Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರ ಸ್ಮಾರ್ಟ್ ಆದಂತೆ ಪೌರ ಕಾರ್ಮಿಕರು...

ನಗರ ಸ್ಮಾರ್ಟ್ ಆದಂತೆ ಪೌರ ಕಾರ್ಮಿಕರು ಸ್ಮಾರ್ಟ್ ಆಗಬೇಕು: ಶಾಸಕ ಶಾಮನೂರು ಶಿವಶಂಕರಪ್ಪ

ವಾರ್ತಾಭಾರತಿವಾರ್ತಾಭಾರತಿ23 Sept 2017 11:42 PM IST
share
ನಗರ ಸ್ಮಾರ್ಟ್ ಆದಂತೆ ಪೌರ ಕಾರ್ಮಿಕರು ಸ್ಮಾರ್ಟ್ ಆಗಬೇಕು: ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ, ಸೆ.23: ದಾವಣಗೆರೆ ನಗರವು ಸ್ಮಾರ್ಟ್ ಆದಂತೆ ಪೌರ ಕಾರ್ಮಿಕರು  ಸ್ಮಾರ್ಟ್ ಆಗಬೇಕೆಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ನಗರದ ಚೌಕಿಪೇಟೆಯಲ್ಲಿನ ಬಕ್ಕೇಶ್ವರ ದೇವಸ್ಥಾನದ ಆವರಣದಲ್ಲಿನ ಸಮುದಾಯ ಭವನದಲ್ಲಿ ಶನಿವಾರ ಮಹಾನಗರ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ಕೇವಲ 4 ರಿಂದ 5 ಸಾವಿರ ರೂ. ಸಂಬಳ ಪಡೆಯುತ್ತಿದ್ದ ಪೌರ ಕಾರ್ಮಿಕರನ್ನು ಖಾಯಂಗೊಳಿಸಿ ಇದೀಗ 25 ಸಾವಿರ ರೂ. ವೇತನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುಕೂಲ ಮಾಡಿದೆ. ಮುಂದಿನ ದಿನಗಳಲ್ಲಿ ಇನ್ನೂಳಿದ ಪೌರ ಕಾರ್ಮಿಕರನ್ನು ಸಹ ಸರ್ಕಾರ ಖಾಯಂಗೊಳಿಸಲಿದೆ ಎಂದು ಭರವಸೆ ನೀಡಿದರು.

ಹೊರ ದೇಶದಲ್ಲಿನ ಸ್ವಚ್ಛತಾ ಕಾರ್ಯದ ಬಗ್ಗೆ ನಗರ ಪೌರ ಕಾರ್ಮಿಕರಿಗೆ ಅರಿವು ಮೂಡಿಸಲು ಅಧ್ಯಾಯನಕ್ಕಾಗಿ ಪ್ರವಾಸಕ್ಕೆ ಕಳುಹಿಸಲು ಸರ್ಕಾರ ಚಿಂತಿಸಿದೆ. ಅಲ್ಲಿನ ಸ್ವಚ್ಛತಾ ಕಾರ್ಯದಂತೆ ನಗರದಲ್ಲೂ ಕೈಗೊಳ್ಳಲಾಗುವುದು. ಖಾಯಂ ಪೌರ ನೌಕರರಿಗೆ 1 ಪ್ಲಸ್ 1 ಮಾದರಿಯ ಮನೆಗಳನ್ನು ನಿರ್ಮಿಸಿಕೊಡಲು ಕೂಡ ತೀರ್ಮಾನಿಸಿದೆ ಎಂದು ಮಾಹಿತಿ ನೀಡಿದರು.

ಗುತ್ತಿಗೆ ಪೌರ ಕಾರ್ಮಿಕರ ಸಂಘದ ಎಲ್.ಎಂ. ಹನುಮಂತಪ್ಪ ಮಾತನಾಡಿ, ನಗರವನ್ನು ಸ್ವಚ್ಛಗೊಳಿಸುವ ಪೌರ ಕಾರ್ಮಿಕರ ಆರೋಗ್ಯ ಸುಧಾರಣೆಗಾಗಿ ಇಎಸ್‍ಐ ಸೌಲಭ್ಯವನ್ನು ಒದಗಿಸಬೇಕು. ಹಿಂದಿನಿಂದಲೂ ಪೌರ ಕಾರ್ಮಿಕರ ಭವನ ನಿರ್ಮಿಸುವಂತೆ ಒತ್ತಾಯಿಸಿದ್ದರು ಸಹ ಯಾವುದೇ ಪ್ರಯೋಜವಾಗಿಲ್ಲ. ಮುಂದಿನ ದಿನಗಳಲ್ಲಿ ಭವನ ನಿರ್ಮಾಣಕ್ಕೆ ಒತ್ತು ನೀಡಬೇಕು ಎಂದು ಶಾಸಕರಿಗೆ ಮನವಿ ಮಾಡಿದರು.

ಈ ವೇಳೆ ಪೌರ ಕಾರ್ಮಿಕರು ಹಾಗೂ ಪಾಲಿಕೆ ನೌಕರರ ಸಂಘದ ವತಿಯಿಂದ ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಅನಿತಾಬಾಯಿ ಮಾಲತೇಶ್ ಜಾಧವ್, ಉಪಮೇಯರ್ ಮಂಜಮ್ಮ ಹನುಮಂತಪ್ಪ, ಪಾಲಿಕೆ ಸದಸ್ಯೆ ಆಶ್ವಿನಿ ಪ್ರಶಾಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಆರ್. ಶ್ರೀನಿವಾಸ್, ಎಸ್. ಬಸಪ್ಪ, ಜಿ.ಬಿ. ಲಿಂಗರಾಜ್, ದಿಲ್‍ಷಾದ್ ಬೇಕೇಜ್ ಅಹ್ಮದ್, ಪಾಲಿಕೆ ಆಯುಕ್ತ ಬಿ.ಎಚ್. ನಾರಾಯಣಪ್ಪ, ಪಾಲಿಕೆ ಸದಸ್ಯ ಎಂ.ಹಾಲೇಶ್, ಎಲ್.ಡಿ.ಗೋಣೆಪ್ಪ, ಎನ್. ನೀಲಗಿರಿಯಪ್ಪ, ದಿನೇಶ್ ಶೆಟ್ಟಿ, ಮಾಜಿ ಉಪಮೇಯರ್ ರಾಜಶೇಖರ್ ಗೌಡ್ರು, ಕೆ.ಎಸ್. ಗೋವಿಂದರಾಜ್, ರವೀಂದ್ರ ಮಲ್ಲಾಪುರ, ಜಯರಾಂ, ಬಿ.ಎಂ. ಅಶ್ವಿನಿ ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X