Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಣ್ಣಿಗೆ ಕಟ್ಟಿದ ಮೈಸೂರು ಮಹಾರಾಜರ...

ಕಣ್ಣಿಗೆ ಕಟ್ಟಿದ ಮೈಸೂರು ಮಹಾರಾಜರ ಆಳ್ವಿಕೆಯ ಗತಕಾಲದ ಚಿತ್ರಣ

ವಾರ್ತಾಭಾರತಿವಾರ್ತಾಭಾರತಿ24 Sept 2017 11:33 PM IST
share
ಕಣ್ಣಿಗೆ ಕಟ್ಟಿದ ಮೈಸೂರು ಮಹಾರಾಜರ ಆಳ್ವಿಕೆಯ ಗತಕಾಲದ ಚಿತ್ರಣ

ಕಡೂರು, ಸೆ. 24: ರಂಭಾಪುರಿ ಜಗದ್ಗುರುಗಳ ದಸರಾ ದರ್ಬಾರ್ ವಿಶಿಷ್ಟತೆಯಿಂದ ಕೂಡಿದ್ದರೆ ಆ ದರ್ಬಾರ್ ಕಾರ್ಯಕ್ರಮದೊಳಗೆ ನಡೆಯುವ ನಝರ್ ಕಾರ್ಯಕ್ರಮ ವೈಭವಯುತ ಮತ್ತು ಮೈಸೂರು ಮಹಾರಾಜರ ಆಳ್ವಿಕೆಯ ಗತಕಾಲದ ಚಿತ್ರಣವನ್ನು ಮತ್ತೊಮ್ಮೆ ಕಣ್ಣಿಗೆ ಕಟ್ಟಿಕೊಡುತ್ತದೆ.

ಒಂಭತ್ತು ದಿನಗಳ ಕಾಲ ನಡೆಯುವ ದಸರಾ ದರ್ಬಾರ್ ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ನಡೆಯುವ ನಝರ್ ಕಾರ್ಯಕ್ರಮ ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅರಮನೆಯಲ್ಲಿ ರಾಜರ ರಕ್ಷಣೆ ಮತ್ತು ಅರಮನೆಯ ರಕ್ಷಣೆ ಹಿನ್ನೆಲೆಯಲ್ಲಿ ಹುಟ್ಟಿದ ಕಾರ್ಯಕ್ರಮ ವಿಶೇಷವಾಗಿ ಇದು ಗುರುವಂದನೆ ಅರ್ಥಾತ್ ರಾಜವಂದನೆ ಎಂದೇ ಕರೆಯಬಹುದು.

ನವರಾತ್ರಿಯ ಸಂದರ್ಭದಲ್ಲಿ ನವಶಕ್ತಿಗಳ ಆರಾಧನೆ ಮಾಡಿ ದುಷ್ಟತನದ ಸಂಹಾರ ಮಾಡಿ ನಡೆಯುವ ಪೂಜಾ ಕೈಂಕರ್ಯಗಳು ಹಾಗೂ ಸಭಾ ಕಾರ್ಯಕ್ರಮಗಳ ಬಳಿಕ ಈ ನಝರ್ ನಡೆಯುತ್ತದೆ. ಇದನ್ನು ನೋಡುವುದೇ ಕಣ್ಣಿಗೆ ಸೊಬಗು. ಇತಿಹಾಸದ ಮರುಕಳಿಸಿದ ವೈಭವವೇ ನಮ್ಮ ಕಣ್ಣ ಮುಂದೆ ಕಟ್ಟಿದಂತೆ ಆಗುತ್ತದೆ.

ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಮೊದಲು ರಂಭಾಪುರಿ ಶಾಖಾ ಮಠಗಳ ವಿವಿಧ ಶಿವಾಚಾರ್ಯರುಗಳು ಎರಡು ಕೈಗಳನ್ನು ಕಟ್ಟಿ ಶಿರಬಾಗಿ ಬೆನ್ನುಬಾಗಿ ಗುರುವಂದನೆಯನ್ನು ಸಲ್ಲಿಸುತ್ತಾರೆ. ನಂತರ ಪೀಠದ ಆಡಳಿತಾಧಿಕಾರಿ ಗೌರವ ಸಮರ್ಪಣೆ ಮಾಡುತ್ತಾರೆ. ಬಳಿಕ ಪೀಠದ ಏಜೆಂಟರುಗಳು ಅಂದರೆ ದಸರಾ ದರ್ಬಾರ್ ಕಾರ್ಯಕ್ರಮ ನಡೆಯುವ ಬಗ್ಗೆ ವಿವಿಧ ಗ್ರಾಮಗಳು ಮತ್ತು ಸ್ಥಳಗಳಲ್ಲಿ ಜನರಿಗೆ ಮಾಹಿತಿ ಒದಗಿಸುವ ಕೆಲಸವೇ ಈ ಏಜೆಂಟರದ್ದು. ಅವರಿಂದ ಜಗದ್ಗುರುಗಳಿಗೆ ನಝರ್ ಸಮರ್ಪಣೆ ಆಗುತ್ತದೆ. 

ಇವರ ನಝರ್ ಬಳಿಕ ರಕ್ಷಣೆ ಮಾಡುವ ಈಟಿಧಾರಿಗಳು, ಖಡ್ಗಧಾರಿಗಳಾದ ಮಂತ್ರಿಗಳು, 21 ಬಂದೂಕುಧಾರಿಗಳಿಂದ ಜಗದ್ಗುರುಗಳಿಗೆ ಗೌರವ ಸಮರ್ಪಿಸುವ ನಝರ್ ನಡೆಯುತ್ತದೆ. ವಾಸ್ತವವಾಗಿ ಬಂದೂಕುಧಾರಿಗಳು ತೋಪನ್ನು ಸಿಡಿಸಿ ನಝರ್ ಸಮರ್ಪಿಸಬೇಕು. ಆದರೆ ಸುರಕ್ಷತೆಯ ದೃಷ್ಟಿಯಿಂದ ತೋಪನ್ನು ಸಿಡಿಸದೆ ಕೇವಲ ಬಂದೂಕುಧಾರಿಗಳಿಂದ ನಝರ್ ಆರ್ಪಿಸಲಾಗುತ್ತದೆ. ಆ ಬಳಿಕ ಗುರುಮನೆಯ ಕೆಲಸಗಾರರು, ಹಿರಿಯರು, ಆರತಿ ಹಿಡಿದ ಮುತ್ತೈದೆಯರು, ರಾಜಕಾರಣಿಗಳು, ಗಣ್ಯರು, ಮಹಾತ್ಮರ ಹಾಗೂ ಪೌರಾಣಿಕ, ಐತಿಹಾಸಿಕ ವ್ಯಕ್ತಿಗಳ ವೇಷಧಾರಿಗಳು ಹೀಗೆ ಪ್ರತಿಯೊಬ್ಬರಿಂದಲೂ ನಝರ್ ಸಮರ್ಪಣೆ ನಡೆಯುತ್ತದೆ.

ಇಷ್ಟೇ ಆದರೆ ಸಾಲದು ಪೀಠದ ಸಾಕು ಪ್ರಾಣಿಗಳಿಂದಲೂ ನಝರ್ ಸರ್ಮಪಣೆ ಕಾರ್ಯ ನಡೆಯುತ್ತದೆ. ಅದರಂತೆ ಬಾಳೇಹೊನ್ನೂರು ರಂಭಾಪುರಿ ಮಠದ ಆನೆ ವೇದಿಕೆಯತ್ತ ಸಾಗಿ ಬಂದು ಜಗದ್ಗುರುಗಳಿಗೆ ತನ್ನ ಸೊಂಡಿಲನ್ನು ಎತ್ತಿ ನಮಸ್ಕರಿಸಿ ಮಂಡಿಯೂರಿ ನಝರ್ ಸರ್ಮಪಣೆ ಮಾಡುವ ದೃಶ್ಯವಂತೂ ನೆರೆದಿದ್ದ ಜನರ ಕಣ್ಣಿಗೆ ಸಂಭ್ರಮವನ್ನು ತರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X