Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಜಯಲಲಿತಾರ ಆರೋಗ್ಯ ಸ್ಥಿತಿಯ ಬಗ್ಗೆ...

‘ಜಯಲಲಿತಾರ ಆರೋಗ್ಯ ಸ್ಥಿತಿಯ ಬಗ್ಗೆ ನಾವೆಲ್ಲ ಸುಳ್ಳು ಹೇಳಿದ್ದೆವು’

ತಮಿಳುನಾಡು ಸಚಿವನಿಂದ ಕ್ಷಮೆಯಾಚನೆ

ವಾರ್ತಾಭಾರತಿವಾರ್ತಾಭಾರತಿ23 Sept 2017 6:01 PM IST
share
‘ಜಯಲಲಿತಾರ ಆರೋಗ್ಯ ಸ್ಥಿತಿಯ ಬಗ್ಗೆ ನಾವೆಲ್ಲ ಸುಳ್ಳು ಹೇಳಿದ್ದೆವು’

ಚೆನ್ನೈ,ಸೆ.23: ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರು ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಸುಳ್ಳು ಹೇಳಿದ್ದಕ್ಕಾಗಿ ತಮಿಳುನಾಡು ಅರಣ್ಯ ಸಚಿವ ಸಿ.ಶ್ರೀನಿವಾಸನ್ ಅವರು ಜನತೆಯ ಕ್ಷಮೆ ಕೋರಿದ್ದಾರೆ.

ಶುಕ್ರವಾರ ರಾತ್ರಿ ಮದುರೈನಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಅವರು,‘‘ಜಯಲಲಿತಾ ಇಡ್ಲಿಗಳನ್ನು ತಿಂದರು, ಜನರು ಅವರನ್ನು ಭೇಟಿಯಾದರು ಎಂದೆಲ್ಲ ಸುಳ್ಳುಗಳನ್ನು ನಾವು ಹೇಳಿದ್ದೆವು. ಸತ್ಯವೇನೆಂದರೆ ಅವರನ್ನು ಯಾರೂ ನೋಡಿಯೇ ಇರಲಿಲ್ಲ. ಈ ಸುಳ್ಳುಗಳಿಗಾಗಿ ನಾನೀಗ ಜನರ ಕ್ಷಮೆ ಯಾಚಿಸುತ್ತಿದ್ದೇನೆ’’ ಎಂದರು.

ಸರಕಾರ ಮತ್ತು ಆಡಳಿತ ಎಐಎಡಿಎಂಕೆ ಪಕ್ಷದ ಪ್ರತಿಯೊಬ್ಬರೂ ಜಯಲಲಿತಾರ ಬಗ್ಗೆ ಸುಳ್ಳುಗಳನ್ನು ಹೇಳಿಕೊಂಡು ಬಂದಿದ್ದರು. ರಾಷ್ಟ್ರೀಯ ನಾಯಕರಿಗೂ ಜಯಲಲಿತಾ ಭೇಟಿಗೆ ಅವಕಾಶವಿರಲಿಲ್ಲ. ಅವರನ್ನು ಅಪೋಲೊ ಆಸ್ಪತ್ರೆಯ ಮುಖ್ಯಸ್ಥ ಪ್ರತಾಪ ರೆಡ್ಡಿಯವರ ಕೋಣೆಯಲ್ಲಿ ಕುಳಿತುಕೊಳ್ಳುವಂತೆ ಮಾಡಲಾಗುತ್ತಿತ್ತು. ಎಐಎಡಿಎಂಕೆ ಸಚಿವರು ಸಹ ಅದೇ ಕೋಣೆಯಲ್ಲಿ ಕುಳಿತಿರಬೇಕಿತ್ತು ಎಂದ ಅವರು, ಪಕ್ಷದ ಗುಟ್ಟುಗಳು ಸೋರಿಕೆಯಾಗಬಾರೆಂದು ನಾವೆಲ್ಲ ಆಗ ಸುಳ್ಳುಗಳನ್ನು ಹೇಳಿದ್ದೆವು ಎಂದರು.

ಜಯಲಲಿತಾರನ್ನು ಆಸ್ಪತ್ರೆಯ ಅವರ ಕೋಣೆಯಲ್ಲಿ ಅವರ ಆಪ್ತ ಸ್ನೇಹಿತೆ ವಿ.ಕೆ ಶಶಿಕಲಾ ಮಾತ್ರ ಭೇಟಿಯಾಗುತ್ತಿದ್ದರು. ಬೇರೆ ಯಾರಿಗೂ ಅವರನ್ನು ಭೇಟಿಯಾಗುವ ಅವಕಾಶವಿರಲಿಲ್ಲ ಎಂದು ಶ್ರೀನಿವಾಸನ್ ತಿಳಿಸಿದರು.

ಶ್ರೀನಿವಾಸನ್ ಆರೋಪಕ್ಕೆ ಪ್ರತಿಕ್ರಿಯಿಸಿದ ಶಶಿಕಲಾರ ಸಂಬಂಧಿ ಟಿಟಿವಿ ದಿನಕರನ್ ಅವರು, ವೈದ್ಯರ ಸೂಚನೆಯ ಮೇರೆಗೆ ಶಶಿಕಲಾ ಕೇವಲ ಎರಡು ನಿಮಿಷ ಜಯಲಲಿತಾ ಕೋಣೆಗೆ ತೆರಳುತ್ತಿದ್ದರು. ಅ.1ರ ನಂತರ ಅವರಿಗೂ ಅನುಮತಿ ನಿರಾಕಕರಿಸಲಾಗಿತ್ತು ಎಂದು ತಿಳಿಸಿದರು.

 ಅನಾರೋಗ್ಯದಿಂದಾಗಿ ಕಳೆದ ವರ್ಷದ ಸೆ.22ರಂದು ಆಸ್ಪತ್ರೆಗೆ ದಾಖಲಾಗಿದ್ದ ಜಯಲಲಿತಾ ಡಿ.5ರಂದು ಕೊನೆಯುಸಿರೆಳೆದಿದ್ದರು. ಆ ಅವಧಿಯಲ್ಲಿ ಸರಕಾರ ಮತ್ತು ಆಸ್ಪತ್ರೆ ಅವರ ದೇಹಸ್ಥಿತಿಯ ಬಗ್ಗೆ ಅಪರೂಪಕ್ಕೆ ಮಾಹಿತಿಗಳನ್ನು ಪ್ರಕಟಿಸುತ್ತಿದ್ದವು. ಹೆಚ್ಚಿನ ಮಾಹಿತಿಗಳು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದೇ ತಿಳಿಸಿದ್ದವು.

ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧಿಶರ ನೇತೃತ್ವದ ವಿಚಾರಣಾ ಆಯೋಗ ವೊಂದು ಜಯಲಲಿತಾರ ಸಾವಿನ ಕುರಿತು ತನಿಖೆ ನಡೆಸಲಿದೆ ಎಂದು ಸರಕಾರವು ಈಗಾಗಲೇ ಪ್ರಕಟಿಸಿದೆ.

ಜಯಲಲಿತಾ ನಿಧನರಾದಾಗಿನಿಂದಲೂ ಅವರ ಸಾವಿನ ಕುರಿತು ಶಂಕೆಗಳು ವ್ಯಕ್ತವಾಗು ತ್ತಿದ್ದು, ಟೀಕಾಕಾರರು ಈಗ ಜೈಲಿನಲ್ಲಿರುವ ಶಶಿಕಲಾರತ್ತ ಬೆಟ್ಟು ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X