Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮಾತೃಪೂರ್ಣ ಯೋಜನೆಗೆ ಪ್ರಮೋದ್...

ಉಡುಪಿ: ಮಾತೃಪೂರ್ಣ ಯೋಜನೆಗೆ ಪ್ರಮೋದ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ2 Oct 2017 7:35 PM IST
share
ಉಡುಪಿ: ಮಾತೃಪೂರ್ಣ ಯೋಜನೆಗೆ ಪ್ರಮೋದ್ ಚಾಲನೆ

ಉಡುಪಿ, ಅ.2: ರಾಜ್ಯಾದ್ಯಂತ ಇಂದು ಪ್ರಾರಂಭಗೊಂಡ ರಾಜ್ಯ ಸರಕಾರದ ನೂತನ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಪೂರ್ಣ ಯೋಜನೆಗೆ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಅವರು ನಗರದ ಬೋರ್ಡ್ ಹೈಸ್ಕೂಲ್‌ನಲ್ಲಿ ಚಾಲನೆ ನೀಡಿದರು.

ದೀಪ ಬೆಳಗಿಸುವ ಮೂಲಕ ಮಾತೃಪೂರ್ಣ ಯೋಜನೆಯನ್ನು ಉದ್ಘಾಟಿಸಿದ ಪ್ರಮೋದ್ ಬಳಿಕ ತಟ್ಟೆಗೆ ಅನ್ನ, ಸಾರು, ಪಲ್ಯಗಳು, ಮೊಟ್ಟೆ ಹಾಗೂ ಚಿಕ್ಕಿಯನ್ನು ಬಡಿಸುವ ಹಾಗೂ ಲೋಟದಲ್ಲಿ ಹಾಲನ್ನು ನೀಡುವ ಮೂಲಕ ಗರ್ಭಿಣಿ ಹಾಗು ಬಾಣಂತಿಯರಿಗೆ ಪೌಷ್ಠಿಕ ಬಿಸಿಯೂಟ ಕಾರ್ಯಕ್ರಮವನ್ನೂ ಉದ್ಘಾಟಿಸಿದರು.

ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ತಡೆಗಟ್ಟುವ ಹಾಗೂ ಗರ್ಭಿಣಿ, ಬಾಣಂತಿ ಯರಿಗೆ ಸತ್ವಶಾಲಿ, ಪೌಷ್ಠಿಕ ಆಹಾರವನ್ನು ಒದಗಿಸುವ ಮೂಲಕ ಅವರ ಆರೋಗ್ಯವನ್ನು ಉತ್ತಮಪಡಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ದೇಶದಲ್ಲೇ ಅತೀ ಕಡಿಮೆ ಶಿಶು ಮರಣ ಹಾಗೂ ತಾಯಿ ಮರಣವನ್ನು ಹೊಂದಿರುವ ಉಡುಪಿ ಜಿಲ್ಲೆಯಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಇದನ್ನು ವಿಸ್ತರಿಸಲು ಮಕ್ಕಳು ಮತ್ತು ಗರ್ಭಿಣಿಯರಿಗೆ ಮೊಟ್ಟೆ, ಹಾಲು ಸಹಿತ ಪೌಷ್ಠಿಕ ಆಹಾರವನ್ನು ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದವರು ಹೇಳಿದರು.

ಅಪೌಷ್ಠಿಕತೆಯಿಂದ ಬಳಲುವ ಮಗು ಹಾಗೂ ಕಡಿಮೆ ತೂಕದ ಮಗುವಿನ ಜನನವನ್ನು ತಡೆಗಟ್ಟಲು, ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನೊಳಗೊಂಡ ಬಿಸಿಯೂಟವನ್ನು ಅವರ ಪ್ರದೇಶದ ಅಂಗನವಾಡಿ ಕೇಂದ್ರಗಳಲ್ಲಿ ನೀಡಲಾಗುತ್ತದೆ ಎಂದು ಪ್ರಮೋದ್ ನುಡಿದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ನಾಲ್ಕು ವರ್ಷಗಳಿಗೂ ಅಧಿಕ ಆಡಳಿತಾವಧಿಯಲ್ಲಿ ಜಾರಿಗೊಳಿಸಿದ ಅನೇಕ ಕ್ರಾಂತಿಕಾರಿ ಹಾಗೂ ದೂರದೃಷ್ಟಿಯ ಕಾರ್ಯಕ್ರಮಕ್ಕೆ ಮಾತೃಪೂರ್ಣ ಯೋಜನೆ ಹೊಸ ಸೇರ್ಪಡೆ ಯಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಪ್ರಮೋದ್ ಮಧ್ವರಾಜ್ ಹೇಳಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಅಪರ ಜಿಲ್ಲಾಧಿಕಾರಿ ಅನುರಾಧ, ಜಿಲ್ಲಾ ಆರೋಗ್ಯಾ ಧಿಕಾರಿ ಡಾ.ರೋಹಿಣಿ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗೇಶ್ ಶ್ಯಾನುಭಾಗ್, ನಿರಂಜನ್ ಭಟ್ ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಗ್ರೇಸಿ ಗೊನ್ಸಾಲ್ವೀಸ್ ಅತಿಥಿಗಳನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ವಿವೇಕಾನಂದ ವಂದಿಸಿದರೆ, ಉಡುಪಿ ವಲಯ ಮೇಲ್ವಿಚಾರಕಿ ಮೀರಾಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಗರ್ಭಿಣಿ, ಬಾಣಂತಿಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬೆಳಗ್ಗೆ 11:00ರಿಂದ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X