Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅದೊಂದು ಹಾರರ್ ಶೋ ಆಗಿತ್ತು...

ಅದೊಂದು ಹಾರರ್ ಶೋ ಆಗಿತ್ತು...

ಲಾಸ್‌ವೇಗಾಸ್‌ ಶೂಟೌಟ್‌ನ ಪ್ರತ್ಯಕ್ಷದರ್ಶಿಯ ಭಯಾನಕ ಅನುಭವ

ವಾರ್ತಾಭಾರತಿವಾರ್ತಾಭಾರತಿ2 Oct 2017 10:07 PM IST
share
ಅದೊಂದು ಹಾರರ್ ಶೋ ಆಗಿತ್ತು...

ಲಾಸ್‌ವೆಗಾಸ್,ಅ.2: ‘‘ ಅದೊಂದು ಹಾರರ್ ಶೋ ಆಗಿತ್ತು. ಸುತ್ತಲೂ ನಿಂತಿದ್ದ ಜನರು, ಒಮ್ಮಿಂದೊಮ್ಮೆಗೆ ನೆಲಕ್ಕೆ ಉರುಳಿದರು...’’. ರವಿವಾರ ರಾತ್ರಿ ಅಮೆರಿಕದ ಲಾಸ್‌ವೆಗಾಸ್ ನಗರದಲ್ಲಿ ನಡೆದ ಸಂಗೀತ ಗೋಷ್ಠಿಯಲ್ಲಿ ಬಂಧೂಕುಧಾರಿಯೊಬ್ಬ ಮನಬಂದಂತೆ ಗುಂಡುಹಾರಿಸಿ, 50ಕ್ಕೂ ಅಧಿಕ ಮಂದಿಯನ್ನು ಬಲಿತೆಗೆದುಕೊಂಡ ಘಟನೆಯನ್ನು ಕಣ್ಣಾರೆಕಂಡ ಇವೆಟ್ಟಾ ಸಲ್ದಾನಾ, ಅದೊಂದು ಭಯಾನಕ ಕ್ಷಣಗಳಾಗಿದ್ದವೆಂದು ಹೇಳಿದ್ದಾರೆ.

 ಶುಕ್ರವಾರ ಆರಂಭಗೊಂಡಿದ್ದ ಈ ಜಾನಪದ ಸಂಗೀತಗೋಷ್ಠಿಯ ಕೊನೆಯ ದಿನ ವಾದ ರವಿವಾರ 30 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಸಮುದ್ರದ ತೀರದಲ್ಲಿರುವ ಮಂಡಲಾಯ್ ಬೇ ಸಮೀಪವೇ ಈ ಸಂಗೀತ ಗೋಷ್ಠಿ ನಡೆಯುತ್ತಿತ್ತು. ಕಾರ್ಯಕ್ರಮದ ಕೊನೆಯ ಗಾಯಕರಲ್ಲೊಬ್ಬರಾದ ಜೇಸನ್ ಆ್ಯಡ್ಲಿಯನ್ ಅವರ ಸಂಗೀತ ಗೋಷ್ಠಿ ನಡೆಯುತ್ತಿದ್ದಾಗ ಹಂತಕನು ಗುಂಡು ಹಾರಾಟ ಆರಂಭಿಸಿದ್ದನೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

 ಟ್ವಿಟರ್ ಮತ್ತಿತರ ಜಾಲತಾಣಗಳಲ್ಲಿ ಘಟನೆಯ ಕುರಿತಾದ ವೀಡಿಯೊಗಳು ಪ್ರಸಾರವಾಗುತ್ತಿದ್ದು, ಅದರಲ್ಲಿ ಗುಂಡೆಸೆತಗಳ ಸದ್ದಿನ ನಡುವೆ ಜನರು ಜೋರಾಗಿ ಕಿರುಚುತ್ತಾ ದಿಕ್ಕುಪಾಲಾಗಿ ಓಡುತ್ತಿರುವ ದೃಶ್ಯಗಳು ಕಂಡುಬಂದಿವೆ. ಸುಮಾರು 5 ನಿಮಿಷಗಳಿಗೂ ಅಧಿಕ ಸಮಯದವರೆಗೆ ಗುಂಡು ಹಾರಾಟ ನಡೆದಿದ್ದಾಗಿ, ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಗುಂಡೆಸೆತದಲ್ಲಿ ಗಾಯಗೊಂಡವರಲ್ಲಿ ಕೆಲವರನ್ನು ಲಾಸ್‌ವೆಗಾಸ್‌ನ ಯೂನಿವರ್ಸಿಟಿ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಕ್ತಾರೆಯೊಬ್ಬರು ಹೇಳಿದ್ದಾರೆ. ಗುಂಡೆಸೆತದಲ್ಲಿ ಬೇಕ್ಸ್‌ಫೀಲ್ಡ್ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿ ಕೂಡಾ ಸಾವನ್ನಪ್ಪಿದ್ದಾರೆಂದು ಅಧಿಕೃತ ಮೂಲಗಳು ಹೇಳಿವೆ.

  ಶೂಟೌಟ್ ಘಟನೆಯ ಬಳಿಕ ಲಾಸ್‌ವೆಗಾಸ್‌ನ ಮ್ಯಾಕ್‌ಕರಾನ್‌ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬರುತ್ತಿದ್ದ ಹಲವಾರು ವಿಮಾನಗಳ ಪಥವನ್ನು ಬೇರೆಡೆಗೆ ತಿರುಗಿಸಲಾಗಿತ್ತು. ಕೆಲವು ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆದರೆ ಸೋಮವಾರ ಮುಂಜಾನೆಯ ವೇಳೆಗೆ ಕೆಲವು ವಿಮಾನಗಳು ಹಾರಾಟವನ್ನು ಪುನಾರಾಂಭಿಸಿರುವುದಾಗಿ ತಿಳಿದುಬಂದಿದೆ.

‘‘ರೂಟ್ 91 ಹಾರ್ವೆಸ್ಟ್ ಫೆಸ್ಟಿವಲ್’ ಎಂಬ ಹೆಸರಿನ ಈ ಜಾನಪದ ಸಂಗೀತಗೋಷ್ಠಿಯನ್ನು ಮ್ಯಾಂಡಲಾಯ್ ಬೇ ಸಮೀಪದ 15 ಎಕರೆ ಪ್ರದೇಶದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸಿಕೊಂಡು ಬರಲಾಗುತ್ತಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X