Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾರಕೂರು ಕತ್ತಲೆ ಬಸದಿಯಲ್ಲಿ...

ಬಾರಕೂರು ಕತ್ತಲೆ ಬಸದಿಯಲ್ಲಿ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ26 Sept 2017 9:15 PM IST
share
ಬಾರಕೂರು ಕತ್ತಲೆ ಬಸದಿಯಲ್ಲಿ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ

ಬ್ರಹ್ಮಾವರ, ಸೆ.26: ಉಡುಪಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಣಿಪಾಲ ಪ್ರವಾಸೋದ್ಯಮ ಮತ್ತು ಆತಿಥ್ಯ ಕೌಶಲ್ಯ ಕೇಂದ್ರ, ನಿರ್ಮಿತಿ ಕೇಂದ್ರ, ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ, ಕರಾವಳಿ ಪ್ರವಾಸೋದ್ಯಮಗಳ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ‘ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಯ ಒಂದು ಸಾಧನ’ ಎಂಬ ಸಂದೇಶದೊಂದಿಗೆ ಪ್ರವಾಸೋದ್ಯಮ ದಿನಾಚರಣೆಗೆ ಮಂಗಳವಾರ ಬಾರಕೂರಿನ ಕತ್ತಲೆ ಬಸದಿಯಲ್ಲಿ ಹಣತೆ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ಅನುರಾಧ ಮಾತ ನಾಡಿ, ಪ್ರತಿಯೊಬ್ಬರಲ್ಲಿ ಪ್ರವಾಸೋದ್ಯಮದ ಬಗ್ಗೆ ಜಾಗೃತಿ ಮೂಡಬೇಕಾಗಿದೆ. ಈ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ತಿಳಿಸಿದರು.

ಭಾರತೀಯ ಪುರಾತತ್ವ ಇಲಾಖೆಯ ಬೆಂಗಳೂರು ಹಾಗೂ ಹಂಪಿ ವೃತ್ತದ ಪುರಾತತ್ವ ಅಧೀಕ್ಷಕಿ ಮೂರ್ತಿಶ್ವರಿ ಮಾತನಾಡಿ, ಇಂದು ಪೋಷಕರು ತಮ್ಮ ಮಕ್ಕಳು ಇಂಜಿನಿಯರ್, ಡಾಕ್ಟರ್ ಆಗಲು ಬಯಸುತ್ತಾರೆ. ಯಾರು ಕೂಡ ಇತಿಹಾಸ ತಜ್ಞರಾಗುವುದನ್ನು ಬಯಸುವುದಿಲ್ಲ. ಆದರೆ ಇತಿಹಾಸದ ಜ್ಞಾನ ಪ್ರತಿಯೊಬ್ಬರಿಗೂ ಅಗತ್ಯವಾಗಿ ಇರಬೇಕಾಗಿದೆ ಎಂದರು.

ಇತಿಹಾಸ ತಜ್ಞ ಗುರುಮೂರ್ತಿ ಬಾರಕೂರು ಇತಿಹಾಸದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉದ್ಯಮಿ ಮನೋಹರ್ ಶೆಟ್ಟಿ, ಬಾರಕೂರು ಗ್ರಾಪಂ ಅಧ್ಯಕ್ಷ ಶೈಲಾ ಡಿಸೋಜ, ಉಪಾಧ್ಯಕ್ಷ ಶಾಂತರಾಮ್ ಶೆಟ್ಟಿ, ಉಡುಪಿ ಪ್ರಾದೇಶಿಕ ಪ್ರವಾಸಿ ಕಚೇರಿಯ ಸಹಾಯಕ ನಿರ್ದೇಶಕಿ ಅನಿತಾ ಬಿ.ಆರ್. ಉಪಸ್ಥಿತರಿದ್ದರು. ನಾಗರಾಜ್ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರು ಕತ್ತಲೆ ಬಸದಿಯಲ್ಲಿ ಇಡಲಾದ ನೂರಾರು ಹಣತೆಯನ್ನು ಬೆಳಗಿಸಿದರು.

ಜಿಲ್ಲೆಯಲ್ಲಿ 11ಪ್ರಾಚೀನ ಸ್ಮಾರಕ

ಬೆಂಗಳೂರು ವೃತ್ತದಲ್ಲಿ 130 ಹಾಗೂ ಹಂಪಿ ವೃತ್ತದಲ್ಲಿ 85 ಪ್ರಾಚೀನ ಸ್ಮಾರಕ ಗಳಿವೆ. ಹಂಪಿಯ 85ರಲ್ಲಿ 53ಸ್ಮಾರಕಗಳು ಯುನೆಸ್ಕೊ ವಿಶ್ವ ಪಾರಂಪರಿಕ ಸ್ಮಾರಕ ಎಂಬುದಾಗಿ ಘೋಷಿಸಲಾಗಿದೆ. ಬೆಂಗಳೂರು ವೃತ್ತದ ಶ್ರೀರಂಗಪಟ್ಟಣ ಹಾಗೂ ಹೊಯ್ಸಳ ಸಮೂಹ ಸ್ಮಾರಕವನ್ನು ವಿಶ್ವ ಪಾರಂಪರಿಕ ಸ್ಮಾರಕ ಎಂಬುದಾಗಿ ಘೋಷಿಸುವಂತೆ ಯೆನೆಸ್ಕೊಗೆ ಪ್ರಸ್ತಾಪ ಕಳುಹಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ 11 ಪ್ರಾಚೀನ ಸ್ಮಾರಕಗಳಿದ್ದು, ಇಲ್ಲಿರುವ ಇನ್ನಷ್ಟು ಸ್ಮಾರಕಗಳನ್ನು ಸಾರ್ವಜನಿಕರು, ಇತಿಹಾಸ ತಜ್ಞರು ಗುರುತಿಸಿ ಸಂರಕ್ಷಿಸಬೇಕಾಗಿದೆ. ಜಿಲ್ಲೆಯ ಸ್ಮಾರಕಗಳನ್ನು ಕೂಡ ವಿಶ್ವ ಪಾರಂಪರಿಕ ಸ್ಮಾರಕವನ್ನಾಗಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಭಾರತೀಯ ಪುರಾತತ್ವ ಇಲಾಖೆಯ ಬೆಂಗಳೂರು ಹಾಗೂ ಹಂಪಿ ವೃತ್ತದ ಪುರಾತತ್ವ ಅಧೀಕ್ಷಕಿ ಮೂರ್ತಿಶ್ವರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X