Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳೆ ನೀರು ಸಂಗ್ರಹಿಸಿ ಬೆಳೆ ಬೆಳೆಯಿರಿ:...

ಮಳೆ ನೀರು ಸಂಗ್ರಹಿಸಿ ಬೆಳೆ ಬೆಳೆಯಿರಿ: ಕೃಷ್ಣ ಭೈರೇಗೌಡ

ವಾರ್ತಾಭಾರತಿವಾರ್ತಾಭಾರತಿ3 Oct 2017 10:40 PM IST
share
ಮಳೆ ನೀರು ಸಂಗ್ರಹಿಸಿ ಬೆಳೆ ಬೆಳೆಯಿರಿ: ಕೃಷ್ಣ ಭೈರೇಗೌಡ

ಮೈಸೂರು, ಅ.3: ಹವಾಮಾನದ ವೈಪರಿತ್ಯದಿಂದ ಮಳೆ ಸರಿಯಾದ ಸಮಯದಲ್ಲಿ ಆಗುತ್ತಿಲ್ಲ. ಮಳೆ ಬಂದ ಸಂದರ್ಭದಲ್ಲಿ ಮಳೆ ನೀರನ್ನು ಸಂಗ್ರಹಿಸಿ ಕೃಷಿಗೆ ಬಳಸಿಕೊಳ್ಳಬೇಕು. ಇದಕ್ಕಾಗಿ ಕೃಷಿಭಾಗ್ಯ ಯೋಜನೆಯಡಿ ಇರುವ ಕೃಷಿ ಹೊಂಡಗಳನ್ನು ರೈತರು ನಿರ್ಮಿಸಿಕೊಳ್ಳುವಂತೆ ಕೃಷಿ ಸಚಿವ ಕೃಷ್ಣ ಭೈರೇಗೌಡ ಸಲಹೆ ನೀಡಿದ್ದಾರೆ.

ಜಯಪುರ ಹೋಬಳಿಯ ಮಾವಿನಹಳ್ಳಿಯಲ್ಲಿ ಶ್ರೀ ಶಿವಣ್ಣೇಗೌಡರ ಜಮೀನಿನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ರೈತರೊಡನೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. 

ರಾಜ್ಯದಲ್ಲಿ ಶೇ.70 ರಷ್ಟು ರೈತರು ಮಳೆ ಅವಲಂಬಿಸಿ ವ್ಯವಸಾಯ ನಡೆಸುತ್ತಿದ್ದಾರೆ. ವರ್ಷದಲ್ಲಿ ಸರಾಸರಿ 65 ದಿನಗಳು ಮಳೆಯಾಗುತ್ತದೆ. ಮಳೆ ಸರಿಯಾದ ಸಮಯದಲ್ಲಿ ಆಗುತ್ತಿಲ್ಲ. ಮಳೆ ಬಿದ್ದಂತಹ ಸಂದರ್ಭದಲ್ಲಿ ಮಳೆಯನ್ನು ಸಂಗ್ರಹಿಸಿಕೊಳ್ಳಬೇಕು. ಮಳೆ ಬಿದ್ದ ತಕ್ಷಣ ರೈತರು ಬಿತ್ತನೆ ಮಾಡುತ್ತಾರೆ. ಬಿತ್ತನೆಯ ನಂತರ ಬೇಕಿರುವ ಮಳೆ ನೀರಿನ ಬಗ್ಗೆ  ಚಿಂತಿಸಬೇಕು. ಮಾವಿನಹಳ್ಳಿಯಲ್ಲಿ ಶಿವಣ್ಣೇಗೌಡರು ಕೃಷಿ ಹೊಂಡವನ್ನು ನಿರ್ಮಿಸಿಕೊಂಡು ಇದರಲ್ಲಿ ಬರುವ ನೀರಿನಿಂದ ರಾಗಿ, ಟೊಮೆಟೋ ಮುಂತಾದ ತರಕಾರಿ ಬೆಳೆಗಳನ್ನು ಐದು ಎಕರೆ ಜಮೀನಿನಲ್ಲಿ ಬೆಳೆದು ತಿಂಗಳಿಗೆ 3 ರಿಂದ 3.5 ಲಕ್ಷ ಆದಾಯ ಗಳಿಸುತ್ತಿದ್ದಾರೆ ಎಂದರು.
   
ಹಣ ಇದ್ದರೆ ಬಂಗಾರವನ್ನು ಖರೀದಿಸಬಹುದು ಮಳೆ ಬಾರದಿದ್ದಾರೆ ಹಣ ನೀಡಿದರು ನೀರನ್ನು ಖರೀದಿಸಲು ಸಾಧ್ಯವಾಗುವುದಿಲ್ಲ. ನೀರಿನ ಪ್ರಾಮುಖ್ಯತೆಯನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಳ್ಳಬೇಕು. ರೈತರಿಗೆ ಪರಿಹಾರವಾಗಿ ಹಣ ನೀಡಬಹುದು ಇದು ಸರ್ಕಾರದ ಉದ್ದೇಶವಲ್ಲ ರೈತ ತನ್ನ ಜಮೀನಿನಲ್ಲಿ ಬೇಸಾಯ ನಡೆಸಿ ಜೀವನ ಕಟ್ಟಿಕೊಳ್ಳಬೇಕು ಎಂಬ ಉದ್ದೇಶದಿಂದ ಕೃಷಿ ಹೊಂಡ ನಿರ್ಮಾಣಕ್ಕಾಗಿ 1 ರಿಂದ 1.5 ಲಕ್ಷ ರೂ. ಬಂಡವಾಳವನ್ನು ರೈತರಿಗೆ ನೀಡುತ್ತಿದೆ ಎಂದು ಮಾಹಿತಿ ನೀಡಿದರು.

ಮೈಸೂರು ಜಿಲ್ಲೆಯಲ್ಲಿ 3500 ಕೃಷಿ ಹೊಂಡಗಳಿವೆ. ಕೃಷಿ ಹೊಂಡಗಳಿಗಾಗಿ ರೈತರು ಕೃಷಿ ಇಲಾಖೆಗೆ ಬೇಡಿಕೆ ಸಲ್ಲಿಸಿದರೆ ಕೃಷಿ ಹೊಂಡಕ್ಕೆ ಬೇಕಾಗುವ ಅನುದಾನವನ್ನು ನೀಡಲಾಗುವುದು. ಕೃಷಿ ಹೊಂಡದ ಜೊತೆಯಲ್ಲಿ ಹನಿ  ಹಾಗೂ ಸಿಂಚನ ನೀರಾವರಿಯನ್ನು ಅಳವಡಿಸಿಕೊಳ್ಳಿ. ಹನಿ ನೀರಾವರಿಗೆ ಶೇ 90 ರಷ್ಟು ಸಹಾಯಧನ ನೀಡಲಾಗುವುದು. ಡೀಸಲ್ ಪಂಪ್‍ಸೆಟ್ ವೈಯಕ್ತಿಕವಾಗಿ ಖರೀದಿಸಿದರೆ ಶೇ 50 ರಷ್ಟು ಸಹಾಯಧನ ಹಾಗೂ ಗುಂಪಾಗಿ ಖರೀದಿಸಿದರೆ ಶೇ. 100 ರಷ್ಟು ಸಹಾಯಧನ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆ ಆಯುಕ್ತರಾದ ಡಾ. ಸತೀಶ್ ಅಪರ ಕೃಷಿ ನಿರ್ದೇಶಕ ಡಾ. ಗಂಗಪ್ಪ, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಉಪಸ್ಥಿತರಿದ್ದರು.
.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X