Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ವಿವಾದದ ಸುಳಿಯಲ್ಲಿ ‘ನ್ಯೂಟನ್’

ವಿವಾದದ ಸುಳಿಯಲ್ಲಿ ‘ನ್ಯೂಟನ್’

ವಾರ್ತಾಭಾರತಿವಾರ್ತಾಭಾರತಿ29 Sept 2017 8:04 PM IST
share
ವಿವಾದದ ಸುಳಿಯಲ್ಲಿ ‘ನ್ಯೂಟನ್’

ಆಸ್ಕರ್‌ಗೆ ಭಾರತದ ಸ್ಪರ್ಧಿಯಾಗಿ ನಾಮಕರಣಗೊಂಡಾಗ ಪ್ರಶಂಸೆಗಳ ಮಹಾಪೂರವೇ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಚಿತ್ರದ ಬಗ್ಗೆ ಅಪಸ್ವರವೂ ಕೇಳಿಬಂದಿತ್ತು. ಅದಕ್ಕೆ ಕಾರಣವಿಷ್ಟೇ. ‘ನ್ಯೂಟನ್’ ಚಿತ್ರದ ಕಥೆಯನ್ನು, ಇರಾನ್‌ನ ಜನಪ್ರಿಯ ಚಿತ್ರ ‘ಸೀಕ್ರೆಟ್ ಬ್ಯಾಲೆಟ್’ನಿಂದ ಕದಿಯಲಾಗಿದೆಯೆಂಬ ಆರೋಪಗಳು ಸಾಮಾಜಿಕ ಜಾಲ ತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಆದರೆ ಅನುರಾಗ್ ಕಶ್ಯಪ್‌ರನಂತಹ ಬಾಲಿವುಡ್‌ನ ಖ್ಯಾತ ನಿರ್ದೇಶಕರು ‘ನ್ಯೂಟನ್’ ಪರವಾಗಿ ಧ್ವನಿಯೆತ್ತಿದ್ದಾರೆ.

ಅನುರಾಗ್ ಕಶ್ಯಪ್ ಅವರು ‘ನ್ಯೂಟನ್’ ನಿರ್ಮಾಪಕರ ಸಮ್ಮತಿ ಪಡೆದು, ‘ಸೀಕ್ರೆಟ್ ಬ್ಯಾಲೆಟ್’ನ ನಿರ್ಮಾಪಕ ಮಾರ್ಕೊ ಮುಲ್ಲರ್‌ಗೆ, ‘ನ್ಯೂಟನ್’ ಚಿತ್ರವನ್ನು ತೋರಿಸುವ ಏರ್ಪಾಡು ಮಾಡಿದ್ದರು. ಚಿತ್ರ ವೀಕ್ಷಿಸಿದ ಮಾರ್ಕೊ ಮುಲ್ಲರ್, ‘ನ್ಯೂಟನ್’ನನ್ನು ಮುಕ್ತಕಂಠದಿಂದ ಪ್ರಶಂಸಿದ್ದಾರೆ. ಎರಡೂ ಚಿತ್ರಗಳ ಪರಿಕಲ್ಪನೆ ಒಂದೇ ಆಗಿದೆಯಾದರೂ, ‘ನ್ಯೂಟನ್’ ಚಿತ್ರದ ಕಥೆಯು ‘ಸೀಕ್ರೆಟ್ ಬ್ಯಾಲೆಟ್’ಗಿಂತ ಸಂಪೂರ್ಣ ವಿಭಿನ್ನವಾಗಿದೆ ಎಂದೂ ಮುಲ್ಲರ್ ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲದೆ ಆಸ್ಕರ್ ಸ್ಪರ್ಧೆಯಲ್ಲಿ ‘ನ್ಯೂಟನ್’ಗೆ ಶುಭ ಹಾರೈಸಿದ್ದಾರೆ.

ಬರ್ಲಿನ್ ಚಿತ್ರೋತ್ಸವದಲ್ಲೂ ಪ್ರಶಸ್ತಿ ಗೆದ್ದಿರುವ ‘ನ್ಯೂಟನ್’ನ ಕಥೆಯನ್ನು ಸೀಕ್ರೆಟ್ ಬ್ಯಾಲೆಟ್‌ನಿಂದ ಕದಿಯಲಾಗಿದೆಯೆಂಬ ಆರೋಪಗಳಲ್ಲಿ ಎಳ್ಳಷ್ಟೂ ಹುರುಳಿಲ್ಲವೆಂದು ಕಶ್ಯಪ್ ಹೇಳಿದ್ದಾರೆ.

‘ಸೀಕ್ರೆಟ್ ಬ್ಯಾಲೆಟ್’ನ ನಿರ್ದೇಶಕ ಬಾಬಕ್ ಪಯಾಮಿ ಕೂಡಾ ‘ನ್ಯೂಟನ್’ ವೀಕ್ಷಿಸಿದ್ದು, ಒರಿಜಿನಲ್ ಚಿತ್ರವೆಂದು ಕ್ಲೀನ್ ಚಿಟ್ ನೀಡಿದ್ದಾರೆ. ಒಂದು ವೇಳೆ ಎರಡೂ ಚಿತ್ರಗಳ ಥೀಮ್ ಒಂದೇ ಆಗಿದ್ದರೂ, ನಿರ್ದೇಶಕರು ಅದನ್ನು ಬೇರೆ ಬೇರೆ ಧ್ವನಿಗಳಲ್ಲಿ ಅಭಿವ್ಯಕ್ತಿಸಬಹುದಾಗಿದೆ ಎಂದವರು ಹೇಳಿದ್ದಾರೆ.

‘ನ್ಯೂಟನ್’ ಆಸ್ಕರ್‌ಗೆ ಈಗ ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿರುವ ಭಾರತೀಯ ಚಲನಚಿತ್ರ ಒಕ್ಕೂಟ (ಎಫ್‌ಎಫ್‌ಐ)ವು, ‘ನ್ಯೂಟನ್’ ಚಿತ್ರವು ಆಸ್ಕರ್‌ಗೆ ಭಾರತದ ಅಧಿಕೃತ ಸ್ಪರ್ಧಿಯಾಗಿ ಮುಂದುವರಿಯಲಿದೆಯೆಂದು ಸ್ಪಷ್ಟಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X