Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಇಂಧನ ಸಚಿವರಿಂದ ಪಾವಗಡ ಸೋಲಾರ್‍ಪಾರ್ಕ್...

​ಇಂಧನ ಸಚಿವರಿಂದ ಪಾವಗಡ ಸೋಲಾರ್‍ಪಾರ್ಕ್ ಕಾಮಗಾರಿ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ22 Sept 2017 11:52 PM IST
share
​ಇಂಧನ ಸಚಿವರಿಂದ ಪಾವಗಡ ಸೋಲಾರ್‍ಪಾರ್ಕ್ ಕಾಮಗಾರಿ ಪರಿಶೀಲನೆ

ತುಮಕೂರು, ಸೆ.22: ಇಂಧನ ಸಚಿವ ಡಿ.ಕೆ. ಶಿವಕುಮಾರ್ ಶುಕ್ರವಾರ ಜಿಲ್ಲೆಯ ಪಾವಗಡ ತಾಲೂಕಿನಲ್ಲಿ 12ಸಾವಿರ ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಎಷ್ಯಾದ ಅತಿ ದೊಡ್ಡ ಸೋಲಾರ್ ಪಾರ್ಕ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಸೋಲಾರ್ ಪಾರ್ಕ್ ನಿರ್ಮಾಣ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 28ರಂದು ಪಾವಗಡಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಡನೆ ಈ ಪರಿಶೀಲನೆ ನಡೆಸಲಾಗುತ್ತಿದೆ. ಪಾರ್ಕ್ ನಿರ್ಮಾಣದಲ್ಲಿ ಕೈಗೊಂಡಿರುವ ಮೂಲಭೂತ ಸೌಕರ್ಯ, ಮತ್ತಿತರ ಕೆಲಸಗಳ ಪರಿಶೀಲನೆ ನಡೆಸಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದೆಂದು ತಿಳಿಸಿದರು.

ಕಳೆದ 45 ವರ್ಷಗಳಿಂದ ಬರಪೀಡಿತ ತಾಲೂಕೆಂದು ಹಣೆಪಟ್ಟಿ ಕಟ್ಟಿಕೊಂಡಿರುವ ಪಾವಗಡ ತಾಲೂಕಿನಲ್ಲಿ ನಿರ್ಮಾಣ ವಾಗುತ್ತಿರುವ ಸೋಲಾರ್ ಪಾರ್ಕ್‍ನತ್ತ ಅನ್ಯ ರಾಜ್ಯ, ಕೇಂದ್ರವಲ್ಲದೆ ವಿದೇಶೀ ತಜ್ಞರು, ನಾಯಕರು ಚಿತ್ತ ಹರಿಸಿದ್ದಾರೆ.ರೈತರಿಗೆ ಅನ್ಯಾಯವಾಗದಂತೆ ಈ ಒಣಭೂಮಿಯಲ್ಲಿ ಅವರ ಜಮೀನು ಸ್ವಾಧೀನ ಪಡಿಸಿಕೊಳ್ಳದೆ ಕಾಮಗಾರಿ ಕೈಗೊಳ್ಳಲು ಹೇಗೆ ಸಾಧ್ಯವೆಂದು ಎಲ್ಲರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದೆ. ರೈತರನ್ನು ಉಳಿಸಿ ನಿರ್ಮಾಣ ಮಾಡುತ್ತಿರುವ ಸೋಲಾರ್ ಪಾರ್ಕ್ ಯೋಜನೆಯ ಮಾದರಿಯನ್ನು ವೀಕ್ಷಿಸಲು ಕೇಂದ್ರ ಹಾಗೂ ರಾಜ್ಯದ ಸಂಸದರು, ಶಾಸಕರು, ವಿವಿಧ ಜನಪ್ರತಿನಿಧಿಗಳು, ಬ್ಯಾಂಕುಗಳು  ಭೇಟಿ ನೀಡುವ ಆಶಯ ತೋರಿದ್ದಾರೆ ಎಂದರು.

600 ಮೆ.ವ್ಯಾ. ವಿದ್ಯುತ್ ಹರಿಸಲು ಸಿದ್ಧ: ಪಾವಗಡದಲ್ಲಿ 2 ಸಾವಿರ ಮೆ.ವ್ಯಾ.ವಿದ್ಯುತ್ ಉತ್ಪಾದನೆಗಾಗಿ ಕೈಗೊಂಡಿರುವ ಈ ಸೋಲಾರ್ ಪಾರ್ಕ್‍ನಿಂದ ಪ್ರಾರಂಭಿಕ ಹಂತವಾಗಿ 600 ಮೆಗಾ ವ್ಯಾಟ್ ವಿದ್ಯತ್ ಹರಿಸಲು ಸಿದ್ಧತೆಯನ್ನು ಕೈಗೊಳ್ಳಲಾಗಿದೆ. ನಿಗದಿಯಾದ ಸಮಯಕ್ಕೆ ಸರಿಯಾಗಿ ಯೋಜನೆ ಪೂರ್ಣಗೊಂಡು ಜನಾನುಕೂಲಕ್ಕೆ ಅವಕಾಶ ಮಾಡಿಕೊಡುವುದು ಸರಕಾರದ ಉದ್ದೇಶ. ಈ ಸೋಲಾರ್ ಪಾರ್ಕ್‍ಗಾಗಿ ನಿಗದಿಪಡಿಸಿರುವ 12ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚ ಇನ್ನೂ ಹೆಚ್ಚಾಗಬಹುದು. ವಿದ್ಯುತ್ ಕಾಮಗಾರಿ ಹೊರತುಪಡಿಸಿ ಮೂಲಭೂತ ಸೌಕರ್ಯ,ಉದ್ಯೋಗ, ಉದ್ಯೋಗೇತರ ಉದ್ದೇಶಗಳಿಗಾಗಿ ಆಗುವ ವೆಚ್ಚವನ್ನು ಪ್ರತ್ಯೇಕವಾಗಿ ಅಂದಾಜಿಸಲಾಗುವುದು ಎಂದು ಹೇಳಿದರು.

ಪಿಜಿಸಿಎಲ್‍ಗೆ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿ: ಪಿಜಿಸಿಎಲ್ ಸಂಸ್ಥೆಯು 16ಸಾವಿರ ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಾವಗಡ ಸೋಲಾರ್ ಪಾರ್ಕ್‍ನಿಂದ ಜಿಲ್ಲೆಯ ಮಧುಗಿರಿ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಹಾಗೂ ಬೆಂಗಳೂರಿನ ದೇವನಹಳ್ಳಿಗೆ ವಿದ್ಯುತ್ ಮಾರ್ಗ ಕಲ್ಪಿಸುವ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಿದೆ.ಪ್ರತಿ ಯೂನಿಟ್ ವಿದ್ಯುತ್‍ಗೆ ದರ  ನಿಗಧಿಗೊಳಿಸಲು ಟೆಂಡರು ಕರೆಯಲಾಗಿದ್ದು,ವಿದೇಶೀಯರು ಸಹ ಈ ಯೋಜನೆಗೆ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸಂಸದ ಚಂದ್ರಪ್ಪ, ಶಾಸಕ ತಿಮ್ಮರಾಯಪ್ಪ, ಮಾಜಿ ಶಾಸಕ ವೆಂಕಟರಮಣಪ್ಪ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್,ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್, ಮಧುಗಿರಿ ಉಪವಿಭಾಗಾಧಿಕಾರಿ ಡಾ.ವೆಂಕಟೇಶಯ್ಯ, ಕರ್ನಾಟಕ ಸೋಲಾರ್ ಪವರ್ ಡೆವೆಲಪ್‍ಮೆಂಟ್ ಕಾರ್ಪೋರೇಷನ್ ಅಧ್ಯಕ್ಷ ಜಿ.ಎಸ್.ಬಲರಾಮ್ ಮತ್ತಿತರರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X