Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೇರಳದ ಹಿಂಸೆಯ ಕೆಸರಿನಲ್ಲಿ ತಾವರೆ...

ಕೇರಳದ ಹಿಂಸೆಯ ಕೆಸರಿನಲ್ಲಿ ತಾವರೆ ಅರಳುವುದನ್ನು ತಡೆಯಲಾಗದು: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ3 Oct 2017 7:35 PM IST
share
ಕೇರಳದ ಹಿಂಸೆಯ ಕೆಸರಿನಲ್ಲಿ ತಾವರೆ ಅರಳುವುದನ್ನು ತಡೆಯಲಾಗದು: ಅಮಿತ್ ಶಾ

ಕಾಸರಗೋಡು, ಅ.3: ಕೇರಳದಲ್ಲಿ ಹಿಂಸೆಯ ಕೆಸರಾಟ ನಡೆಸಿದರೂ ಅದೇ ಕೆಸರಿನಲ್ಲಿ ತಾವರೆ ಅರಳುವುದನ್ನು ಯಾರಿಗೂ ತಡೆಯಲಾಗದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.

ಮಂಗಳವಾರ ಪಯ್ಯನ್ನೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ  ಕುಮ್ಮನಂ ವಿಜಯನ್ ನೇತೃತ್ವದಲ್ಲಿ ನಡೆಯುತ್ತಿರುವ 'ಜನರಕ್ಷಾ ಯಾತ್ರೆ'ಗೆ ಚಾಲನೆ ನೀಡಿ ಮಾತನಾಡಿದ ಅವರು, ಸಿಪಿಎಂ ವಿರುದ್ಧ  ದೇಶವ್ಯಾಪಿ  ಹೋರಾಟ ನಡೆಸಲಾಗುವುದು. ಸಿಪಿಎಂನ ಆಡಳಿತದಲ್ಲಿ ಕೊಲೆಗಳ ಸರಣಿ ನಡೆಯುತ್ತಿದೆ. 48 ಅಮಾಯಕ ಆರೆಸ್ಸೆಸ್ - ಬಿಜೆಪಿ ಕಾರ್ಯಕರ್ತರ ಕೊಲೆ ಮಾಡಲಾಗಿದೆ. ಸಿಪಿಎಂ ರಾಜಕೀಯ ಸರ್ಕಸ್ ಮಾಡುತ್ತಿದೆ. ಅ.4ರಿಂದ 17ರ ತನಕ ದಿಲ್ಲಿಯ ಎಕೆಜಿ ಭವನಕ್ಕೆ ಜಾಥಾ ನಡೆಸಲಾಗುವುದು. ಎಲ್ಲಾ ರಾಜ್ಯಗಳಲ್ಲೂ ಯುವಮೋರ್ಚಾ ನೇತೃತ್ವದಲ್ಲಿ ನಾಳೆಯಿಂದ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಸಿಪಿಎಂ ನೇತೃತ್ವದ ಸರಕಾರ ಅಧಿಕಾರಕ್ಕೇರಿದ ಬಳಿಕ  13 ಬಿಜೆಪಿ ಕಾರ್ಯಕರ್ತರನ್ನು  ಕೊಲೆ ಮಾಡಲಾಗಿದೆ. ಸಿಪಿಎಂನ ಹಿಂಸೆಯ ವಿರುದ್ಧ  ಜನರಲ್ಲಿ  ಅರಿವು ಮೂಡಿಸಲು ಈ ಯಾತ್ರೆ  ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಕಾರ್ಯಕರ್ತರ ಕೊಲೆಯನ್ನು ಸಿಪಿಎಂ ಕೊನೆಗೊಳಿಸಬೇಕು. ಈ ಬಗ್ಗೆ ನಾಯಕತ್ವ ಮುಂದೆ  ಬರಬೇಕು ಎಂದವರು ಹೇಳಿದರು.

ಸಮಾರಂಭದಲ್ಲಿ ಕೇಂದ್ರ ಸಚಿವ ಅಲ್ಫೋನ್ಸ್ ಕಣ್ಣಂತಾನಂ, ಬಿಜೆಪಿ ಮುಖಂಡರಾದ  ವಿ.ಮುರಳೀಧರನ್, ಸಿ.ಟಿ ರವಿ, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯ ಸುರೇಶ್  ಗೋಪಿ, ರಿಚರ್ಡ್ ಹೇನ್ರಿ, ಶಾಸಕ ಒ. ರಾಜಗೋಪಾಲ್  ಮೊದಲಾದವರು ಉಪಸ್ಥಿತರಿದ್ದರು.

ಸೋಮವಾರ ತಡರಾತ್ರಿ ಮಂಗಳೂರಿಂದ ಆಗಮಿಸಿದ ಅಮಿತ್ ಷಾ ಬೇಕಲದಲ್ಲಿ ತಂಗಿದ್ದು, ಬೆಳಗ್ಗೆ ತಳಿಪರಂಬ ರಾಜರಾಜೇಶ್ವರಿ ದೇವಸ್ಥಾನಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭ ಕುಮ್ಮನ ರಾಜಶೇಖರನ್,  ಕೆ. ಸುರೇಂದ್ರನ್ ಮೊದಲಾದ ಮುಖಂಡರು ಜೊತೆಗಿದ್ದರು. ಬಳಿಕ ನಡೆದ ಸಮಾರಂಭದಲ್ಲಿ ಕುಮ್ಮನಂ ರಾಜಶೇಖರನ್ ರಿಗೆ ಪಕ್ಷದ ಪತಾಕೆ ಹಸ್ತಾಂತರಿಸುವ ಮೂಲಕ ಅಮಿತ್ ಷಾ ಜನರಕ್ಷಾ ಯಾತ್ರೆಗೆ ಚಾಲನೆ ನೀಡಿದರು.

ಮೊದಲ ದಿನ ಪಯ್ಯನ್ನೂರಿನಿಂದ ಪಿಲಾತ್ತರ ತನಕ ನಡೆದ ಪಾದಯಾತ್ರೆಯಲ್ಲಿ ಅಮಿತ್ ಷಾ ಪಾಲ್ಗೊಂಡರು. ರಾಜ್ಯದ 11 ಜಿಲ್ಲೆಗಳ ಮೂಲಕ ಅ.17ರ ತನಕ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಯಾತ್ರೆ ಅ.17ರಂದು ತಿರುವನಂತಪುರದಲ್ಲಿ ಕೊನೆಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X