ಇನ್ನಂಜೆ: ಅ.1ರಂದು ಮಲ್ಲಿಗೆ ಕೃಷಿ ಮಾಹಿತಿ
ಉಡುಪಿ, ಸೆ.30: ಉಡುಪಿ ಜಿಲ್ಲಾ ಕೃಷಿಕ ಸಂಘ ಕಾಪು ವಲಯ ಸಮಿತಿ ಆಯೋಜಿಸಿರುವ ಮಲ್ಲಿಗೆ ಕೃಷಿ ಮಾಹಿತಿ ಕಾರ್ಯಕ್ರಮ ಅ.1ರ ಸಂಜೆ ಸಂಜೆ 4:30ಕ್ಕೆ ಇನ್ನಂಜೆ ಗೋಳಿಕಟ್ಟೆಯ ಶ್ರೀವಿಠೋಬ ಭಜನಾ ಮಂದಿರ ವಠಾರದಲ್ಲಿ ನಡೆಯಲಿದೆ.
ಕೃಷಿ ಮಾಹಿತಿದಾರರಾಗಿ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಪ್ರಧಾನ ಕಾರ್ಯದರ್ಶಿ ಮತ್ತು ಸಾಧನಾಶೀಲ ಕೃಷಿಕ ಪ್ರಶಸ್ತಿ ವಿಜೇತ ಕುದಿ ಶ್ರೀನಿವಾಸ ಭಟ್ ಭಾಗವಹಿಸಲಿದ್ದಾರೆ.
4ಕ್ಕೆ ಪಯ್ಯೆರುನಲ್ಲಿ: ಉಡುಪಿ ಜಿಲ್ಲಾ ಕೃಷಿಕ ಸಂಘ ಕಾಪು ವಲಯ ಸಮಿತಿ ಅ.4ರ ಬುಧವಾರ ಸಂಜೆ 4:30ಕ್ಕೆ ಕಾಪು ಪಯ್ಯೆರು ಗೀತಾ ಶೆಟ್ಟಿ ಮನೆ ವಠಾರ ದಲ್ಲಿ ಕೃಷಿ ಮಾಹಿತಿ ಶಿಬಿರವನ್ನು ಆಯೋಜಿಸಿದೆ.
ವೈಜ್ಞಾನಿಕ ಹಾಗೂ ಕಡಿಮೆ ಖರ್ಚಿನಲ್ಲಿ ಲಾಭದಾಯಕವಾಗಿ ಕೃಷಿ ಮಾಡುವ ಕ್ರಮಗಳು, ಅವುಗಳ ನಾಟಿ, ಕೀಟ-ರೋಗ ಬಾಧೆಗಳ ನಿರ್ವಹಣೆ ಕುರಿತ ಸಮಗ್ರ ಮಾಹಿತಿಯನ್ನು ಈ ಕಾರ್ಯಕ್ರಮದಲ್ಲಿ ನೀಡಲಾಗುವುದು. ಪರಿಸರದ ಎಲ್ಲಾ ಕೃಷಿಕರು, ಕೃಷಿ ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿಕ ಸಂಘದ ಪ್ರಕಟಣೆ ತಿಳಿಸಿದೆ.
Next Story