Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾತು-ಕೃತಿಯಲ್ಲಿ ಸತ್ಯವಿದ್ದರೆ...

ಮಾತು-ಕೃತಿಯಲ್ಲಿ ಸತ್ಯವಿದ್ದರೆ ಶಾಶ್ವತವಾಗಿ ಉಳಿಯುತ್ತದೆ: ಲಕ್ಷ್ಮೀಶ ತೋಳ್ಪಾಡಿ

ವಾರ್ತಾಭಾರತಿವಾರ್ತಾಭಾರತಿ24 Sept 2017 8:29 PM IST
share

ಬೆಂಗಳೂರು, ಸೆ. 24: ಪಿಸುಮಾತುಗಳಲ್ಲಿ ಸತ್ಯವಿರುತ್ತದೆ. ಅಂತಹ ಪಿಸುಮಾತುಗಳಿಂದ ಪುಸ್ತಕ ಬರೆಯಲು ಸಾಧ್ಯವಿಲ್ಲ. ಆದರೆ, ಮಾತು ಮತ್ತು ಕೃತಿಗಳಲ್ಲಿ ಸತ್ಯವಿದ್ದರೆ ಮಾತ್ರ ಶಾಶ್ವತವಾಗಿ ಉಳಿಯಲಿದೆ. ಸತ್ಯವನ್ನು ಮುಚ್ಚಿಡುವ ಪ್ರಯತ್ನ ಮಾಡಿದರೆ, ನಿರ್ಮಾಣ ಮಾಡಿದ್ದೆಲ್ಲವೂ ಕಳಚಿ ಬೀಳುತ್ತದೆ ಎಂದು ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ವಾಡಿಯಾ ಸಭಾಂಗಣದಲ್ಲಿ ಅಂಕಿತ ಪುಸ್ತಕ ಪ್ರಕಾಶನದಿಂದ ಆಯೋಜಿಸಿದ್ದ ಜೋಗಿ ಅವರ ‘ಉಳಿದ ವಿವರಗಳು ಲಭ್ಯವಿಲ್ಲ’, ಗುರು ಪ್ರಸಾದ ಕಾಗಿನೆಲೆ ಅವರ ‘ಹಿಜಾಜ್’ ಹಾಗೂ ಗೋಲಾಲಕೃಷ್ಣ ಕುಂಟಿನಿ ಅವರ ‘ಅಪ್ಪನ ನೀಲಿ ಕಣ್ಣು’ ಕಥಾ ಸಂಕಲನಗಳ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯಾವುದೇ ಒಂದು ವಿಷಯವನ್ನು ಮಾತನಾಡಬೇಕಾದರೆ ನಮ್ಮ ಅಂತರಂಗ ಒಪ್ಪಿಕೊಳ್ಳುವಂತಿರಬೇಕು. ಆಗ ಮಾತ್ರ ಸತ್ಯದ ಪರವಾದ, ನ್ಯಾಯದ ಕಡೆಗೆ ಸಾಗಲು ಸಾಧ್ಯವಾಗುತ್ತದೆ. ಅದೇ ರೀತಿ, ಲೇಖಕರ ಬರಹದಲ್ಲಿ ಸತ್ಯವನ್ನು ಒಳಗೊಂಡಿರಬೇಕು. ಅನಗತ್ಯ ಕಲ್ಪನೆಗಳಿಗೆ ಸೀಮಿತ ಮಾಡಿರಬಾರದು ಎಂದು ಹೇಳಿದರು.

ಜೀವ ಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಜೀವ ಶೂನ್ಯದಲ್ಲಿ ತೊಡಗಿಸಿಕೊಳ್ಳುವುದು ಸಹ ತಿಳಿದಿರಬೇಕು. ಪ್ರತಿ ಆರಂಭದ ಹಿಂದೆ ಅಂತ್ಯವಿರುತ್ತದೆ. ಪ್ರತಿ ಕೆಲಸ ಹಾಗೂ ಪ್ರಯೋಗ ಮಾಡುವಾಗ ಹಿಂತೆಗೆದುಕೊಳ್ಳುವ ಗುಣಗಳನ್ನು ತಿಳಿದಿರಬೇಕು. ಜೀವನದಲ್ಲಿ ಭಾವಿಸುವುದಕ್ಕಿಂತ ಕತೆ, ಕಾದಂಬರಿಗಳು ಬೇರೊಂದು ಚೆಲವನ್ನು ನೀಡುತ್ತವೆ. ಸಂಬಂಧಗಳ ಜಡ ಸಂಗತಿಗಳನ್ನು ಮುರಿಯುವ ಜತೆಗೆ ಹೊಸ ಸಂಗತಿಗಳನ್ನು ರೂಪಿಸುವ ವಿಶೇಷತೆಯನ್ನು ಕತೆಗಳು ಹೊಂದಿರುತ್ತವೆ ಎಂದು ತಿಳಿಸಿದರು.

ಜೋಗಿ ಬರಹದಲ್ಲಿ ಹೊಸ ಹೊಸ ತಿರುವುಗಳನ್ನು ಪಡೆಯುವ ಪ್ರಯೋಗ ಮತ್ತು ಪರೋಕ್ಷವಾಗಿ ಏನು ಹೇಳಬೇಕು ಅದನ್ನು ಕಣ್ಣಿಗೆ ಕಟ್ಟುವಂತೆ ಬರೆದಿರುತ್ತಾರೆ. ಕುಂಟಿನಿ ಕತೆಗಳಲ್ಲಿ ಜವಾಬ್ದಾರಿ ಬೇರೊಬ್ಬರು ಹೇಳುವುದಲ್ಲ ನಮಗೆ ನಾವೇ ಅರಿತುಕೊಳ್ಳುವುದು ಎಂಬುದನ್ನು ತಿಳಿಸುತ್ತವೆ. ಈ ರೀತಿಯ ಹೊಸ ಪ್ರಯೋಗಗಳಿಂದಲೇ ಉಪ ಸಂಹಾರ ಕಲಿಯುವುದಾಗಿದೆ ಎಂದು ಶ್ಲಾಘಿಸಿದರು.

ಚಿತ್ರ ನಟ ಉಪೇಂದ್ರ ಮಾತನಾಡಿ, ಪುಸ್ತಕಗಳಿಂದ ಸೃಜನ ಶೀಲತೆ, ಪ್ರತಿಭೆ ಬೆಳೆಯಲು ಸಹಕಾರಿಯಾಗುತ್ತದೆ. ಹಿಂದೆ ಚಂದಮಾವ ಕಥೆಗಳನ್ನು ಓದಿಕೊಂಡು ಗ್ರಾಮೀಣ ಪ್ರದೇಶದ ಸಂಸ್ಕೃತಿ, ಹಳ್ಳಿಗಳ ಕಲ್ಪನೆ, ಪ್ರೀತಿ, ಸ್ನೇಹವನ್ನು ಅನುಭವಿಸುತ್ತಿದ್ದೆವು. ಅಲ್ಲದೆ, ನಮ್ಮೆಳಗೆ ಬೃಹತ್ತಾದ ಕಲ್ಪನೆಯನ್ನು ಪುಸ್ತಕಗಳು ಬೆಳೆಸುತ್ತವೆ. ಹೀಗಾಗಿ, ಪುಸ್ತಕಗಳು ಎಂದಿಗೂ ಶಾಶ್ವತವಾದುದಾಗಿದೆ ಎಂದು ಹೇಳಿದರು.

ಸಾಹಿತಿ ಕೆ. ಸತ್ಯನಾರಾಯಣ ಮಾತನಾಡಿ, ಕಾಗಿನೆಲೆ ಕತೆಯಲ್ಲಿ ವಲಸೆಯ ಅಸ್ಮಿತೆ, ತಂತ್ರಜ್ಞಾನ ಮತ್ತು ರಾಜಕೀಯ ಮೂರು ಕೂಡ ಒಂದರಲ್ಲಿ ಮತ್ತೊಂದು ಸೂಕ್ಷ್ಮವಾಗಿ ಪ್ರಭಾವ ಬೀರುತ್ತವೆ ಎಂಬುದನ್ನು ತಿಳಿಸುವ ಹಾಗೂ ಅನುಭವ ಶೋಧನಾ ಜವಾಬ್ದಾರಿ ಹೊಂದಿರುವ ಗಂಭೀರ ಕಾದಂಬರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಚಿತ್ರ ನಿರ್ದೇಶಕ ಟಿ.ಎನ್. ಸೀತಾರಾಂ, ಬಿ.ಎಸ್. ಲಿಂಗದೇವರು, ಲೇಖಕರಾದ ಜೋಗಿ, ಗೋಪಾಲ ಕೃಷ್ಣ ಕುಂಟಿನಿ ಹಾಗೂ ಗುರು ಪ್ರಸಾದ ಕಾಗಿನೆಲೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X