Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ : ಗಮನ ಸೆಳೆದ ಆಯುಧ ಪೂಜಾ...

ಮಡಿಕೇರಿ : ಗಮನ ಸೆಳೆದ ಆಯುಧ ಪೂಜಾ ಕಾರ್ಯಕ್ರಮಗಳು

ವಾರ್ತಾಭಾರತಿವಾರ್ತಾಭಾರತಿ30 Sept 2017 10:47 PM IST
share
ಮಡಿಕೇರಿ : ಗಮನ ಸೆಳೆದ ಆಯುಧ ಪೂಜಾ ಕಾರ್ಯಕ್ರಮಗಳು

ಮಡಿಕೇರಿ,ಸೆ.30 : ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಶುಕ್ರವಾರದಂದು ಆಯುಧ ಪೂಜಾ ಉತ್ಸವ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಒಳಗೊಂಡಂತೆ ವಾಹನಗಳ ಅಲಂಕಾರ, ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ನಗರದ ವಿವಿಧ ದೇಗುಲಗಳಲ್ಲಿ ಬೆಳಗ್ಗಿನಿಂದಲೆ ವಾಹನಗಳಿಗೆ ಪೂಜೆ ಸಲ್ಲಿಸುವ ಕಾರ್ಯದಲ್ಲಿ ಸಾರ್ವಜನಿಕರು ಶ್ರದ್ಧಾ ಭಕ್ತಿಗಳಿಂದ ಪಾಲ್ಗೊಂಡುದು ಕಂಡು ಬರುತ್ತಿತ್ತು. ಉತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದುದಲ್ಲದೆ, ಪೂಜಾ ಸಾಮಗ್ರಿ, ಹೂವಿನ ಮಾರಾಟ  ಜೋರಾಗಿ ನಡೆಯುತ್ತಿತ್ತು.

ಸಂಜೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ  ಆಯುಧ ಪೂಜೆಯ ಹಿನ್ನೆಲೆಯಲ್ಲಿ ಆಯೋಜಿತ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಜೇಂದ್ರ ಪ್ರಸಾದ್ ಮಾತನಾಡಿ, ದುಷ್ಟ ಸಂಹಾರ- ಶಿಷ್ಟ ರಕ್ಷಣೆಯ ಪ್ರತೀಕವಾಗಿ ಆಚರಿಸಲ್ಪಡುವ ನವರಾತ್ರಿ  ಉತ್ಸವ ಸಂಭ್ರಮದ ಹಬ್ಬವಾಗಿದೆ ಎಂದರು. 

ಜಾತಿ ಮತ ಧರ್ಮಗಳನ್ನು ಮೀರಿ  ದಸರಾ  ಉತ್ಸವವನ್ನು ಸರ್ವ ಧರ್ಮೀಯರು ಪ್ರೀತಿ ವಿಶ್ವಾಸಗಳಿಂದ ಜನೋತ್ಸವವನ್ನಾಗಿ ಆಚರಿಸುತ್ತಿದ್ದು, ಇಂತಹ ಉತ್ಸವಕ್ಕೆ  ಅನುದಾನದ ಕೊರತೆ ಆಗಬಾರದೆಂದು ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಸರಾ ಸಮಿತಿಯ ಹಾಗೂ ನಗರಸಭಾ ಉಪಾಧ್ಯಕ್ಷರಾದ ಟಿ.ಎಸ್. ಪ್ರಕಾಶ್, ಕೊಡಗು ಸೇರಿದಂತೆ ದೇಶಾದ್ಯಂತ ಅಶಾಂತಿಯನ್ನು ಹರಡಲೆತ್ನಿಸುವ ದುಷ್ಟ ಶಕ್ತಿಗಳಿದ್ದು, ಇಂತಹ ಶಕ್ತಿಯನ್ನು ಧಮನಿಸುವ ಮೂಲಕ ಭಾರತಮಾತೆಯ ಉಳಿವಿಗಾಗಿ  ಶ್ರಮಿಸಬೇಕೆಂದರು.

ದಸರಾ ಸಮಿತಿಯ ಗೌರವಾಧ್ಯಕ್ಷ ಎಂ.ಜಿ.ಸತೀಶ್ ಪೈ ಮತನಾಡಿ,  ಮಡಿಕೇರಿ ದಸರಾ ಹಿಂದೆ ಪಲ್ಲಕಿಯ ಮೂಲಕ ನಡೆಯುತ್ತಿತ್ತು, ಬಳಿಕ  ಹೂವಿನ ಮಂಟಪವಾಗಿ ಪರಿವರ್ತನೆಗೊಂಡು ಇಂದು ಆಧುನಿಕ ಶೈಲಿಯಲ್ಲಿ ಚಲನ-ವಲನಗಳಿಂದ ಮೇಳೈಸುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ,  ದಶ ಮಂಟಪಗಳ ಸಮಿತಿಯ ಅಧ್ಯಕ್ಷ ಸತೀಶ್ ಧರ್ಮಪ್ಪ ಮಾತನಾಡಿದರು. ವೇದಿಕೆಯಲ್ಲಿ ದಸರಾ ಸಮಿತಿಯ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಆಯುಕ್ತೆ ಶುಭಾ, ಪ್ರಧಾನ ಕಾರ್ಯದರ್ಶಿ ಚುಮ್ಮಿದೇವಯ್ಯ, ಖಜಾಂಚಿ ಸಂಗೀತ ಪ್ರಸನ್ನ ಉಪಸ್ಥಿತರಿದ್ದರು.ಆರಂಭದಲ್ಲಿ ದಸರಾ ಸಮಿತಿಯ ಗೌರವಾಧ್ಯಕ್ಷ ಬೈ.ಶ್ರೀ. ಪ್ರಕಾಶ್ ಸ್ವಾಗತಿಸಿದರು, ದಸರಾ ಉಪ ಸಮಿತಿಯ ಪದಾಧಿಕಾರಿ ಕಾನೆಹಿತ್ಲು ಮೊಣ್ಣಪ್ಪ ವಂದಿಸಿದರು. 

ವಾಹನ ಅಲಂಕಾರ-ಆಯುಧ ಪೂಜಾ ಉತ್ಸವದ ಹಿನ್ನೆಲೆಯಲ್ಲಿ ಆಯೋಜಿತ ವಾಹನಗಳ ಅಲಂಕಾರ ಸ್ಪರ್ಧೆ ಅತ್ಯಾಕರ್ಷಕವಾಗಿ ಮೂಡಿ ಬಂದಿತು. ಸೈಕಲ್‍ನಿಂದ ಹಿಡಿದು ಭಾರೀ ವಾಹನಗಳು ಅತ್ಯಾಕರ್ಷಕವಾಗಿ ಅಲಂಕರಿಸಲ್ಪಟ್ಟು, ದೇವಾನುದೇವತೆಗಳ ವಿಗ್ರಹಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದವು. ಆಯುಧಪೂಜೆ, ದಸರಾಕ್ಕೆ ಸ್ಥಳೀಯ ಕಲಾವಿದರ ಸಂಗೀತ, ನೃತ್ಯಗಳ ಮೆರುಗು. ದಸರಾ ದಿನ ಉಷಾ ಕೋಕಿಲ ಸಂಗೀತ ರಸಮಂಜರಿ.

ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ಆಯುಧಪೂಜಾ ದಿನ ನಡೆದ ಮಡಿಕೇರಿಯ ಲೈಟ್-ಕ್ಯಾಮರ-ಡ್ಯಾನ್ಸ್ ಹೌಸ್ ತಂಡದಿಂದ - ಹಿಪ್ ಅಪ್ ಡ್ಯಾನ್ಸ್, ಆಟಿಟ್ಯೂಡ್ ಡ್ಯಾನ್ಸ್ ತಂಡದಿಂದ ಡ್ಯಾನ್ಸ್ ಫೆಸ್ಟ್, ಮಡಿಕೇರಿಯ ಕಲಾಬಳಗ ತಂಡದಿಂದ ವೀರಚರಿತೆ ನೃತ್ಯ ರೂಪಕ, ಗೋವಿಂದ ರಾಜು, ವಿನಯ್, ದೇವೇಂದ್ರ ಪತ್ತರ್, ಸುವೇದಿತಾ, ನೀಶ್ಮಾ ಜಗದೀಶ್  ಅವರಿಂದ ವೈವಿಧ್ಯಮಯ ಗೀತೆಗಳ ಪ್ರಸ್ತುತಿ ಕಲಾಭಿಮಾನಿಗಳನ್ನು ಆಕರ್ಷಿಸಿತು. ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡದಿಂದ ನೃತ್ಯ, ಬೆಂಗಳೂರಿನ 'ಡಿ' ಕಂಪನಿಯಿಂದ ಡ್ಯಾನ್ಸ್-ಡ್ಯಾನ್ಸ್ ಕಾರ್ಯಕ್ರಮ ಆಯುಧಪೂಜಾ ಸಮಾರಂಭದ ಆಕರ್ಷಣೆಯಾಗಿತ್ತು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X