Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜಕಾರಣಿಗಳ ನಿರ್ಲಕ್ಷ್ಯವೇ ಕಾಸರಗೋಡು...

ರಾಜಕಾರಣಿಗಳ ನಿರ್ಲಕ್ಷ್ಯವೇ ಕಾಸರಗೋಡು ಕೇರಳ ಪಾಲಾಗಲು ಕಾರಣ: ಡಾ.ಸಿದ್ದಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ1 Oct 2017 7:39 PM IST
share

ಬೆಂಗಳೂರು, ಅ.1: ಕರ್ನಾಟಕದ ರಾಜಕಾರಣಿಗಳು ಹಾಗೂ ಸಂಘ-ಸಂಸ್ಥೆಗಳ ನಿರ್ಲಕ್ಷ್ಯದಿಂದ ಕಾಸರಗೋಡು ಕೇರಳ ಪಾಲಾಗಲು ಕಾರಣ ಎಂದು ಹಿರಿಯ ಸಾಹಿತಿ ಹಾಗೂ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿದ್ದಲಿಂಗಯ್ಯ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದ ನಯನ ಸಭಾಂಗಣದಲ್ಲಿ ಹೊಂಬಾಳೆ ಪ್ರತಿಭಾರಂಗದಿಂದ ಕಯ್ಯಾರ ಕಿಞ್ಞಣ್ಣ ರೈ ನೆನಪಿನಾರ್ಥವಾಗಿ ಆಯೋಜಿಸಿದ್ದ ಕವಿದನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇರಳದ ಮೊದಲ ಮುಖ್ಯಮಂತ್ರಿಯಾಗಿದ್ದ ನಂಬೂದರಿಪಾಡ್ ತಮ್ಮ ಪಕ್ಷದ ಪತ್ರಿಕೆಗೆ ಬರೆದ ಲೇಖನದಲ್ಲಿ ಕಾಸರಗೋಡು ನ್ಯಾಯಯುತವಾಗಿ ಕರ್ನಾಟಕ್ಕೆ ಸೇರಿದ್ದು ಎಂದು ಉಲ್ಲೇಖಿಸಿದ್ದರು ಎಂದರು.

ಅಂದಿನ ಸರಕಾರ ಹಾಗೂ ಸಂಘಟನೆಗಳು, ರಾಜಕಾರಣಿಗಳು ಉತ್ಸಾಹ ಹಾಗೂ ಬೆಂಬಲ ನೀಡಿದ್ದರೆ, ನಂಬೂದರಿಪಾಡ್ ಕಾಸರಗೋಡನ್ನು ಕರ್ನಾಟಕಕ್ಕೆ ಒಪ್ಪಿಸುಬಿಡುತ್ತಿದ್ದರು. ಆದರೆ, ಅಂದು ಹಿಂದೆ ಸರಿದರು. ಹೀಗಾಗಿ, ಮಹಾಜನ್ ಸಮಿತಿ ಸಲ್ಲಿಸಿದ ವರದಿ ಅನ್ವಯ ಕೇರಳಗೆ ಅದನ್ನು ಸೇರಿಸಿದರು. ಇದರ ಪರಿಣಾಮವಿಂದು ಅಲ್ಲಿನ ಕನ್ನಡಿಗರು ಆತಂಕದ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ಕನ್ನಡಾಭಿಮಾನ: ರಾಜ್ಯದ ಜನತೆ ಕಾಸರಗೋಡಿನವರಿಂದ ಕನ್ನಡಾಭಿಮಾನವನ್ನು ಕಲಿಯಬೇಕು. ಗಡಿನಾಡಿನಲ್ಲಿರುವ ಕಾಸರಗೋಡಿನ ವಿದ್ಯಾರ್ಥಿಗಳು ಕನ್ನಡದಲ್ಲಿ ಪಠ್ಯ-ಪುಸ್ತಕಗಳು ಬೇಕೆಂದು ಕೇಳುತ್ತಾರೆ. ಆದರೆ, ಕರ್ನಾಟಕದ ಜನರು ದಿನನಿತ್ಯ ಅತ್ಯುತ್ತಮ ಆಂಗ್ಲ ಮಾಧ್ಯಮ ಶಾಲೆಗಳನ್ನು ಹುಡುಕುತ್ತಾರೆಂದು ಹೇಳಿದರು.

ಕನ್ನಡಕ್ಕಾಗಿ, ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದವರು ಹಾಗೂ ಕಾಸರಗೋಡನ್ನು ಕೇರಳಕ್ಕೆ ಸೇರಿದಾಗ ದುಃಖಪಟ್ಟಂತಹವರು ಕವಿ ಕಯ್ಯೆರ ಕಿಞ್ಞಣ್ಣ ರೈ. ಅಲ್ಲದೆ, ಕಿಞ್ಞಣ್ಣ ರೈ ಒಬ್ಬ ಪ್ರಗತಿಪರ ಚಿಂತಕನಾಗಿದ್ದು, ಕನ್ನಡದ ಬಗ್ಗೆ ಅಪಾರವಾದ ಪ್ರೀತಿಯುಳ್ಳವರಾಗಿದ್ದರು. ವರ್ಗರಹಿತ, ವರ್ಣ ರಹಿತ ಸಮಾಜ ನಿರ್ಮಾಣವಾಗಬೇಕು ಎಂದು ಬಯಸಿದವರು. ಸಮಾಜಮುಖಿ ಕವಿ, ಸ್ವಾತಂತ್ರ ಹೋರಾಟಗಾರರಾಗಿದ್ದ ಅವರು, ಅತ್ಯುತ್ತಮ ಕೃಷಿಕರು ಮತ್ತು ರಾಜಕಾರಣಿಯಾಗಿದ್ದರು ಎಂದು ನುಡಿದರು.

ನಮ್ಮ ದೇಶದಲ್ಲಿ ಇಂದಿಗೂ ಸ್ವತಂತ್ರವಾಗಿ ಆಲೋಚನೆ ಮಾಡುವ ಶಕ್ತಿಯಿಲ್ಲ ಎಂದ ಅವರು, ಸ್ವಾತಂತ್ರ ದಿನಾಚರಣೆ ಅಥವಾ ಇನ್ನಿತರೆ ದಿನಾಚರಣೆಗಳ ವೇಳೆ ತಲೆಕೆಳಗಾಗಿ ರಾಷ್ಟ್ರ ಧ್ವಜವನ್ನು ಹಾರಿಸುವ ಅಧಿಕಾರಿಗಳು, ರಾಜಕಾರಣಿಗಳು ಇರುವುದು ದುರಂತ. ಇಂತ ಸಂದರ್ಭದಲ್ಲಿ ಕಿಞ್ಞಣ್ಣ ರೈ ರಾಷ್ಟ್ರವೆಂದರೆ ಮೂರು ಬಣ್ಣಗಳುಳ್ಳ ಬಟ್ಟೆಯ ಬಾವುಟವಲ್ಲ, ಅದು ನಮ್ಮ ಪ್ರತೀಕದ ಸಂಕೇತ ಎಂಬ ಸಂದೇಶ ಸಾರಿದ್ದಾರೆ ಎಂದರು.

ಕಾಸರಗೋಡಿನ ಜನರ ಧ್ವನಿಗೆ ಬೆಂಬಲವಾಗಿ ಧ್ವನಿಗೂಡಿಸುವುದು ಕೈಯಾರ ಕಿಞ್ಞಣ್ಣ ರೈ ಅವರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಕವಯತ್ರಿ ಪ್ರೊ.ಸುಕನ್ಯಾ ಮಾರುತಿ, ಕಯ್ಯಾರ ಕಿಞ್ಞಣ್ಣ ರೈ ಪುತ್ರ ಡಾ.ಪ್ರಸನ್ನ ರೈ, ಶ್ರೀಮತಿ ಜಯರಾಂ, ಪುತ್ತೂರು ನರಸಿಂಹ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X