Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಶಾರಾಮಿ ಬುಲೆಟ್ ಟ್ರೈನ್ ಬೇಕಿಲ್ಲ,...

ಐಶಾರಾಮಿ ಬುಲೆಟ್ ಟ್ರೈನ್ ಬೇಕಿಲ್ಲ, ಮೊದಲು ಸೇತುವೆ ದುರಸ್ತಿಪಡಿಸಿ: ಕಾಲ್ತುಳಿತ ದುರಂತದಲ್ಲಿ ಬದುಕುಳಿದವರ ಮಾತು

ಪ್ರಧಾನಿ, ರೈಲ್ವೆ ಸಚಿವರನ್ನು ಈ ಹಿಂದೆಯೇ ಎಚ್ಚರಿಸಿತ್ತು ಪತ್ರ, ಟ್ವೀಟ್ ಗಳು

ವಾರ್ತಾಭಾರತಿವಾರ್ತಾಭಾರತಿ29 Sept 2017 9:05 PM IST
share
ಐಶಾರಾಮಿ ಬುಲೆಟ್ ಟ್ರೈನ್ ಬೇಕಿಲ್ಲ, ಮೊದಲು ಸೇತುವೆ ದುರಸ್ತಿಪಡಿಸಿ: ಕಾಲ್ತುಳಿತ ದುರಂತದಲ್ಲಿ ಬದುಕುಳಿದವರ ಮಾತು

ಮುಂಬೈ, ಸೆ.29: “ಬುಲೆಟ್ ರೈಲು ಬರಲಿರುವ ನಗರದಲ್ಲಿ ಸುರಕ್ಷಿತ ರೈಲ್ವೆ ಸೇತುವೆಯಿಲ್ಲ” …. ಇದು ಕೋಪೋದ್ರಿಕ್ತ ಮುಂಬೈ ನಿವಾಸಿಗಳ ಮಾತು.

ಇಂದು ಬೆಳಗ್ಗೆ ಎಲ್ಫಿನ್ ಸ್ಟನ್ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 22 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆ ನಡೆಯುವುದಕ್ಕೂ ಮೊದಲೇ ಹಲವಾರು ಮಂದಿ ಟ್ವಿಟ್ಟರ್ ಮೂಲಕ, ಪತ್ರಗಳ ಮೂಲಕ ರೈಲ್ವೆ ಸೇತುವೆಯ ದುರವಸ್ತೆಯ ಬಗ್ಗೆ ವಿವರಿಸಿದ್ದರು. ಒಂದು ವರ್ಷದ ಮೊದಲೇ ಟ್ವಿಟ್ಟರ್ ಖಾತೆದಾರರೊಬ್ಬರು ಪ್ರಧಾನ ಮಂತ್ರಿ ಹಾಗು ಮಾಜಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರಿಗೆ ಈ ಬಗ್ಗೆ ಎಚ್ಚರಿಕೆ ನೀಡಿದ್ದರು.

ನಾಲ್ಕು ರೈಲುಗಳು ಒಮ್ಮೆಗೇ ನಿಲ್ದಾಣಕ್ಕೆ ಆಗಮಿಸಿದ್ದರಿಂದ ಜನಸಂದಣಿ ಹೆಚ್ಚಿತ್ತು. ಭಾರೀ ಮಳೆಯೂ ಸುರಿಯುತ್ತಿದ್ದುದರಿಂದ ಕಾಲ್ಸೇತುವೆಯ ಮೂಲಕ ಪ್ರಯಾಣಿಕರು ಸಾಗುತ್ತಿದ್ದರು. ಈ ಸಂದರ್ಭ ಶಾರ್ಟ್ ಸರ್ಕೂಟ್ ನಡೆದಿದೆ. ಸೇತುವೆ ಕುಸಿಯುತ್ತಿದೆ ಎಂದು ಯಾರೋ ಬೊಬ್ಬಿಟ್ಟದ್ದರಿಂದ ಜನರು ಓಡತೊಡಗಿದ್ದಾರೆ. ಈ ಸಂದರ್ಭ ಕಾಲ್ತುಳಿತ ಸಂಭವಿಸಿದೆ.

“ಜನರಿಗೆ ಐಶಾರಾಮಿ ಬುಲೆಟ್ ರೈಲು ಬೇಕಿಲ್ಲ… ಮೊದಲು ನಾವು ದಿನನಿತ್ಯ ನಡೆಯುವ ಸೇತುವೆಯನ್ನು ದುರಸ್ತಿಪಡಿಸಿ” ಎಂದು ಅವಘಡದಲ್ಲಿ ಬದುಕುಳಿದ ವ್ಯಕ್ತಿಯೊಬ್ಬರು ಹೇಳುತ್ತಾರೆ.

“ನಿಮಗೆ ಬುಲೆಟ್ ಟ್ರೈನ್ ಗಾಗಿ ಹಣವಿದೆ. ಆದರೆ ಸೇತುವೆ ದುರಸ್ತಿಗೆ ಹಣವಿಲ್ಲ. ನೀವು ಬಡ ಪ್ರಯಾಣಿಕರನ್ನು ಸಾಯಲು ಬಿಟ್ಟಿದ್ದೀರಿ” ಎಂದು ಶಿವಸೇನೆ ಈ ದುರಂತಕ್ಕೆ ಸಂಬಂಧಿಸಿ ಕೇಂದ್ರ ಸರಕಾರವನ್ನು ಟೀಕಿಸಿದೆ.

ಈ ಸೇತುವೆಯ ದುರಸ್ತಿಗೆ ಸಂಬಂಧಿಸಿ ಅರವಿಂದ್ ಸಾವಂತ್ ಎಂಬವರು ಮಾಜಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರಿಗೆ ಪತ್ರವನ್ನು ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪ್ರಭು ಸೇತುವೆಯ ಅಗಲವನ್ನು ಶೀಘ್ರದಲ್ಲಿ ವಿಸ್ತರಿಸಲಾಗುವುದು” ಎಂದಿದ್ದರು. ಆದರೆ ಯಾವುದೇ ಕೆಲಸ ನಡೆದಿರಲಿಲ್ಲ. “ಇದು ಕೇವಲ ನಿರ್ಲಕ್ಷ್ಯತನವಲ್ಲ. ಇದು ಕರ್ತವ್ಯಲೋಪ”  ಎಂದು ಸಾವಂತ್ ಹೇಳುತ್ತಾರೆ.

@sureshpprabhu @narendramodi Is central mumbai station 'Parel' awaiting a stampede? pic.twitter.com/hMhUm4wgJ3

— Chandan KK (@CKSquare) July 28, 2016

@PiyushGoyal sir pls do something related to this Parel bridge in Mumbai. Thanks @WesternRly pic.twitter.com/2FNJbDMnvV

— Santosh Andhale (@Santosh_Andhale) September 27, 2017

@sureshpprabhu @RailMinIndia The Mumbai Parel bridge is going to fall down or there will be a stampede. Many have told this but no action.

— rashmi (@TweetsOfRashmi) November 21, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X