Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಯಲಲಿತಾ ಸಾವಿನ ಬಗ್ಗೆ ತನಿಖೆಗೆ ನಿವೃತ್ತ...

ಜಯಲಲಿತಾ ಸಾವಿನ ಬಗ್ಗೆ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಕ

ವಾರ್ತಾಭಾರತಿವಾರ್ತಾಭಾರತಿ25 Sept 2017 8:35 PM IST
share
ಜಯಲಲಿತಾ ಸಾವಿನ ಬಗ್ಗೆ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇಮಕ

ಚೆನ್ನೈ, ಸೆ.25: ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಸಾವಿನ ಕುರಿತು ತನಿಖೆ ನಡೆಸಲು ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎ.ಆರ್ಮುಗಸಾಮಿ ಅವರನ್ನು ರಾಜ್ಯ ಸರಕಾರ ನೇಮಿಸಿದೆ.

ಎಐಎಡಿಎಂಕೆಯ ಉಭಯ ಬಣಗಳ ವಿಲೀನ ಪ್ರಕ್ರಿಯೆ ಸಂದರ್ಭ ‘ಅಮ್ಮ’ ನಿಧನದ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂಬ ಷರತ್ತನ್ನು ಪನ್ನೀರ್‌ಸೆಲ್ವಂ ಮಂಡಿಸಿದ್ದರು.

ಸುದೀರ್ಘಾವಧಿಯ ಅನಾರೋಗ್ಯದ ಬಳಿಕ ಕಳೆದ ವರ್ಷದ ಡಿಸೆಂಬರ್ 5ರಂದು ಜಯಲಲಿತಾ ಹೃದಯಾಘಾತದಿಂದ ನಿಧನರಾಗಿದ್ದರು. ಜಯಲಲಿತಾ ನಿಧನದ ಬಗ್ಗೆ ತನಿಖೆ ನಡೆಯಬೇಕೆಂದು ಎಐಎಡಿಂಕೆಯ ಒಂದು ಬಣ ಪಟ್ಟುಹಿಡಿದಿದ್ದರೆ, ಶಶಿಕಲ(ದಿನಕರನ್) ನೇತೃತ್ವದ ಬಣ ಅದರ ಅಗತ್ಯವೇ ಇಲ್ಲ ಎಂದು ಹೇಳುತ್ತಾ ಬಂದಿದೆ.

 ಅಮ್ಮ(ಜಯಲಲಿತಾ) ನಿಧನದ ಕುರಿತ ನಿಗೂಢತೆ ಬೇಧಿಸಲು ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಆಗಸ್ಟ್ 17ರಂದು ಮುಖ್ಯಮಂತ್ರಿ ಪಳನಿಸ್ವಾಮಿ ಘೋಷಿಸಿದ್ದರು. ಜಯಲಲಿತಾ ನಿಗೂಢ ಸಾವಿನ ಬಗ್ಗೆ ಸಿಬಿಐ ತನಿಖೆ ನಡೆಬೇಕೆಂದು ಪನ್ನೀರ್‌ಸೆಲ್ವಂ ಆಗ್ರಹಿಸಿದ್ದರು. ‘ಅಮ್ಮ’ ಆಸ್ಪತ್ರೆಗೆ ದಾಖಲಾಗಿದ್ದ 75 ದಿನಗಳ ಅವಧಿಯಲ್ಲಿ ತನಗಾಗಲೀ ಅಥವಾ ತನ್ನ ಬೆಂಬಲಿಗರಿಗಾಗಲೀ ಜಯಲಲಿತಾರನ್ನು ಭೇಟಿಯಾಗಲು ಶಶಿಕಲಾ ಬೆಂಬಲಿಗರು ಅವಕಾಶ ನೀಡಲಿಲ್ಲ ಎಂದು  ಪನ್ನೀರ್‌ಸೆಲ್ವಂ ದೂರಿದ್ದರು. ಅಲ್ಲದೆ ‘ಅಮ್ಮ’ನನ್ನು ಚಿಕಿತ್ಸೆಗಾಗಿ ಅಮೆರಿಕ ಅಥವಾ ಇಂಗ್ಲೆಂಡಿಗೆ ಕರೆದೊಯ್ಯಬೇಕೆಂಬ ತನ್ನ ಸಲಹೆಗೂ ಶಶಿಕಲಾ ಬಣ ಕಿವಿಗೊಡಲಿಲ್ಲ ಎಂದು ಪನ್ನೀರ್‌ಸೆಲ್ವಂ ಆರೋಪಿಸಿದ್ದರು.

 ಶಶಿಕಲಾರ ಬಗ್ಗೆ ಭಯದಿಂದ ಪಕ್ಷದ ಪ್ರಮುಖರು ಜಯಲಲಿತಾ ಆರೋಗ್ಯದ ಕುರಿತು ಸುಳ್ಳು ಸುದ್ದಿ ಪ್ರಸಾರ ಮಾಡಿದ್ದೆವು ಎಂದು ಕೆಲದಿನದ ಹಿಂದೆಯಷ್ಟೇ ರಾಜ್ಯದ ಅರಣ್ಯ ಸಚಿವ ಡಿಂಡಿಗಲ್ ಶ್ರೀನಿವಾಸನ್ ಒಪ್ಪಿಕೊಂಡಿದ್ದರು. ‘ಅಮ್ಮ’ನನ್ನು ನೋಡಲು ಯಾರು ಬಂದರೂ, ಅವರು ಹುಷಾರಾಗಿದ್ದಾರೆ ಎಂದು ಹೇಳಿ ಶಶಿಕಲಾ ಸಂಬಂಧಿಗಳು ಅವರನ್ನು ಸಾಗಹಾಕುತ್ತಿದ್ದರು ಎಂದು ಶ್ರೀನಿವಾಸನ್ ಹೇಳಿದ್ದರು.

  ಆದರೆ ಈ ಆರೋಪವನ್ನು ಎಐಎಡಿಎಂಕೆಯ ಭಿನ್ನಮತೀಯ ಬಣದ ಮುಖಂಡ ದಿನಕರನ್ ನಿರಾಕರಿಸಿದ್ದಾರೆ. ಅಪೋಲೊ ಆಸ್ಪತ್ರೆಯಲ್ಲಿ ಜಯಲಲಿತಾ ಟಿವಿ ನೋಡುತ್ತಿರುವ ವೀಡಿಯೊ ದೃಶ್ಯಾವಳಿ ತನ್ನ ಬಳಿ ಇದೆ. ಆದರೆ ಆ ಸಂದರ್ಭ ಜಯಲಲಿತಾ ‘ರಾತ್ರಿ ಉಡುಗೆ’ ಧರಿಸಿದ್ದು, ‘ಅಮ್ಮ’ನ ಘನತೆಗೆ ಕುಂದಾಗಬಾರದು ಎಂಬ ಕಾರಣ ಈ ವೀಡಿಯೊ ದೃಶ್ಯಾವಳಿ ಬಹಿರಂಗಗೊಳಿಸಿಲ್ಲ ಎಂದು ದಿನಕರನ್ ಹೇಳಿದ್ದರು.

 ‘ಅಮ್ಮ’ನ ಸಾವಿನ ಪ್ರಕರಣದ ಕುರಿತು ನ್ಯಾಯಾಂಗ ತನಿಖೆ ನಡೆಸಿದರೆ ಆಗ ಈ ವೀಡಿಯೊ ದೃಶ್ಯಾವಳಿ ಬಹಿರಂಗಗೊಳಿಸುವಂತೆ ಶಶಿಕಲಾ ಸೂಚನೆ ನೀಡಿದ್ದಾರೆ ಎಂದು ದಿನಕರನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X