Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಸದ ಸಮಸ್ಯೆಯ ಕಗ್ಗಂಟಿಗೆ ಗುತ್ತಿಗೆದಾರರೇ...

ಕಸದ ಸಮಸ್ಯೆಯ ಕಗ್ಗಂಟಿಗೆ ಗುತ್ತಿಗೆದಾರರೇ ಹೊಣೆ: ಎನ್.ಎಸ್.ರಮಾಕಾಂತ

ವಾರ್ತಾಭಾರತಿವಾರ್ತಾಭಾರತಿ24 Sept 2017 6:47 PM IST
share

ಬೆಂಗಳೂರು, ಸೆ. 24: ಬೆಂಗಳೂರು ತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ಪಡೆದವರ ಸ್ವಾರ್ಥ ಹಿತಾಸಕ್ತಿಯಿಂದಾಗಿ ನಗರದಲ್ಲಿ ಕಸದ ಸಮಸ್ಯೆ ಬಗೆಹರಿಯದೆ ಕಗ್ಗಂಟಾಗುತ್ತಿದೆ ಎಂದು ತ್ಯಾಜ್ಯ ವಿಲೇವಾರಿ ತಜ್ಞ ಸಮಿತಿ ಸದಸ್ಯ ಎನ್.ಎಸ್.ರಮಾಕಾಂತ ಆತಂಕ ವ್ಯಕ್ತಪಡಿಸುತ್ತಾರೆ.

ರವಿವಾರ ಹಸಿರು ದಳ, ಘನತ್ಯಾಜ್ಯ ನಿರ್ವಹಣೆ ಕಾರ್ಯಕರ್ತರು, ಶುಚಿ ಮಿತ್ರ ಸೇರಿ ಹಲವು ಸಂಘ, ಸಂಸ್ಥೆಗಳು ನಗರದ ಪುರಭವನದ ಮುಂಭಾಗ ತ್ಯಾಜ್ಯ ವಿಲೇವಾರಿ ಮಾಡುವ ವಾಹನಗಳಿಗೆ ಜಿಪಿಎಸ್ ಹಾಗೂ ಪೌರಕಾರ್ಮಿಕರ ಹಾಜರಾತಿಗೆ ಬಯೋ ಮೆಟ್ರಿಕ್ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕೆಂದು ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಗರದಲ್ಲಿ ಪ್ರತಿದಿನ ಉತ್ಪತ್ತಿಯಾಗುವ ಕಸವನ್ನು ಪರಿಣಾಮಕಾರಿ ವಿಲೇವಾರಿ ಮಾಡಲು ಸರಕಾರ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿದೆ. ಆದರೆ, ಕಸವನ್ನು ವಿಲೇವಾರಿ ಮಾಡುವ ಗುತ್ತಿಗೆದಾರರು ಸರಕಾರದ ಯಾವುದೇ ನಿಯಮಗಳನ್ನು ಪಾಲಿಸದೆ ಕಸದ ಸಮಸ್ಯೆಯನ್ನು ಮತ್ತಷ್ಟು ಕಗ್ಗಾಂಟಾಗಿಸುತ್ತಿದ್ದಾರೆ ಎಂದು ಅವರು ವಿಷಾದಿಸಿದರು.

ಗುತ್ತಿಗೆದಾರರ ಮಾಫಿಯಾ: ಕಸದ ವಿಲೇವಾರಿಗೆ ಬಿಬಿಎಂಪಿ ಪ್ರತೀ ತಿಂಗಳು ಕೋಟ್ಯಂತರ ರೂ.ವೆಚ್ಚ ಮಾಡುತ್ತಿದೆ. ಆದರೆ, ತ್ಯಾಜ್ಯ ಮಾತ್ರ ಪರಿಣಾಮಕಾರಿಯಾಗಿ ವಿಲೇವಾರಿ ಆಗುತ್ತಿಲ್ಲ. ಗುತ್ತಿಗೆದಾರರು ಕಸವನ್ನೇ ಹಣ ಮಾಡುವ ಮಾಫಿಯಾ ಮಾಡಿಕೊಂಡಿರುವುದರಿಂದ ಕಸದ ಸಮಸ್ಯೆ ಬಗೆ ಹರಿಯುತ್ತಿಲ್ಲ ಎಂದು ಹೇಳಿದರು.

ಜಿಪಿಎಸ್ ಅಳವಡಿಕೆ ಅಗತ್ಯ: ಕಸದ ಸಮಸ್ಯೆ ಶಾಶ್ವತವಾಗಿ ಪರಿಣಾಮಕಾರಿಯಾಗಿ ಬಗೆ ಹರಿಯಬೇಕಾದರೆ ಕಸ ವಿಲೇವಾರಿ ಮಾಡುವ ವಾಹನಗಳಿಗೆ ಜಿಪಿಎಸ್ ಯಂತ್ರ ಅಳವಡಿಸುವುದು ಅಗತ್ಯವಾಗಿದೆ. ಆದರೆ, ಗುತ್ತಿಗೆದಾರರು ಇದಕ್ಕೆ ಒಪ್ಪದೆ ಹಳೆಯ ಮಾದರಿಯನ್ನೇ ಅನುಸರಿಸುವಂತೆ ಸರಕಾರದ ಮೇಲೆ ಒತ್ತಡ ಹಾಕಲಾಗುತ್ತಿದೆ. ಸರಕಾರ ಗುತ್ತಿಗೆ ದಾರರ ಒತ್ತಡಕ್ಕೆ ಮಣಿಯಬಾರದು ಎಂದು ಒತ್ತಾಯಿಸಿದರು.

ಗುತ್ತಿಗೆದಾರರು ಪ್ರತೀ ವಾರ್ಡ್‌ಗೆ ಕಸ ವಿಲೇವಾರಿಗಾಗಿ 20 ಕ್ಕೂ ಹೆಚ್ಚು ವಾಹನಗಳನ್ನು ನಿಯೋಜಿಸುವುದಾಗಿ ಹೇಳಿ, ಪ್ರತೀ ವಾಹನಕ್ಕೆ ಪ್ರತಿತಿಂಗಳು 40 ಸಾವಿರ ರೂ.ಹಣವನ್ನು ಪಡೆಯಲಾಗುತ್ತದೆ. ಆದರೆ, ಪ್ರತೀ ವಾರ್ಡ್‌ಗೆ ಕೇವಲ 10ವಾಹನಗಳನ್ನು ಮಾತ್ರ ನಿಯೋಜಿಸಿ ಸರಕಾರದ ಹಣವನ್ನು ದೋಚಲಾಗುತ್ತಿದೆ. ಇದನ್ನು ತಡೆಯಬೇಕಾದರೆ ಪ್ರತಿ ವಾಹನಕ್ಕೆ ಜಿಪಿಎಸ್ ಯಂತ್ರ ಅಳವಡಿಕೆ ಅಗತ್ಯವಿದೆ ಎಂದರು.

ಬಯೋವೆುಟ್ರಿಕ್ ಪದ್ಧತಿ ಜಾರಿ: ಪ್ರತೀ ವಾರ್ಡ್‌ಗೂ ಇಷ್ಟು ಪೌರಕಾರ್ಮಿಕರನ್ನು ನೇಮಿಸಬೇಕೆಂದು ಕಡ್ಡಾಯ ಮಾಡಲಾಗಿದೆ. ಅದರಲ್ಲೂ ಗುತ್ತಿಗೆ ದಾರರು ವಂಚಿಸುತ್ತಿದ್ದಾರೆ. ದಾಖಲಾತಿ ಪುಸ್ತಕದಲ್ಲಿ ಹೆಚ್ಚು ಮಂದಿಯ ಹೆಸರನ್ನು ನಮೂಧಿಸಿ, ಕೆಲವರಿಂದ ಮಾತ್ರ ಕೆಲಸವನ್ನು ಮಾಡಿಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಾದರೆ ಪ್ರತಿ ವಾರ್ಡ್‌ನಲ್ಲೂ ಬಯೋಮೆಟ್ರಿಕ್ ಪದ್ಧತಿ ಜಾರಿಯಾಗಲಿ ಎಂದು ಅವರು ಹೇಳಿದರು.

ಪ್ರತಿಭಟನೆಯಲ್ಲಿ ಹಸಿರು ದಳದ ಸೌಭಾಗ್ಯ, ಕುಮಾರ್ ಜಾಂಗೀಧಾರ್ ಸೇರಿದಂತೆ ಬೆಂಗಳೂರು ನಗರದ ನೂರಾರು ನಾಗರಿಕು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X