Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಅಪ್ಪನ ಕಾಳಜಿ ಮುಂದುವರಿಸಿಕೊಂಡು...

'ಅಪ್ಪನ ಕಾಳಜಿ ಮುಂದುವರಿಸಿಕೊಂಡು ಹೋಗಿದ್ದ ಗೌರಿ ಲಂಕೇಶ್' : ಚಿಂತಕ ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ1 Oct 2017 9:32 PM IST
share
ಅಪ್ಪನ ಕಾಳಜಿ ಮುಂದುವರಿಸಿಕೊಂಡು ಹೋಗಿದ್ದ ಗೌರಿ ಲಂಕೇಶ್ : ಚಿಂತಕ ಶಿವಸುಂದರ್

ಶಿವಮೊಗ್ಗ, ಸೆ. 1: 'ಲಂಕೇಶ್‍ರವರ ಕಾಳಜಿ, ಆದರ್ಶಗಳನ್ನು ಗೌರಿ ಲಂಕೇಶ್‍ರವರು ಚಾಚೂ ತಪ್ಪದೆ ಪಾಲನೆ ಮಾಡಿಕೊಂಡು ಬಂದಿದ್ದರು. ಅದರಂತೆ ಅವರು ನಡೆದುಕೊಂಡರು' ಎಂದು ಹೋರಾಟಗಾರ, ಪ್ರಗತಿಪರ ಚಿಂತಕ, ಗೌರಿ ಲಂಕೇಶ್‍ರವರ ಒಡನಾಡಿ ಶಿವಸುಂದರ್‍ ಸ್ಮರಿಸಿದ್ದಾರೆ. 

ನಗರದ ಹೊರವಲಯ ಆಲ್ಕೋಳದ ಎಸ್ ಎಮ್ ಎಸ್ ಎಸ್ ಸಭಾಂಗಣದಲ್ಲಿ ರವಿವಾರ ಅಹರ್ನಿಶಿ ಪ್ರಕಾಶನ ಹಾಗೂ ವಿವೇಕ ಸಂಸ್ಥೆ ಆಯೋಜಿಸಿದ್ದ 'ಗೌರಿ ಲಂಕೇಶ್ ನೆನಪು ಮತ್ತು ಪುಸ್ತಕ ಮಾತು' ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

ಆಂಗ್ಲ ಪತ್ರಕರ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಗೌರಿ ಲಂಕೇಶ್‍ರವರು ತಂದೆ ಲಂಕೇಶ್ ಮರಣ ಹೊಂದಿದ ನಂತರ ತಂದೆಯ ಪತ್ರಿಕೋದ್ಯಮದ ಕಾಯಕ ಮುಂದುವರಿಸಲು ನಿರ್ಧರಿಸಿದರು. ಅದರಂತೆ ಸತತ ಎರಡು ವರ್ಷಗಳ ಕಾಲ ಕನ್ನಡ ಭಾಷೆ ಕಲಿತುಕೊಂಡರು. ಇದಕ್ಕಾಗಿ ಅವಿರತವಾಗಿ ಅಧ್ಯಯನ ನಡೆಸಿದರು. ವ್ಯಾಕರಣದ ಲೋಪದೋಷ ತಿದ್ದಿಕೊಂಡರು. ಸ್ನೇಹಿತರು, ಹಿತೈಷಿಗಳ ಸಹಕಾರ ಪಡೆದುಕೊಂಡರು. ನಾಲ್ಕು ವರ್ಷಗಳ ನಂತರ ಕನ್ನಡ ಭಾಷೆಯಲ್ಲಿ ಸಂಪೂರ್ಣ ಹಿಡಿತ ಹೊಂದಿದರು. ನಮಗೆ ಕನ್ನಡ ಭಾಷೆ, ಬರವಣಿಗೆಯ ಬಗ್ಗೆ ತಿಳಿ ಹೇಳುವ ರೀತಿಯಲ್ಲಿ ಭಾಷಾ ಸಾಮಥ್ರ್ಯ ಮೈಗೂಡಿಸಿಕೊಂಡಿದ್ದರು. ಇದು ಅವರ ಬದ್ದತೆ, ದೃಢ ಮನ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು. 

ತಂದೆಯ ಹಾದಿಯಲ್ಲಿ ಅವರು ಮುನ್ನಡೆಯುವ ವೇಳೆ ಆರ್ಥಿಕವಾಗಿ, ರಾಜಕೀಯವಾಗಿ, ಪತ್ರಿಕೋದ್ಯಮದ ಸೇರಿದಂತೆ ನಾನಾ ಕ್ಷೇತ್ರದಲ್ಲಿ ಹತ್ತು ಹಲವು ರೀತಿಯ ಸವಾಲುಗಳನ್ನು ಎದುರಿಸಬೇಕಾಯಿತು. ಆದರೆ ಈ ಎಲ್ಲ ಸವಾಲುಗಳನ್ನು ಅತ್ಯಂತ ಸಮರ್ಥವಾಗಿ ಎದುರಿಸಿ ಮುನ್ನುಗ್ಗಿದರು. ಜೊತೆಗೆ ಇದರಲ್ಲಿ ಯಶಸ್ವಿ ಕೂಡ ಆದರು ಎಂದರು. 

ಇದೇ ಸಂದರ್ಭದಲ್ಲಿ ಇರ್ಷಾದ್ ಉಪ್ಪಿನಂಗಡಿಯವರ 'ಸ್ವರ್ಗದ ಹಾದಿಯಲ್ಲಿ', ಜಿ.ಟಿ.ಸತೀಶ್‍ರವರು ಅನುವಾದಿಸಿರುವ ಖ್ಯಾತ ಪತ್ರಕರ್ತ ಅಜಿತ್ ಪಿಳ್ಳೈಯವರ 'ಇದು ಯಾವ ಸೀಮೆಯ ಚರಿತ್ರೆ?' ಎಂಬ ಪುಸ್ತಕಗಳ ಬಗ್ಗೆ ಸಾಹಿತಿ ಭಾನು ಮುಷ್ತಾಕ್ ಮತ್ತು ಎ. ನಾರಾಯಣರವರು ಮಾತನಾಡಿದರು.

ಸಮಾರಂಭದಲ್ಲಿ ಇರ್ಷಾದ್ ಉಪ್ಪಿನಂಗಡಿ, ಜಿ.ಟಿ. ಸತೀಶ್ ಮೊದಲಾದವರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X