Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶ ಕಂಡ ‘ಮಹಾನ್ ಸುಳ್ಳುಗಾರ’ ಪ್ರಧಾನಿ...

ದೇಶ ಕಂಡ ‘ಮಹಾನ್ ಸುಳ್ಳುಗಾರ’ ಪ್ರಧಾನಿ ಮೋದಿ: ರಾಜ್ ಠಾಕ್ರೆ ಟೀಕೆ

ವಾರ್ತಾಭಾರತಿವಾರ್ತಾಭಾರತಿ30 Sept 2017 10:20 PM IST
share
ದೇಶ ಕಂಡ ‘ಮಹಾನ್ ಸುಳ್ಳುಗಾರ’ ಪ್ರಧಾನಿ ಮೋದಿ: ರಾಜ್ ಠಾಕ್ರೆ ಟೀಕೆ

 ಮುಂಬೈ, ಸೆ.30: ದೇಶದ ಇತಿಹಾಸದಲ್ಲೇ ನರೇಂದ್ರ ಮೋದಿಯಷ್ಟು ಮಹಾನ್ ಸುಳ್ಳುಗಾರ ಪ್ರಧಾನಿಯನ್ನು ಇದುವರೆಗೆ ಕಂಡಿಲ್ಲ ಎಂದು ‘ಮಹಾರಾಷ್ಟ್ರ ನವನಿರ್ಮಾಣ್ ಸೇನೆ’ಯ ಅಧ್ಯಕ್ಷ ರಾಜ್‌ಠಾಕ್ರೆ ಟೀಕಿಸಿದ್ದಾರೆ.

 ನರೇಂದ್ರ ಮೋದಿ ಬಹುದೊಡ್ಡ ಸುಳ್ಳುಗಾರ ಎಂದು ದೂಷಿಸಿದ ಠಾಕ್ರೆ, 2014ರ ಲೋಕಸಭಾ ಚುನಾವಣೆ ಸಂದರ್ಭ ನೀಡಿದ್ದ ಎಲ್ಲಾ ಹೇಳಿಕೆ, ಭರವಸೆಗಳನ್ನೂ ಆ ಬಳಿಕ ಬದಲಾಯಿಸಿದ್ದಾರೆ. ಇಂತಹ ಬಹುದೊಡ್ಡ ಸುಳ್ಳುಗಾರ ಪ್ರಧಾನಿಯನ್ನು ದೇಶ ಇದುವರೆಗೆ ಕಂಡಿಲ್ಲ. ದೊಡ್ಡ ದೊಡ್ಡ ಭರವಸೆ ನೀಡುವುದು, ಬಳಿಕ, ಅದೆಲ್ಲಾ ಚುನಾವಣೆಯ ಲೆಕ್ಕಕ್ಕೆ ಎಂದು ಹೇಳಿಕೆ ನೀಡುವುದು . ಓರ್ವ ವ್ಯಕ್ತಿ ಈ ಪ್ರಮಾಣದಲ್ಲಿ ಸುಳ್ಳು ಹೇಳಲು ಸಾಧ್ಯವೇ ಎಂದು ಜನ ಬೆರಗಾಗಿದ್ದಾರೆ ಎಂದು ಠಾಕ್ರೆ ಹೇಳಿದರು.

 ಎಲ್ಫಿನ್‌ಸ್ಟೋನ್ ರೈಲುನಿಲ್ದಾಣದ ಮೇಲ್ಸೇತುವೆಯಲ್ಲಿ ಕಾಲ್ತುಳಿತಕ್ಕೆ ಸಿಲುಕಿ 23 ಮಂದಿ ಬಲಿಯಾದ ಘಟನೆಯ ಬಗ್ಗೆ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯನ್ನು ತೀವ್ರ ತರಾಟೆಗೆತ್ತಿಕೊಂಡಿರುವ ರಾಜ್‌ಠಾಕ್ರೆ, ಮೊದಲು ರೈಲ್ವೇ ಸ್ಟೇಷನ್‌ಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೊಳಿಸಿ, ಆ ಮೇಲೆ ಬುಲೆಟ್ ಟ್ರೈನ್ ಬಗ್ಗೆ ಚಿಂತಿಸಿ ಎಂದು ಹೇಳಿದ್ದಾರೆ.

ಮುಂಬೈ ರೈಲುಮಾರ್ಗ ಹಾಗೂ ರೈಲ್ವೇ ಮೇಲ್ಸೇತುವೆಗಳಲ್ಲಿರುವ ಸಮಸ್ಯೆಗಳನ್ನು ಮೊದಲು ಸರಿಪಡಿಸಿಕೊಳ್ಳಿ. ನರೇಂದ್ರ ಮೋದಿ ಇಚ್ಚಿಸುವುದಾದರೆ ಬುಲೆಟ್ ಟ್ರೈನನ್ನು ಗುಜರಾತ್‌ನಲ್ಲೇ ನಿರ್ಮಿಸಿಕೊಳ್ಳಲಿ. ಮೂಲಸೌಕರ್ಯ ಅಭಿವೃದ್ಧಿಯಾಗದೆ ಯೋಜನೆಗೆ ಒಂದು ಇಟ್ಟಿಗೆ ಇಡಲೂ ಬಿಡುವುದಿಲ್ಲ. ಅವರು ಬಲ ಪ್ರಯೋಗಿಸಿದರೆ ನಾವು ಕೂಡಾ ಪ್ರತ್ಯುತ್ತರ ನೀಡುತ್ತೇವೆ ಎಂದು ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದರು.

  ರೈಲ್ವೇ ಸಚಿವರಾಗಿದ್ದ ಸುರೇಶ್ ಪ್ರಭುರನ್ನು ಬದಲಿಸಿ ಗೋಯೆಲ್‌ರನ್ನು ನೇಮಿಸಿರುವುದು ಕೇವಲ ಬುಲೆಟ್ ಟ್ರೈನ್‌ಗಾಗಿ ಮಾತ್ರ. ಗೋಯೆಲ್ ನಿಷ್ಪ್ರಯೋಜಕ ವ್ಯಕ್ತಿ ಎಂದು ಠಾಕ್ರೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X