Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ‘ಎ’ ತಂಡಕ್ಕೆ ಸರಣಿ ಜಯ

ಭಾರತ ‘ಎ’ ತಂಡಕ್ಕೆ ಸರಣಿ ಜಯ

ನ್ಯೂಝಿಲೆಂಡ್ ‘ಎ’ ತಂಡಕ್ಕೆ ಇನಿಂಗ್ಸ್ ಹಾಗೂ 26 ರನ್ ಸೋಲು

ವಾರ್ತಾಭಾರತಿವಾರ್ತಾಭಾರತಿ3 Oct 2017 11:55 PM IST
share
ಭಾರತ ‘ಎ’ ತಂಡಕ್ಕೆ ಸರಣಿ ಜಯ

ವಿಜಯವಾಡ, ಅ.3: ಸ್ಪಿನ್ನರ್‌ಗಳಾದ ಕರಣ್ ಶರ್ಮ ಹಾಗೂ ಶಾಬಾಝ್ ನದೀಮ್ ಸ್ಪಿನ್ ಮೋಡಿಗೆ ತತ್ತರಿಸಿದ ನ್ಯೂಝಿಲೆಂಡ್ ಎ ತಂಡ ಭಾರತ ವಿರುದ್ಧದ ಎರಡನೆ ಚತುರ್ದಿನ ಟೆಸ್ಟ್‌ನಲ್ಲಿ ಇನಿಂಗ್ಸ್ ಹಾಗೂ 26 ರನ್‌ಗಳ ಅಂತರದಿಂದ ಜಯ ಸಾಧಿಸಿದೆ.

ಈ ಗೆಲುವಿನ ಮೂಲಕ ಭಾರತ ‘ಎ’ ತಂಡ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ.

ಪ್ರವಾಸಿ ನ್ಯೂಝಿಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ 211 ರನ್ ಗಳಿಸಿತ್ತು. ಎರಡನೆ ಇನಿಂಗ್ಸ್ ನಲ್ಲಿ ಕೇವಲ 210 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತ ಮೊದಲ ಇನಿಂಗ್ಸ್ ನಲ್ಲಿ 447 ರನ್ ಗಳಿಸಿತ್ತು.

ನಾಲ್ಕನೆ ಹಾಗೂ ಅಂತಿಮ ದಿನವಾದ ಮಂಗಳವಾರ ನ್ಯೂಝಿಲೆಂಡ್ ಎ ತಂಡ 1 ವಿಕೆಟ್ ನಷ್ಟಕ್ಕೆ 104 ರನ್‌ನಿಂದ 2ನೆ ಇನಿಂಗ್ಸ್ ಮುಂದುವರಿಸಿತು.

 ಲೆಗ್ ಸ್ಪಿನ್ನರ್ ಕರಣ್ ಶರ್ಮ(5-78) ಹಾಗೂ ಎಡಗೈ ಸ್ಪಿನ್ನರ್ ನದೀಮ್(4-41)ದಾಳಿಗೆ ಕಂಗಾಲಾದ ಕಿವೀಸ್ ಪಡೆ ಕೇವಲ 106 ರನ್ ಗಳಿಸುವಷ್ಟರಲ್ಲಿ ಉಳಿದ 9 ವಿಕೆಟ್‌ಗಳನ್ನು ಕಳೆದುಕೊಂಡಿತು. ಮೊದಲ ಟೆಸ್ಟ್ ಪಂದ್ಯದಲ್ಲಿ 8 ವಿಕೆಟ್‌ಗಳನ್ನು ಕಬಳಿಸಿದ್ದ ರೈಲ್ವೇಸ್ ಬೌಲರ್ ಶರ್ಮ ಎರಡನೆ ಪಂದ್ಯದಲ್ಲಿ ಮತ್ತೊಮ್ಮೆ 8 ವಿಕೆಟ್ ಉಡಾಯಿಸಿದರು.ನ್ಯೂಝಿಲೆಂಡ್‌ನ ಪರ ಹೆನ್ರಿ ನಿಕೊಲ್ಸ್(94) ಏಕಾಂಗಿ ಹೋರಾಟ ನೀಡಿದರು. ಉಳಿದ ಬ್ಯಾಟ್ಸ್ ಮನ್‌ಗಳು ನಿಕೊಲ್ಸ್ ಗೆ ಸಾಥ್ ನೀಡಲಿಲ್ಲ. ನಿಕೊಲ್ಸ್ ಹಾಗೂ ರಾವಲ್ ಎರಡನೆ ವಿಕೆಟ್‌ನಲ್ಲಿ 105 ರನ್ ಜೊತೆಯಾಟ ನಡೆಸಿದರೂ ತಂಡವನ್ನು ಇನಿಂಗ್ಸ್ ಸೋಲಿನಿಂದ ಪಾರು ಮಾಡಲು ವಿಫಲರಾದರು.

ಮೊದಲ ಟೆಸ್ಟ್ ಪಂದ್ಯವನ್ನು ಇನಿಂಗ್ಸ್ ಹಾಗೂ 31 ರನ್‌ಗಳಿಂದ ಸೋತಿರುವ ನ್ಯೂಝಿಲೆಂಡ್ ಎ ತಂಡ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದೆ.

ಕಿವೀಸ್ ಬ್ಯಾಟ್ಸ್‌ಮನ್‌ಗಳಿಗೆ ಕರಣ್-ನದೀಮ್ ಜೋಡಿಯನ್ನು ಹೇಗೆ ಎದುರಿಸಬೇಕೆಂಬ ಸುಳಿವು ಸಿಗಲಿಲ್ಲ. ಕರಣ್ ಸರಣಿಯಲ್ಲಿ ಒಟ್ಟು 16 ವಿಕೆಟ್‌ಗಳನ್ನು ಕಬಳಿಸಿದರೆ, ನದೀಮ್ 14 ವಿಕೆಟ್‌ಗಳನ್ನು ಉರುಳಿಸಿ ತಾನೇನು ಕಡಿಮೆಯಿಲ್ಲ ಎಂದು ತೋರಿಸಿಕೊಟ್ಟರು.

ಸಂಕ್ಷಿಪ್ತ ಸ್ಕೋರ್

►ನ್ಯೂಝಿಲೆಂಡ್: ಮೊದಲ ಇನಿಂಗ್ಸ್ 211, ಎರಡನೆ ಇನಿಂಗ್ಸ್ 210(ಹೆನ್ರಿ ನಿಕೊಲ್ಸ್ 94, ಕರಣ್ ಶರ್ಮ 5/78, ಶಾಬಾಝ್ ನದೀಮ್ 4-41)

►ಭಾರತ ಎ ತಂಡ: ಮೊದಲ ಇನಿಂಗ್ಸ್: 447 ರನ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X