Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಗಲ್ಫ್ ಮೆಡಿಕಲ್ ವಿವಿಯಲ್ಲಿ ‘ವೈಟ್‌ಕೋಟ್’...

ಗಲ್ಫ್ ಮೆಡಿಕಲ್ ವಿವಿಯಲ್ಲಿ ‘ವೈಟ್‌ಕೋಟ್’ ಸಮಾರಂಭ

ಒಟ್ಟು 80 ದೇಶಗಳ ವಿದ್ಯಾರ್ಥಿಗಳ ಸಂಗಮ

ವಾರ್ತಾಭಾರತಿವಾರ್ತಾಭಾರತಿ2 Oct 2017 11:03 PM IST
share
ಗಲ್ಫ್ ಮೆಡಿಕಲ್ ವಿವಿಯಲ್ಲಿ ‘ವೈಟ್‌ಕೋಟ್’ ಸಮಾರಂಭ

ಅಜ್ಮಾನ್, ಅ.2: ತುಂಬೆ ಸಮೂಹ ಸಂಸ್ಥೆಯ ಅಧೀನಸಂಸ್ಥೆ, ಯುಎಇಯಲ್ಲಿ ಇರುವ ಖ್ಯಾತ ಖಾಸಗಿ ವಿಶ್ವವಿದ್ಯಾನಿಲಯ ಗಲ್ಫ್ ಮೆಡಿಕಲ್ ಯುನಿವರ್ಸಿಟಿ(ಜಿಎಂಯು)ಯಲ್ಲಿ ‘ವೈಟ್‌ಕೋಟ್’ ಸಮಾರಂಭ ಇತ್ತೀಚೆಗೆ ನಡೆಯಿತು.

 ಜಿಎಂಯುಗೆ ನೋಂದಾಯಿತಗೊಂಡಿರುವ ವಿವಿಧ ಕಾಲೇಜುಗಳಲ್ಲಿ ವೈದ್ಯಕೀಯ, ಫಿಸಿಯೋಥೆರಪಿ, ದಂತವಿಜ್ಞಾನ, ಬಯೊಮೆಡಿಕಲ್ ಸಯನ್ಸ್, ಫಾರ್ಮಸಿ, ಲ್ಯಾಬೊರೆಟರಿ ಸಯನ್ಸ್, ನರ್ಸಿಂಗ್ ಮುಂತಾದ ಕೋರ್ಸ್‌ಗಳಿಗೆ ದಾಖಲಾಗಿರುವ ನೂತನ ವಿದ್ಯಾರ್ಥಿಗಳಿಗೆ ‘ವೈಟ್ ಕೋಟ್’ (ಬಿಳಿ ಮೇಲಂಗಿ) ಹಸ್ತಾಂತರಿಸುವ ಕಾರ್ಯಕ್ರಮ ಅಜ್ಮಾನ್‌ನಲ್ಲಿರುವ ಜಿಎಂಯುನ ಪ್ರಧಾನ ಸಭಾಂಗಣದಲ್ಲಿ ನಡೆಯಿತು.

ಈಗ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯಲ್ಲಿ ಒಟ್ಟು 80 ದೇಶಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅಧ್ಯಯನ ನಡೆಸುತ್ತಿದ್ದಾರೆ.

ಮುಖ್ಯ ಅತಿಥಿಯಾಗಿದ್ದ ಜಿಎಂಯುನ ಸ್ಥಾಪಕ ಹಾಗೂ ಜಿಎಂಯು ಆಡಳಿತ ಮಂಡಳಿ(ಬೋರ್ಡ್ ಆಫ್ ಟ್ರಸ್ಟಿ)ಯ ಅಧ್ಯಕ್ಷ ತುಂಬೆ ಮೊಯ್ದಿನ್ ಮಾತನಾಡಿ, ಜಿಎಂಯುವಿನ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ನಿರಂತರ ಸಹಕಾರ ನೀಡುತ್ತಿರುವ ಅಜ್ಮಾನ್‌ನ ದೊರೆ, ಯುಎಇ ಸುಪ್ರೀಂಕೌನ್ಸಿಲ್ ಸದಸ್ಯ ಶೇಖ್ ಹುಮೈದ್ ಬಿನ್ ರಷೀದ್ ಅಲ್ ನುವಮಿಯವರಿಗೆ ಕೃತಜ್ಞತೆ ಅರ್ಪಿಸಿದರು. ಉನ್ನತ ಶಿಕ್ಷಣಾರ್ಥಿಗಳಿಗೆ ಜಿಎಂಯು ದಾರಿದೀಪವಾಗಿದೆ ಎಂದವರು ಹೇಳಿದರು.

 ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರಿ ಮಾತನಾಡಿದ ಪ್ರೊ.ಹೊಸ್ಸಂಹಮ್ದಿ, ವಿದ್ಯಾರ್ಥಿಗಳು ವೈದ್ಯಕೀಯ ವೃತ್ತಿಯಲ್ಲಿ ಹಾಗೂ ಆರೋಗ್ಯಸೇವೆ ವಿಭಾಗದಲ್ಲಿ ತಮ್ಮ ಶೈಕ್ಷಣಿಕ ಅಧ್ಯಯನವನ್ನು ಆರಂಭಿಸುವ ಸಾಂಕೇತಿಕ ಕಾರ್ಯಕ್ರಮವಾಗಿ ಈ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ‘ವೈಟ್‌ಕೋಟ್’ ಸ್ವೀಕರಿಸುವ ಹಾಗೂ ಅದನ್ನು ಧರಿಸುವ ಮೂಲಕ, ರೋಗಿಗಳ ಹಾಗೂ ಸಹಾಯದ ಅಗತ್ಯವಿರುವ ವ್ಯಕ್ತಿಗಳಿಗೆ ಸದಾ ಸೇವೆ ಸಲ್ಲಿಸುವ ಜವಾಬ್ದಾರಿಗೆ ವಿದ್ಯಾರ್ಥಿಗಳು ಬದ್ಧರಾದಂತಾಗಿದೆ . ವೃತ್ತಿಪರತೆ, ಶ್ರದ್ಧೆ ಮತ್ತು ಅನುಭೂತಿ ನೀವು ಆರಿಸಿಕೊಂಡ ವೃತ್ತಿಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಹೇಳಿದರು.

  ಜಿಎಂಯು ಕುಲಾಧಿಪತಿ ಪ್ರೊ.ಹೊಸ್ಸಂಹಮ್ದಿ, ಆರೋಗ್ಯರಕ್ಷಣೆ ವಿಭಾಗದ ಉಪಾಧ್ಯಕ್ಷ ಹಾಗೂ ತುಂಬೆ ಗ್ರೂಪ್ ಬೋರ್ಡ್‌ನ ಸದಸ್ಯ ಅಕ್ಬರ್ ಮೊಯ್ದಿನ್ ತುಂಬೆ, ತುಂಬೆ ಟೆಕ್ನಾಲಜೀಸ್‌ನ ನಿರ್ದೇಶಕ ಹಾಗೂ ತುಂಬೆ ಗ್ರೂಪ್ ಬೋರ್ಡ್‌ನ ಸದಸ್ಯಅಕ್ರಮ್ ಮೊಯ್ದಿನ್ ತುಂಬೆ, ತುಂಬೆ ಸಮೂಹ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಜಿಎಂಯುನ ಡೀನ್‌ಗಳು, ಜಿಎಂಯುವಿನ ಅಂತಾರಾಷ್ಟ್ರೀಯ ಸಹಭಾಗಿ ಸಂಸ್ಥೆಗಳಾದ ಘಾನಾ ವಿವಿ ಮತ್ತು ಪೋಲಂಡ್‌ನ ಲುಬ್ಲಿನ್ ವಿವಿಯ ಪ್ರೊಫೆಸರ್‌ಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಪ್ರಮಾಣವಚನ ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X