Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಡೆಮೋ ರೈಲಿನಲ್ಲಿ ಪೊಲೀಸರ ಸಂಚಾರ

ಡೆಮೋ ರೈಲಿನಲ್ಲಿ ಪೊಲೀಸರ ಸಂಚಾರ

ಪ್ರಯಾಣಿಕರ ಸುರಕ್ಷತೆಗೆ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ25 Sept 2017 9:53 PM IST
share
ಡೆಮೋ ರೈಲಿನಲ್ಲಿ ಪೊಲೀಸರ ಸಂಚಾರ

ಬೆಂಗಳೂರು, ಸೆ.25: ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತಾ ವಿಧಾನಗಳ ಕುರಿತು ಪರಿಶೀಲನೆ ನಡೆಸಲು ಬೆಂಗಳೂರು ಪೂರ್ವ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್‌ ಕುಮಾರ್ ಸಿಂಗ್, ವೈಟ್‌ಫೀಲ್ಡ್ ಡಿಸಿಪಿ ಅಬ್ದುಲ್ ಅಹದ್ ಹಾಗೂ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಇತ್ತೀಚೆಗೆ ಲೋಕಾರ್ಪಣೆಗೊಂಡ ಡೆಮೋ ರೈಲಿನಲ್ಲಿ ಕಾಡುಗುಡಿ ರೈಲು ನಿಲ್ದಾಣದಿಂದ ಬೈಯಪ್ಪನಹಳ್ಳಿವರೆಗೆ ಸಂಚರಿಸಿದರು.

ಸೋಮವಾರ ಸಂಜೆ 6.20ಕ್ಕೆ ಕಾಡುಗುಡಿ ರೈಲ್ವೆ ನಿಲ್ದಾಣದಿಂದ ಪ್ರಯಾಣ ಆರಂಭಿಸಿದ ಪೊಲೀಸ್ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರೊಂದಿಗೆ ರೈಲಿನ ಪ್ರಯಾಣಕ್ಕೆ ಸಂಬಂಧಿಸಿದಂತೆ ಅಭಿಪ್ರಾಯಗಳನ್ನು ಪಡೆದುಕೊಂಡರು.

ಕಾಡುಗುಡಿ ಹಾಗೂ ಬೈಯಪ್ಪನಹಳ್ಳಿ ನಡುವೆ ಹೊಸದಾಗಿ ಡೆಮೋ ರೈಲು ಸಂಚಾರ ಸೇವೆಯನ್ನು ಆರಂಭಿಸಲಾಗಿದೆ. ಐಟಿಬಿಟಿ ಉದ್ಯೋಗಿಗಳನ್ನು ಈ ರೈಲು ಪ್ರಯಾಣಕ್ಕೆ ಆಕರ್ಷಿಸುವುದು ಹಾಗೂ ಅವರಿಗೆ ಸೂಕ್ತವಾದ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು.

ಐಟಿಬಿಟಿ ಉದ್ಯೋಗಿಗಳು ಹಾಗೂ ಜನಸಾಮಾನ್ಯರಲ್ಲಿ ಈ ರೈಲು ಪ್ರಯಾಣದ ಬಗ್ಗೆ ಅರಿವು ಮೂಡಿಸುವ ಪ್ರಯತ್ನವನ್ನು ಪೊಲೀಸ್ ಇಲಾಖೆ ಮಾಡಿದೆ. ವೈಟ್‌ಫೀಲ್ಡ್ -ಬೈಯಪ್ಪನಹಳ್ಳಿ ನಡುವಿನ ಮಾರ್ಗದಲ್ಲಿ ಮೆಟ್ರೋ ಕಾಮಗಾರಿ ಆರಂಭವಾಗಿರುವುದರಿಂದ, ಸಂಚಾರ ದಟ್ಟಣೆ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಸಾರ್ವಜನಿಕರು ತಮ್ಮ ಸಂಚಾರಕ್ಕೆ ಈ ರೈಲನ್ನು ಬಳಸುವುದರಿಂದ ಸಂಚಾರ ದಟ್ಟಣೆ ಸಮಸ್ಯೆಯಿಂದ ಪಾರಾಗಬಹುದು. ಅಲ್ಲದೆ, ಬೆಳಗ್ಗೆ ಹಾಗೂ ಸಂಜೆ ಪೀಕ್ ಅವರ್‌ನಲ್ಲಿ ಅವರ ಸಮಯವು ಉಳಿತಾಯವಾಗುತ್ತದೆ ಎಂದು ಸೀಮಂತ್‌ಕುಮಾರ್ ಸಿಂಗ್ ತಿಳಿಸಿದರು.

ವೈಟ್‌ಫೀಲ್ಡ್ ಡಿಸಿಪಿ ಅಬ್ದುಲ್ ಅಹದ್ ಮಾತನಾಡಿ, ಡೆಮೋ ರೈಲು ಸಂಚರಿಸುವ ಪ್ರದೇಶವು ನಮ್ಮ ವ್ಯಾಪ್ತಿಗೆ ಬರುತ್ತದೆ. ಈ ಭಾಗದಲ್ಲಿ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳು ನಡೆಯದಂತೆ ತಡೆಯುವುದು ನಮ್ಮ ಆದ್ಯತೆ. ಪ್ರಯಾಣಿಕರ ರಕ್ಷಣೆಗಾಗಿ ರೈಲ್ವೆ ಪೊಲೀಸರೊಂದಿಗೆ ನಾವು ಕೈ ಜೋಡಿಸುತ್ತೇವೆ ಎಂದರು.

 ಕಾಡುಗುಡಿ, ವೈಟ್‌ಫೀಲ್ಡ್ ಭಾಗದಲ್ಲಿ ಸಾವಿರಾರು ಐಟಿಬಿಟಿ ಕಂಪೆನಿಗಳಿವೆ. ಇಲ್ಲಿನ ಉದ್ಯೋಗಿಗಳನ್ನು ರೈಲು ಸಂಚಾರಕ್ಕೆ ಆಕರ್ಷಿಸಲು ಪೊಲೀಸ್ ಇಲಾಖೆಯು ಈ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿತ್ತು ಎಂದು ಅಬ್ದುಲ್ ಅಹದ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X