Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನೋಟು ರದ್ದತಿ ಎಲ್ಲ ಕಪ್ಪು ಹಣವನ್ನು...

"ನೋಟು ರದ್ದತಿ ಎಲ್ಲ ಕಪ್ಪು ಹಣವನ್ನು ಸಕ್ರಮಗೊಳಿಸಿದ ಅತಿದೊಡ್ಡ ಸರ್ಕಾರೀ ಯೋಜನೆ "

ಕೇಂದ್ರದ ವಿರುದ್ಧ ಅರುಣ್ ಶೌರಿ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ3 Oct 2017 10:27 PM IST
share
ನೋಟು ರದ್ದತಿ ಎಲ್ಲ ಕಪ್ಪು ಹಣವನ್ನು ಸಕ್ರಮಗೊಳಿಸಿದ ಅತಿದೊಡ್ಡ ಸರ್ಕಾರೀ ಯೋಜನೆ

ಹೊಸದಿಲ್ಲಿ, ಅ.3: ನೋಟು ರದ್ದತಿ ಪ್ರಕ್ರಿಯೆಯು ಕೇಂದ್ರ ಸರಕಾರವೇ ರೂಪಿಸಿ ಅನುಷ್ಠಾನಗೊಳಿಸಿದ 'ಎಲ್ಲ ಕಪ್ಪು ಹಣವನ್ನು ಸಕ್ರಮಗೊಳಿಸಿದ ಅತಿದೊಡ್ಡ ಸರ್ಕಾರೀ ಯೋಜನೆಯಾಗಿದೆ' ಎಂದು ಮಾಜಿ ಕೇಂದ್ರ ಸಚಿವ ಅರುಣ್ ಶೌರಿ ಟೀಕಿಸಿದ್ದಾರೆ.

ಕಪ್ಪುಹಣ ಹೊಂದಿರುವ ಪ್ರತಿಯೊಬ್ಬರಿಗೂ ಹಣವನ್ನು ಸಕ್ರಮಗೊಳಿಸಲು ದಾರಿ ಮಾಡಿಕೊಟ್ಟ ಈ ಪ್ರಕ್ರಿಯೆ ಒಂದು ‘ಮೂರ್ಖ ನಡೆ’ಯಾಗಿತ್ತು ಎಂದು ಶೌರಿ ಹೇಳಿದ್ದಾರೆ. ರದ್ದಾದ ಹಣದ ಪೈಕಿ ಶೇ.99ರಷ್ಟು ಹಣ ವಾಪಸ್ ಬಂದಿದೆ ಎಂದು ಆರ್‌ಬಿಐ ತಿಳಿಸಿದೆ. ಇದರರ್ಥ ಈ ‘ದೈತ್ಯ’ ನಡೆಯಿಂದ ಕಪ್ಪು ಹಣ ಅಥವಾ ತೆರಿಗೆ ತಪ್ಪಿಸಿದ ಹಣವನ್ನು ಪತ್ತೆಹಚ್ಚಲಾಗಿಲ್ಲ ಎಂದು ಶೌರಿ ಹೇಳಿದರು.

ಸರಕಾರದ ತಪ್ಪುಹೆಜ್ಜೆಗಳ ಸಾಲಲ್ಲಿ ಜಿಎಸ್‌ಟಿ ಪ್ರಮುಖವಾದುದು ಎಂದಿರುವ ಶೌರಿ, ಇದೊಂದು ಪ್ರಮುಖ ಸುಧಾರಣಾ ಕ್ರಮವಾಗಿದ್ದರೂ ಇದನ್ನು ಅನುಷ್ಠಾನಗೊಳಿಸಿರುವ ರೀತಿ ಸರಿಯಾಗಿಲ್ಲ ಎಂದರು. ಈ ನಿಯಮಕ್ಕೆ ಮೂರು ತಿಂಗಳಲ್ಲಿ 7 ಬಾರಿ ತಿದ್ದುಪಡಿ ಮಾಡಲಾಗಿದೆ ಎಂದ ಶೌರಿ, ಜಿಎಸ್‌ಟಿ ಜಾರಿಗೊಳಿಸಿದ ಸಂದರ್ಭವನ್ನೂ ಟೀಕಿಸಿದರು. ಭಾರತದ ಸ್ವಾತಂತ್ರ ಘೋಷಣೆಯ ಸಂದರ್ಭಕ್ಕೆ ಜಿಎಸ್‌ಟಿ ಅನುಷ್ಠಾನದ ಸಂದರ್ಭವನ್ನು ಹೋಲಿಕೆ ಮಾಡಿರುವುದನ್ನು ಅವರು ಲೇವಡಿ ಮಾಡಿದರು.

 ಕೇಂದ್ರ ಸರಕಾರದ ಪ್ರಮುಖ ಆರ್ಥಿಕ ಕಾರ್ಯನೀತಿಗಳನ್ನು ‘ 2.5 ಮಂದಿ ಒಳಗೊಂಡಿರುವ ಸೀಲ್ ಮಾಡಲಾಗಿರುವ ಪ್ರತಿಧ್ವನಿ ಚೇಂಬರ್‌ನಲ್ಲಿ ’ ಕೈಗೊಳ್ಳಲಾಗುತ್ತಿದೆ. 2.5 ಮಂದಿ ಎಂದರೆ ಅಮಿತ್ ಶಾ, ಪ್ರಧಾನಿ ಮೋದಿ ಹಾಗೂ ಓರ್ವ ಸರಕಾರಿ ವಕೀಲ ಎಂದು ಶೌರಿ ವಿವರಿಸಿದರು. 

 ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ಮುಖಂಡ ಯಶವಂತ ಸಿನ್ಹ ಕೇಂದ್ರ ಸರಕಾರದ ಕಾರ್ಯವೈಖರಿಯ ಬಗ್ಗೆ ತೀವ್ರ ಟೀಕಾಪ್ರಹಾರ ಮಾಡಿರುವುದನ್ನು ಪ್ರಸ್ತಾವಿಸಿದ ಶೌರಿ, ಸಿನ್ಹ ಹೇಳಿಕೆಗೆ ನನ್ನ ಬೆಂಬಲವಿದೆ. ಸರಕಾರದ ಕಾರ್ಯವೈಖರಿಯ ಬಗ್ಗೆ ಬಿಜೆಪಿಯಲ್ಲಿ ಪ್ರತಿಯೊಬ್ಬರಿಗೂ ಕಳವಳವಿದೆ. ಆದರೆ ಯಾರಿಗೂ ಉಸಿರೆತ್ತಲು ಧೈರ್ಯವಿಲ್ಲ ಎಂಬ ಸಿನ್ಹ ಹೇಳಿಕೆ ಸರಿಯಾಗಿದೆ ಎಂದು ಶೌರಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X