ಉಡುಪಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಉಡುಪಿ, ಅ.1 : ಹಿರಿಯ ನಾಗರೀಕರನ್ನು ಗೌರವಿಸಿ, ಪ್ರೀತಿಸುವ ವಾತಾವರಣ ದೇಶದ ಮನೆ ಮನೆಯಲ್ಲಿ ನಿರ್ಮಾಣವಾಗಬೇಕು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತುತಿ ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಅವರು ರವಿವಾರ ಎಂಜಿಎಂ ನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ವಕೀಲರ ಸಂಘ, ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ, ವೃದ್ಧಾಶ್ರಮಗಳು, ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಹಿರಿಯ ನಾಗರಿಕರನ್ನು ಕೇವಲ ವೇದಿಕೆಗಳಲ್ಲಿ, ಸಬೆಗಳಲ್ಲಿ ಸನ್ಮಾನಿಸಿದರೆ ಸಾಲದು, ಪ್ರತಿ ಮನೆ ಮನೆಗಳಲ್ಲಿನ ಯುವ ಜನತೆ, ಕುಟುಂಬ ಸದಸ್ಯರು , ಅವರನ್ನು ಗೌರವಿಸಿ, ಪ್ರೀತಿಯಿಂದ ನೋಡಿಕೊಂಡರೆ ರಾಮರಾಜ್ಯದ ಕನಸು ಸಾಕಾರಗೊಳ್ಳುತ್ತದೆ ಎಂದು ಸಚಿವರು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ , ಹಿರಿಯ ನಾಗರೀಕರಿಗೆ ಮನೆಯಲ್ಲಿ ತೊಂದರೆ ನೀಡುವುದು, ಅವರ ಆಸ್ತಿಯನ್ನು ದುರುಪಯೋಗಪಡಿಸಿಕೊಳ್ಳುವುದು ಕಂಡು ಬರುತ್ತಿದೆ , ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ, ಅಂತಹ ಯುವ ಜನತೆ ತಾವು ಸಹ ಮುಂದೆ ವೃದ್ಧರಾದಾಗ ತಮ್ಮ ಮಕ್ಕಳಿಂದ ಇದೇ ಸಮಸ್ಯೆಯನ್ನು ಎದುರಿಸಲಿದ್ದೇವೆ ಎಂಬುದನ್ನು ನೆನಪಿಡಬೇಕು, ಯುವಕರು ಹೆತ್ತವರನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು, ಇದರಿಂದ ಇಡೀ ಸಮಾಜ ಉತ್ತಮಗೊಳ್ಳುತತಿದೆ ಎಂದು ಸಚಿವರು ಹೇಳಿದರು.
ಉಡುಪಿ ಜಿಲ್ಲೆಯಲ್ಲಿ 60 ವರ್ಷ ದಾಟಿದ 25,179 ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಗಿದೆ, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಸ್ಥಾಪಿಸಿ ರುವ ಸಹಾಯವಾಣಿಗೆ ಇದುವರೆವಿಗೆ 3463 ಕರೆ ಬಂದಿದ್ದು, 289 ಪ್ರಕರಣ ದಾಖಲಿಸಿ, 244 ಪ್ರಕರಣ ಇತ್ಯರ್ಥಪಡಿಸಲಾಗಿದೆ , 4803 ಮಂದಿಗೆ ವೃದ್ದಾಪ್ಯ ವೇತನ ಮತುತಿ 67182 ಮಂದಿಗೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿ ನೀಡಲಾಗುತಿತಿದ್ದು, ನವ್ರ್ ಬಸ್ ದರಗಳಲ್ಲಿ ಹಿರಿಯ ನಾಗರಿಕರಿಗೆ ರಿಯಾಯತಿ ನೀಡಲಾಗುತ್ತಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 10 ಹಾಸಿಗೆಗಳ ಜೀರಿಯಾಟ್ರಿಕ್ ವಾಡ್ರ್ ಸೌಲಭ್ಯ ಒದಗಿಸಿದ್ದು, ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಪ್ರಮೋದ್ ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲತಾ ಮಾತನಾಡಿ, ಹಿರಿಯ ನಾಗರೀಕರು ಸಮಾಜ್ಕೆ ಸಲ್ಲಿಸಿರುವ ಸೇವೆ ಮರೆಯಬಾರದು, ಅವರಲ್ಲಿ ಅದ್ರತೆಯ ಬಾವನೆ ಬೆಳೆಯದಂತೆ ನೋಡಿಕೊಳ್ಳಬೇಕು, ಕುಟುಂಬಸ್ಥರು ಅವರನು ಪ್ರೀತಿ ಮಮತೆಯಿಂದ ನೋಡಿಕೊಳ್ಳಬೇಕು, ಹಿರಿಯ ನಾಗರಿಕರ ರಕ್ಷಣೆಗಾಗಿ ಸುಪ್ರೀಂ ಕೋರ್ಟ್ ಹಲವು ಕಾನೂನು ರೂಪಿಸಿದೆ, ಜಿಲ್ಲಾ ಮಟ್ಟದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಅವರಿಗೆ ಸಹಾಯಹಸ್ತ ನೀಡಲಾಗುತ್ತಿದೆ, ಇತ್ತೀಚೆಗೆ ನಾನು ಒಂಟಿಯಲ್ಲ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ, ಕಾನೂನು ತೊಡಕಿನಲ್ಲಿ ಸಿಲುಕಿರುವ ಹಿರಿಯ ನಾಗರಿಕರಿಗೆ ಮನೆ ಬಾಗಿಲಿಗೆ ನುರಿತ ವಕೀಲರನ್ನು ಕಳುಹಿಸಿ, ಅವರಿಗೆ ಕಾನೂನು ನೆರವು ನೀಡುವ ಕ್ಲಿನಿಕ್ ನ್ನು ಜಿಲ್ಲೆಯಲ್ಲಿ ಪ್ರಾರಂಬಿಸಲು ಸಿದ್ಧತೆ ನಡೆದಿದೆ, ಕುಟುಂಬದಲ್ಲಿ ಹಿರಿಯ ನಾಗರಿಕರು ಇಲ್ಲವಾದ್ದರಿಂದ , ಕುಟುಂಬಗಳಲ್ಲಿ ಕೌಟುಂಬಿಕ ವ್ಯಾಜ್ಯ ಪ್ರಕರಣಗಳು ಹೆಚ್ಚುತ್ತಿವೆ , ಆದ್ದರಿಂದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಹಿರಿಯ ನಾಗರಿಕರನ್ನು ಒಳಗೊಂಡ ಸಮಿತಿಯನ್ನು ರಚಿಸಿ, ಹಿರಿಯ ನಾಗರಿಕರ ಸಲಹೆ ಸೂಚನೆಗಳ ಮೂಲಕ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಲು ಸಮಿತಿಯನ್ನು ಚಿಸಲಾಗುತ್ತಿದೆ ಎಂದು ಹೇಳಿದರು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ , ಹಿರಿಯ ನಾಗರಿಕರಾದ, ಡಾ. ಎಂ.ಆರ್.ಹೆಗ್ಡೆ, ಪಿ.ಎನ್.ಆಚಾರ್ಯ, ಡಾ.ಬಿ.ವಿ ಮಾರ್ಕಂಡೆ, ಕೆ. ನರಸಿಂಹ ಶೆಟ್ಟಿಗಾರ್, ಲಲತಾ ನಾಯ್ಕ, ಡಾ. ನೇರಿ ಕರ್ನೇಲಿಯೊ, ನಂದಳಿಕೆ ಬಾಲಚಂದ್ರ ರಾವ್ ಹಾಗೂ ಹಿರಿಯ ನಾಗರಿಕರ ಸಹಾಯವಾಣಿ ಯನ್ನು ಸಚಿವರು ಸನ್ಮಾನಿಸಿದರು.
ಹಿರಿಯ ನಾಗರೀಕರ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಡುಪಿ ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಖೆಯ ಉಪ ನಿರ್ದೇಶಕಿ ಗ್ರೇಸಿ ಗೋನ್ಸಾಲ್ವಿಸ್, ಉಡುಪಿ ಜಿಲ್ಲಾ ಹಿರಿಯ ನಾಗರಿಕರ ಒಕ್ಕೂಟದ ಅಧ್ಯಕ್ಷ ಎ.ಪಿ.ಕೊಡಂಚ, ಹಿರಿಯ ನಾಗರಿಕರ ಸಹಾಯವಾಣಿಯ ಸರಳಾ ಕಾಂಚನ್ ಹಾಗೂ ಹಿರಿಯ ನಾಗರಿಕರ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಮನೋವೈದ್ಯ ಡಾ. ವಿರೂಪಾಕ್ಷ ದೇವರ ಮನೆ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ನಿರಂಜನ್ ಭಟ್ ಸ್ವಾಗತಿಸಿದರು, ಗಣೇಶ್ ಆರ್ ಮರಾಠೆ ವಂದಿಸಿದರು.