ಪರವಾನಿಗೆಯನ್ನು ರದ್ದುಪಡಿಸಲು ಶಿಫಾರಸ್ಸು ಮಾಡಬಾರದೇಕೆ ಎಂದು ಪ್ರಶ್ನಿಸಿ ಪತ್ರಿಕೆಗೆ ನೋಟಿಸ್ ನೀಡಿದ್ದಾರೆ. ಆದರೆ, ಆ್ಯಕ್ಟ್ 1867ರ ಕಲಂ 14 ಮತ್ತು 15ಕಲಂ 8(ಬಿ) ವ್ಯಾಪ್ತಿಯಲ್ಲಿ ನೋಟಿಸ್ ನೀಡಲು ಬರುವುದಿಲ್ಲ. ಅಲ್ಲದೆ, ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಳ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ ಎಂದು ಪೀಠಕ್ಕೆ ಮಾಹಿತಿ ನೀಡಿದರು.

ಹಿರಿಯ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ, ‘ವಾರ್ತಾಭಾರತಿ’ ಪತ್ರಿಕೆಗೆ ನೀಡಿದ್ದ ಶೋಕಾಸ್ ನೋಟಿಸ್‌ಗೆ ತಡೆ ನೀಡಿದರು. ಅಲ್ಲದೆ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಆದೇಶ ಹೊರಡಿಸಿದರು.

ವಿವರ: ಬಂಟ್ವಾಳದಲ್ಲಿ ಕೊಲೆ ಪ್ರಕರಣದ ಆರೋಪಿಯೊಬ್ಬನ ಮನೆಗೆ ಪೊಲೀಸರ ತಂಡ ದಾಳಿ ನಡೆಸಿದ್ದಾಗ ಕುರ್ ಆನ್ ಗ್ರಂಥವನ್ನು ಎಸೆದು ಮದ್ರಸ ಪುಸ್ತಕಗಳನ್ನು ಹರಿದು ಹಾಕಿದ್ದಾರೆ ಎಂಬ ಮನೆಯವರ ಹೇಳಿಕೆಯನ್ನು 'ವಾರ್ತಾ ಭಾರತಿ' ದಿನ ಪತ್ರಿಕೆಯು ಸೆ.3ರಂದು ಪ್ರಕಟಿಸಿತ್ತು. ಆರೋಪವನ್ನು ನಿರಾಕರಿಸಿದ್ದ ಜಿಲ್ಲಾ ಎಸ್ಪಿಯವರ ಹೇಳಿಕೆಯನ್ನು ಸೆ.4ರಂದು ಪ್ರಕಟಿಸಿತ್ತು. ಆದರೆ ಪತ್ರಿಕೆಯ ವರದಿಗಾರ ಹಾಗು ಪ್ರಧಾನ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಿದ ಬಂಟ್ವಾಳ ಪೊಲೀಸರು ವರದಿಗಾರನನ್ನು ಬಂಧಿಸಿದರು. ಅಷ್ಟಕ್ಕೆ ತೃಪ್ತರಾಗದೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ನೇತೃತ್ವದ ವಿಶೇಷ ಘಟಕದ ಪೊಲೀಸ್ ಉಪ ನಿರೀಕ್ಷಕರು ಇದು ಸುಳ್ಳು ಸುದ್ದಿಯಾಗಿದ್ದು, ಪತ್ರಿಕೆಯ ವಿರುದ್ಧ ಯಾಕೆ ಕ್ರಮ ಕೈಗೊಳ್ಳಬಾರದೆಂದು ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪತ್ರಿಕೆಯ ವಿರುದ್ಧ  ಮಂಗಳೂರು ಉಪ ವಿಭಾಗ ಸಹಾಯಕ ಆಯುಕ್ತರು ಶೋಕಾಸ್ ನೋಟಿಸ್ ನೀಡಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X