Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕ್ ನಿರ್ಮಿತ ರಹಸ್ಯ ಸುರಂಗ...

ಪಾಕ್ ನಿರ್ಮಿತ ರಹಸ್ಯ ಸುರಂಗ ಪತ್ತೆಹಚ್ಚಿದ ಬಿಎಸ್‍ಎಫ್

ವಾರ್ತಾಭಾರತಿವಾರ್ತಾಭಾರತಿ30 Sept 2017 7:58 PM IST
share
ಪಾಕ್ ನಿರ್ಮಿತ ರಹಸ್ಯ ಸುರಂಗ ಪತ್ತೆಹಚ್ಚಿದ ಬಿಎಸ್‍ಎಫ್

ಶ್ರೀನಗರ, ಸೆ.30: ಜಮ್ಮು-ಕಾಶ್ಮೀರದ ಅರ್ನಿಯ ಸೆಕ್ಟರ್‌ನಲ್ಲಿ ಭಾರತ-ಪಾಕ್ ಗಡಿನಿಯಂತ್ರಣಾ ರೇಖೆಯ ಬಳಿ 14 ಅಡಿ ಉದ್ದದ ಗುಪ್ತ ಸುರಂಗವೊಂದನ್ನು ಭದ್ರತಾ ಪಡೆಗಳು ಪತ್ತೆಹಚ್ಚಿವೆ. ಅಲ್ಲದೆ ಸಮೀಪದಲ್ಲೇ ಶಸ್ತ್ರಾಸ್ತ್ರ ಸಂಗ್ರಹಾಗಾರ ಎಂದು ಶಂಕಿಸಲಾಗಿರುವ ಸ್ಥಳವೊಂದನ್ನೂ ಭದ್ರತಾ ಪಡೆಗಳು ಪತ್ತೆಹಚ್ಚಿವೆ.

ಗಡಿಭಾಗದಲ್ಲಿ ಹಾಕಲಾಗಿರುವ ಮುಳ್ಳುತಂತಿಯ ಬೇಲಿಯವರೆಗೆ ಈ ಸುರಂಗ ಮಾರ್ಗವಿದೆ. ಪಾಕಿಸ್ತಾನದಿಂದ ಉಗ್ರರನ್ನು ಭಾರತದ ಗಡಿಯೊಳಗೆ ನುಸುಳಿಸಲು ಈ ಸುರಂಗ ಮಾರ್ಗ ರಚಿಸಿರುವ ಶಂಕೆಯನ್ನು ಭದ್ರತಾ ಪಡೆಗಳು ವ್ಯಕ್ತಪಡಿಸಿವೆ. ಇತ್ತೀಚಿನ ದಿನದಲ್ಲಿ ಈ ಪ್ರದೇಶದಲ್ಲಿ ಪಾಕ್ ಪಡೆಗಳು ನಿರಂತರ ಕದನವಿರಾಮ ಉಲ್ಲಂಘಿಸಿ ಭಾರತೀಯ ಪಡೆಯ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದು, ಇದು ಸುರಂಗ ತೋಡುವ ಕಾರ್ಯಕ್ಕೆ ಪೂರಕವಾಗಿ ನಡೆದಿರಬೇಕು ಎಂದೂ ಶಂಕಿಸಲಾಗಿದೆ.

   ಅರ್ನಿಯ ಸೆಕ್ಟರ್‌ನ ದಮಾನ ಬಳಿಇರುವ ವಿಕ್ರಮ್ ಮತ್ತು ಪಟೇಲ್ ಸೇನಾನೆಲೆ ಮಧ್ಯೆ ಅಂತಾರಾಷ್ಟ್ರೀಯ ಗಡಿರೇಖೆಯಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ನಿರ್ಮಾಣ ಹಂತದಲ್ಲಿರುವ ಸುರಂಗ ಮಾರ್ಗ ಪತ್ತೆಯಾಗಿದೆ. ಹಬ್ಬದ ಸೀಸನ್‌ನಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಉದ್ದೇಶದಿಂದ ಉಗ್ರರನ್ನು ಭಾರತದೊಳಗೆ ನುಸುಳಿಸುವ ಪಾಕಿಸ್ತಾನದ ಸಂಚಿನ ಒಂದು ಭಾಗ ಇದಾಗಿದೆ ಎಂದು ಗಡಿ ನಿಯಂತ್ರಣಾ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭಾರತ-ಪಾಕ್ ಅಂತಾರಾಷ್ಟ್ರೀಯ ಗಡಿಭಾಗದಲ್ಲಿ ಕಳೆದ ಏಳುತಿಂಗಳಲ್ಲಿ ಪತ್ತೆಯಾಗಿರುವ ಎರಡನೇ ಸುರಂಗ ಮಾರ್ಗ ಇದಾಗಿದೆ. ಸಾಂಭದ ರಾಮ್‌ಗಡ ಸೆಕ್ಟರ್‌ನಲ್ಲಿ ಒಂದು ಸುರಂಗ ಪತ್ತೆಯಾಗಿತ್ತು.

ಈ ಮಧ್ಯೆ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ಕಚೇರಿಯ ಸಹಾಯಕ ಸಚಿವ ಜಿತೇಂದ್ರ ಸಿಂಗ್, ಭಯೋತ್ಪಾದಕತೆಗೆ ಪ್ರೋತ್ಸಾಹ ನೀಡುವ ಮೂಲಕ ಪಾಕಿಸ್ತಾನ ಅಂತಾರಾಷ್ಟ್ರೀಯ ಸಮುದಾಯದೆದುರು ಬೆತ್ತಲಾಗಿದೆ. ಆದರೂ ತನ್ನ ಚಾಳಿಯನ್ನು ಬಿಡುತ್ತಿಲ್ಲ ಎಂದಿದ್ದಾರೆ. ಪ್ರಧಾನಿ ಮೋದಿ ಭದ್ರತಾ ಪಡೆಗಳ ಕಾರ್ಯನಿರ್ವಹಣೆಗೆ ಸ್ವಾತಂತ್ರ ನೀಡಿದ ಕಾರಣ ಸೇನೆ ಮತ್ತು ಬಿಎಸ್‌ಎಫ್‌ಗೆ ಇತ್ತೀಚಿನ ದಿನದಲ್ಲಿ ಭರ್ಜರಿ ಯಶಸ್ಸು ದೊರೆತಿದೆ ಎಂದು ಅಭಿಪ್ರಾಯಪಟ್ಟರು.

 2009ರಲ್ಲಿ ಜಮ್ಮುವಿನ ಅಕ್ನೂರ್ ವಿಭಾಗದಲ್ಲಿ ಗಡಿನಿಯಂತ್ರಣಾ ರೇಖೆಯ ಬಳಿಕ ಸುರಂಗವೊಂದು ಪತ್ತೆಯಾಗಿತ್ತು. 2012ರಲ್ಲಿ ಸಾಂಬ ವಿಭಾಗದ ಬಳಿ ಪತ್ತೆಯಾದ ಸುರಂಗ 400 ಮೀಟರ್ ಉದ್ದವಿತ್ತು ಹಾಗೂ ವಾತಾಯನ(ಗಾಳಿ ಬೆಳಕು) ವ್ಯವಸ್ಥೆ ಸೇರಿದಂತೆ ಅತ್ಯಾಧುನಿಕ ವ್ಯವಸ್ಥೆಯನ್ನು ಹೊಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X