ಮಂಗಳೂರಿಗೆ ಆಗಮಿಸಿದ ಉ.ಪ್ರ. ಮುಖ್ಯಮಂತ್ರಿ ಆದಿತ್ಯನಾಥ್
ಮಂಗಳೂರು, ಅ.3: ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರು ಇಂದು ರಾತ್ರಿ ಸುಮಾರು 11:30ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಿವ ಮಠಂದೂರ್ ಮತ್ತಿತರ ಬಿಜೆಪಿ ಮುಖಂಡರು ಈ ಸಂದರ್ಭ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ವಿಮಾನ ನಿಲ್ದಾಣದಿಂದ ಹೊರಬಂದ ಅವರು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ವಾಹನವೇರಿ ರಸ್ತೆ ಮಾರ್ಗವಾಗಿ ಕೇರಳಕ್ಕೆ ಸಾಗಿದರು. ಬುಧವಾರ ಕೇರಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆದಿತ್ಯನಾಥ್ ಭಾಗವಹಿಸುವರು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.
Next Story