Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅ.7 ರಂದು ಉಲಮಾ ಉಮರಾ ಸಮ್ಮೇಳನ

ಅ.7 ರಂದು ಉಲಮಾ ಉಮರಾ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ4 Oct 2017 11:31 PM IST
share
ಅ.7 ರಂದು ಉಲಮಾ ಉಮರಾ ಸಮ್ಮೇಳನ

ಮಡಿಕೇರಿ, ಅ.4 : ಸಮಸ್ತ ಕೊಡಗು ಜಿಲ್ಲಾ ಜಂಇಯ್ಯತ್ತುಲ್ ಉಲಮಾ ಸಂಘಟನೆಯ ವತಿಯಿಂದ ಅ.7 ರಂದು ನೆಲ್ಯಹುದಿಕೇರಿಯ ದಾರುಸ್ಸಲಾಂ ಆವರಣದಲ್ಲಿ ಉಲಮಾ ಉಮರಾ ಸಮ್ಮೇಳನ ನಡೆಯಲಿದೆ. 

 ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಲಮಾದ ಜಿಲ್ಲಾ ಘಟಕದ ಸದಸ್ಯ ಎಂ.ವೈ.ಅಶ್ರಫ್ ಫೈಝಿ, ಸಮ್ಮೇಳನದ ಕುರಿತು ಮಾಹಿತಿ ನೀಡಿದರು. ಸಮುದಾಯದ ನೇತೃತ್ವವನ್ನು ವಹಿಸಿರುವ ಧಾರ್ಮಿಕ ವಿದ್ವಾಂಸರುಗಳನ್ನು ಒಗ್ಗೂಡಿಸಿ ಕರ್ತವ್ಯಗಳ ಕುರಿತು ಅರಿವು ಮೂಡಿಸುವುದು, ಸಮುದಾಯವನ್ನು ಸತ್ಯದ ಹಾದಿಯಲ್ಲಿ ಮುನ್ನಡೆಸಲು ಉಲಮಾಗಳನ್ನು ಸಕ್ರಿಯ ಗೊಳಿಸುವ ಉದ್ದೇಶದಿಂದ ಸಮ್ಮೆಳನವನ್ನು ನಡೆಸಲಾಗುತ್ತಿದೆ ಎಂದರು.

 ಧಾರ್ಮಿಕ ವಿದ್ವಾಂಸರು ನಿಸ್ವಾರ್ಥತೆಯಿಂದ ಕರ್ತವ್ಯವನ್ನು ನಿಭಾಯಿಸುವುದರಿಂದ ಮಾತ್ರ ಸಮಾಜವನ್ನು ಧರ್ಮಮಾರ್ಗದಲ್ಲಿ ಕೊಂಡೊಯ್ಯಲು ಸಾಧ್ಯವೆಂದು ಅಭಿಪ್ರಾಯಪಟ್ಟ ಅಶ್ರಫ್ ಫೈಝಿ, ಉಲಮಾಗಳು ಈ ಬಗ್ಗೆ ಗಮನ ಹರಿಸಬೇಕಾಗಿದೆ ಎಂದರು.

 ಶ್ರೇಷ್ಠ ಪಂಡಿತರನ್ನು ಒಳಗೊಂಡ ಸಮಸ್ತ ಕೊಡಗು ಜಿಲ್ಲಾ ಜಂಇಯ್ಯತ್ತುಲ್ ಉಲಮಾದ ಅಧೀನದಲ್ಲಿ ಅನೇಕ ಮದ್ರಸಗಳು ಅರೇಬಿಕ್ ಕಾಲೇಜು, ಬಡ ಮತ್ತು ಅನಾಥ ಹೆಣ್ಣು ಮಕ್ಕಳ ಆಶ್ರಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇಸ್ಲಾಂ ಧರ್ಮದ ಆದರ್ಶದಂತೆ ಮಹಲ್ ಜಮಾಅತ್‍ಗಳನ್ನು ಒಂದು ಗೂಡಿಸುವುದು, ಧಾರ್ಮಿಕ ವಿಧಿ ವಿಧಾನಗಳನ್ನು ಸಂರಕ್ಷಿಸುವುದು, ಸಮಾಜದ, ಸಮುದಾಯದ ಹಾಗೂ ರಾಷ್ಟ್ರದ ಕ್ಷೇಮಕ್ಕಾಗಿ ಧಾರ್ಮಿಕ ಸೌಹಾರ್ದತೆಯನ್ನು ಭದ್ರಗೊಳಿಸುವುದು, ಸಮುದಾಯದ ಮಕ್ಕಳನ್ನು ಶೈಕ್ಷಣಿಕವಾಗಿ ಮುಂದೆ ತಂದು ಜಾತ್ಯತೀತತೆಯ ಬಗ್ಗೆ ಮನವರಿಕೆ ಮಾಡಿಕೊಡುವುದು ಸಂಘಟನೆಯ ಗುರಿಯಾಗಿದೆ ಎಂದರು.

 ಮುಸಲ್ಮಾನರ ಧಾರ್ಮಿಕ ಹಾಗೂ ಶೈಕ್ಷಣಿಕ ರಂಗದ ಸಮಗ್ರ ಏಳಿಗೆಯನ್ನು ಮುಂದಿಟ್ಟುಕೊಂಡು ಜಮಾಯತ್ ಉಲಮಾ ವತಿಯಿಂದ ಅ.7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಉಲಮಾ ಉಮರಾ ಸಮ್ಮೇಳನ ನಡೆಯಲಿದೆ. ಸಮಾರಂಭದಲ್ಲಿ ಕೊಡಗು ಜಿಲ್ಲಾ ಸಮಸ್ತ ಸಹಾಯಕ ಖಾಝಿಗಳಾದ ಎಂ.ಎಂ. ಅಬ್ದುಲ್ಲಾ ಫೈಝಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಸಮಿತಿಯ ಕಾರ್ಯದರ್ಶಿಗಳಾದ ಎಂ.ಟಿ. ಅಬ್ದುಲ್ಲಾ ಮುಸ್ಲಿಯಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಖ್ಯಾತ ವಾಗ್ಮಿ ಅಲವಿ ಧಾರಿಮಿ ಕುಯಿಮಣ್ಣ ಮುಖ್ಯ ಭಾಷಣ ಮಾಡಲಿದ್ದಾರೆ. ಜಿಲ್ಲಾ ಕಾರ್ಯದರ್ಶಿ ಪಿ.ಬಿ. ಇಸ್ಮಾಯಿಲ್ ಮುಸ್ಲಿಯಾರ್, ಎಸ್‍ವೈಎಸ್ ಜಿಲ್ಲಾಧ್ಯಕ್ಷರಾದ ವಿ.ಪಿ.ಎಸ್. ತಂಙಳ್ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದ ಪ್ರಯುಕ್ತ ಅಂದು ಮದರಸಗಳಿಗೆ ರಜೆ ಘೋಷಿಸಲಾಗಿದೆಯೆಂದು ಎಂ.ವೈ. ಅಶ್ರಫ್ ಫೈಝಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಧ್ಯಕ್ಷರಾದ ಎಂ.ಎಂ.ಅಬ್ದುಲ್ ಫೈಝಿ, ಸದಸ್ಯರುಗಳಾದ ವೈ.ಎಂ. ಉಮ್ಮರ್ ಫೈಝಿ, ಉಸ್ಮಾನ್ ಫೈಝಿ ಹಾಗೂ ಮೊಯ್ದು ಫೈಝಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X