Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ...

ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ‘ಸೌಭಾಗ್ಯ’ ಯೋಜನೆಯ ಸಂಪೂರ್ಣ ವಿವರ

ವಾರ್ತಾಭಾರತಿವಾರ್ತಾಭಾರತಿ25 Sept 2017 9:08 PM IST
share
ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ‘ಸೌಭಾಗ್ಯ’ ಯೋಜನೆಯ ಸಂಪೂರ್ಣ ವಿವರ

ಹೊಸದಿಲ್ಲಿ,ಸೆ.25: ಬಡವರ ಮನೆಗಳಿಗೆ ಉಚಿತವಾಗಿ ವಿದ್ಯುತ್ ಪೂರೈಸುವ ಸಹಜ್ ಬಿಜ್ಲಿ ಹರ್ ಘರ್ ಯೋಜನಾ ಅಥವಾ ‘ಸೌಭಾಗ್ಯ’ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಚಾಲನೆ ನೀಡಿದರು. ಈ ವರ್ಷದ ಡಿಸೆಂಬರ್‌ನೊಳಗೆ ಎಲ್ಲ ಗ್ರಾಮಗಳ ವಿದ್ಯುದ್ದೀಕರಣದ ಬಳಿಕ ಎಲ್ಲ ಗ್ರಾಮೀಣ ಕುಟುಂಬಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿವೆ.

ರಾಜ್ಯಗಳು ಮನೆಮನೆ ವಿದ್ಯುದ್ದೀಕರಣ ಕಾರ್ಯವನ್ನು 2019,ಮಾ.31ರೊಳಗೆ ಪೂರ್ಣಗೊಳಿಸುವ ಅಗತ್ಯವಿದೆ ಎಂದು ಸರಕಾರವು ತಿಳಿಸಿದೆ.

ಸೌಭಾಗ್ಯ ಯೋಜನೆಯು 16,320 ಕೋ.ರೂ.ವೆಚ್ಚದ್ದಾಗಿದ್ದು, ಗ್ರಾಮೀಣ ಮನೆಗಳ ವಿದ್ಯುದ್ದೀಕರಣಕ್ಕಾಗಿ 14,025 ಕೋ.ರೂ. ಮತ್ತು ನಗರ ಪ್ರದೇಶಗಳ ಮನೆಗಳಿಗೆ 2,295 ಕೋ.ರೂ.ಗಳನ್ನು ನಿಗದಿಗೊಳಿಸಲಾಗಿದೆ.

ಕೇಂದ್ರವು ಯೋಜನಾ ವೆಚ್ಚದ ಶೇ.60ರಷ್ಟು ಅನುದಾನವನ್ನು ಮಂಜೂರು ಮಾಡಲಿದ್ದು, ರಾಜ್ಯಗಳ ವಂತಿಗೆ ಶೇ.10ರಷ್ಟಿರಲಿದೆ. ಉಳಿದ ಹಣವನ್ನು ಸಾಲಗಳ ಮೂಲಕ ಸಂಗ್ರಹಿಸಲಾಗುವುದು.

 ವಿಶೇಷ ವರ್ಗದಡಿಯ ರಾಜ್ಯಗಳಿಗೆ ಒಟ್ಟು ಯೋಜನಾ ವೆಚ್ಚದ ಶೇ.85ರಷ್ಟು ಮೊತ್ತವನ್ನು ಕೇಂದ್ರವು ಮಂಜೂರು ಮಾಡಲಿದೆ. ಈ ರಾಜ್ಯಗಳು ಕೇವಲ ಶೇ.5ರಷ್ಟು ವಂತಿಗೆ ಪಾವತಿಸಿದರೆ ಸಾಕು. ಯೋಜನೆಯು 12,320 ಕೋ.ರೂ.ಗಳ ಮುಂಗಡ ಪತ್ರ ಬೆಂಬಲವನ್ನು ಹೊಂದಿರಲಿದೆ.

2011ರ ಜನಗಣತಿಯ ದತ್ತಾಂಶಗಳನ್ನು ಆಧರಿಸಿ ಈ ಉಚಿತ ವಿದ್ಯುತ್ ಯೋಜನೆಯ ಫಲಾನುಭವಿಗಳನ್ನು ಗುರುತಿಸಲಾಗುವುದು ಎಂದು ವರದಿಗಳು ತಿಳಿಸಿವೆ.

ಎಪಿಎಲ್ ಕುಟುಂಬಗಳಿಗೆ ಕೇವಲ 500 ರೂ.ಗಳಿಗೆ ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುವುದು ಮತ್ತು ಈ ಕುಟುಂಬಗಳು ಶುಲ್ಕವನ್ನು 10 ಸಮಾನ ಮಾಸಿಕ ಕಂತುಗಳಲ್ಲಿ ಪಾವತಿಸಬಹುದಾಗಿದೆ. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ವಿದ್ಯುತ್ ಸಂಪರ್ಕವನ್ನು ಒದಗಿಸಲಾಗುವುದು.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್‌ಗಳು ಮತ್ತು ಸಾರ್ವಜನಿಕ ಸಂಸ್ಥೆಗಳು ಅರ್ಜಿಗಳ ಸಂಗ್ರಹ, ಬಿಲ್‌ಗಳ ವಿತರಣೆ ಮತ್ತು ಆದಾಯ ಸಂಗ್ರಹ ಕಾರ್ಯದಲ್ಲಿ ನೆರವಾಗಲಿವೆ.

ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಮೋದಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ಬಡವರ ಏಳಿಗೆಯು ಸರಕಾರದ ಮುಖ್ಯ ಆದ್ಯತೆ ಯಾಗಿದೆ ಎಂದು ಹೇಳಿದರು.

ಮುದ್ರಾ ಯೋಜನೆಯನ್ನು ಪ್ರಸ್ತಾಪಿಸಿದ ಅವರು, ಸರಕಾರವೊಂದು ಯಾವುದೇ ಬ್ಯಾಂಕ್ ಗ್ಯಾರಂಟಿ ಇಲ್ಲದೆ ಬಡವರಿಗೆ ಸಾಲವನ್ನು ನೀಡುತ್ತದೆ ಎಂದು ಯಾರೂ ಊಹಿಸಿಯೂ ಇರಲಿಲ್ಲ ಎಂದರು.

ವಿದ್ಯುತ್ ಸಂಪರ್ಕ ಪಡೆಯಲು ಬಡವರಿಗೆ ಯಾವುದೇ ಶುಲ್ಕವನ್ನು ವಿಧಿಸಲಾ ಗುವುದಿಲ್ಲ ಮತ್ತು ವಿದ್ಯುತ್ ಸಂಪರ್ಕವನ್ನು ಒದಗಿಸಲು ಸರಕಾರವೇ ಮನೆ ಮನೆಗಳಿಗೆ ತಲುಪಲಿದೆ ಎಂದರು.

ಸರಕಾರವು ಹಮ್ಮಿಕೊಂಡಿರುವ ಗ್ರಾಮೀಣ ವಿದ್ಯುದ್ದೀಕರಣ ಯೋಜನೆಯಡಿ 18,000 ಗ್ರಾಮಗಳ ಪೈಕಿ ಕೇವಲ 3,000ಕ್ಕೂ ಕಡಿಮೆ ಗ್ರಾಮಗಳ ವಿದ್ಯುದ್ದೀಕರಣ ಬಾಕಿಯುಳಿದಿದೆ ಎಂದ ಮೋದಿ, ಒಂದು ಕಾಲದಲ್ಲಿ ವಿದ್ಯುತ್ ಅಭಾವವನ್ನು ಎದುರಿಸುತ್ತಿದ್ದ ಭಾರತವೀಗ ಮಿಗತೆ ವಿದ್ಯುತ್ ಹೊಂದಿರುವ ದೇಶ ಎಂಬ ಹೆಗ್ಗಳಿಕೆಯತ್ತ ಸಾಗುತ್ತಿದೆ ಎಂದು ಹೇಳಿದರು.

ಕಲ್ಲಿದ್ದಲಿನ ಪಾರದರ್ಶಕ ಇ-ಹರಾಜು ನಮ್ಮ ಸರಕಾರದ ನೀತಿಗೆ ನಿದರ್ಶನವಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ಸರಕಾರವು 2017,ಡಿಸೆಂಬರ್‌ನೊಳಗೆ ಎಲ್ಲ ಗ್ರಾಮಗಳ ವಿದ್ಯುದ್ದೀಕರಣವನ್ನು ಪೂರ್ಣಗೊಳಿಸಲಿದೆ ಮತ್ತು ಎಲ್ಲ ಮನೆಗಳಿಗೆ 2018,ಡಿಸೆಂಬರ್‌ನೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವದು ಎಂದು ಹೇಳಿದ ವಿದ್ಯುತ್ ಸಚಿವ ಆರ್.ಕೆ.ಸಿಂಗ್ ಅವರು, ವಾರದ ಏಳೂ ದಿನಗಳ ಕಾಲ 24 ಗಂಟೆ ವಿಶ್ವಾಸಾರ್ಹ ಗುಣಮಟ್ಟದ ವಿದ್ಯುತ್ ಪೂರೈಕೆ ಸರಕಾರದ ಮುಂದಿನ ಗುರಿಯಾಗಿರಲಿದೆ ಎಂದು ತಿಳಿಸಿದರು.

ಎಲ್ಲ ಮನೆಗಳಿಗೆ ವಿದ್ಯುತ್ ಒದಗಿಸುವಾಗ ಪೂರ್ವ ಪಾವತಿ ಮಾದರಿಯನ್ನು ಅಳವಡಿಸಿಕೊಳ್ಳಲಾಗುವುದು ಎಂದೂ ಅವರು ತಿಳಿಸಿದರು.

 *ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್ ಸಂಪರ್ಕ

*ಎಪಿಎಲ್ ಕುಟುಂಬಗಳಿಗೆ ಕೇವಲ 500 ರೂ.ಶುಲ್ಕ

*ಎಪಿಎಲ್ ಕುಟುಂಬಗಳಿಗೆ ಶುಲ್ಕ ಪಾವತಿಗೆ ಕಂತುಗಳ ಸೌಲಭ್ಯ

*ಯೋಜನೆಯ ಒಟ್ಟೂ ವೆಚ್ಚ 16,320 ಕೋ.ರೂ.

*2017,ಡಿಸೆಂಬರ್‌ನೊಳಗೆ ಎಲ್ಲ ಗ್ರಾಮಗಳ ವಿದ್ಯುದ್ದೀಕರಣ

*2018,ಡಿಸೆಂಬರ್‌ನೊಳಗೆ ಎಲ್ಲ ಮನೆಗಳಿಗೆ ವಿದ್ಯುತ್ ಸಂಪರ್ಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X