Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ ಕಾಲುವೆಗಳನ್ನು ಶೀಘ್ರವೇ ಗುರುತಿಸಿ,...

ರಾಜ ಕಾಲುವೆಗಳನ್ನು ಶೀಘ್ರವೇ ಗುರುತಿಸಿ, ಒತ್ತುವರಿಯಾಗಿರುವುದನ್ನು ಈ ಕೂಡಲೇ ತೆರವುಗೊಳಿಸಬೇಕು: ಎಸ್.ಎ. ರವೀಂದ್ರನಾಥ್

ವಾರ್ತಾಭಾರತಿವಾರ್ತಾಭಾರತಿ4 Oct 2017 11:54 PM IST
share
ರಾಜ ಕಾಲುವೆಗಳನ್ನು ಶೀಘ್ರವೇ ಗುರುತಿಸಿ, ಒತ್ತುವರಿಯಾಗಿರುವುದನ್ನು ಈ ಕೂಡಲೇ ತೆರವುಗೊಳಿಸಬೇಕು: ಎಸ್.ಎ. ರವೀಂದ್ರನಾಥ್

ದಾವಣಗೆರೆ,ಅ.4:  ನಗರದಲ್ಲಿರುವ ರಾಜ ಕಾಲುವೆಗಳನ್ನು ಶೀಘ್ರವೇ ಗುರುತಿಸಿ, ಒತ್ತುವರಿಯಾಗಿರುವುದನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಆಗ್ರಹಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಹಲವಾರು ಬಡಾವಣೆಗಳಲ್ಲಿನ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಇದಕ್ಕೆ ರಾಜ ಕಾಲುವೆಗಳ ಅತಿಕ್ರಮಣವೇ ಕಾರಣ ಎಂದು ಆರೋಪಿಸಿದ ಅವರು, ಮಳೆಯಿಂದ ಹಾನಿಗೊಳಗಾದ ಸ್ವಾಮಿ ವಿವೇಕಾನಂದ, ವಿನಾಯಕ ಸೇರಿದಂತೆ ಅನೇಕ ಬಡಾವಣೆಗಳಲ್ಲಿ 4-5 ಅಡಿ ನೀರು ನಿಂತಿದೆ. ಅಲ್ಲಿ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿದೆ. ಬಾಪೂಜಿ ಪಾಲಿಟೆಕ್ನಿಕಲ್ ಕಾಲೇಜಿನವರು ನಿರ್ಮಿಸಿರುವ ದೊಡ್ಡಗೋಡೆಯೂ ಇದಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಮಹಾನಗರದ ಹಿಂದುಳಿದ ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗಿ ಬಹಳಷ್ಟು ಹಾನಿಯಾಗಿದೆ. ನಿಗದಿತ ಯೋಜನೆ ಇಲ್ಲ. ಒಳಚರಂಡಿ ವ್ಯವಸ್ಥೆ ಇಲ್ಲದೆ ನೀರು ಹರಿದು ಹೋಗುತ್ತಿಲ್ಲ. ಹೊಸ ಬಡಾವಣೆಗಳ ಗೋಳು ಇದೇ ಪರಿಸ್ಥಿತಿಯಲ್ಲಿದೆ. ಕೆಲ ಪ್ರದೇಶಗಳಲ್ಲಿನ ಹಳ್ಳಗಳನ್ನು ಮುಚ್ಚಿಹಾಕಿ ಬಡಾವಣೆಗಳ ರಸ್ತೆ ಅಭಿವೃದ್ಧಿಪಡಿಸಿರುವುದೂ ಕಾರಣವಾಗಿದೆ ಎಂದ ಅವರು, ಜಿಲ್ಲಾಡಳಿತ, ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದಾಗಿ ಸ್ವಾರ್ಟ್ ಆಗಬೇಕಿರುವ ಸಿಟಿ, ವಸ್ರ್ಟ್ ಸಿಟಿ ಆಗುತ್ತಿದೆ. ಇದಕ್ಕೆ ಅವಕಾಶ ನೀಡದೆ, ಅಭಿವೃದ್ಧಿ ಮಾಡಬೇಕು. ಯಾವುದೇ ರಾಜಕೀಯ ಮಾಡದೇ ಪರಿಹಾರ ಕಾಮಗಾರಿಗಳು ನಡೆಯಬೇಕೆಂದು ಅವರು ಆಗ್ರಹಿಸಿದರು.

ಶ್ವೇತಪತ್ರ ಹೊರಡಿಸಿ:
ಸ್ಮಾರ್ಟ್‍ಸಿಟಿ ಯೋಜನೆಗಾಗಿ ಕೇಂದ್ರ ಸರಕಾರ 194 ಕೋಟಿ ರು. ಬಿಡುಗಡೆ ಮಾಡಿದೆ. ಆದರೆ, ಈ ಹಣ ಇನ್ನೂ ಬಳಕೆಯಾಗಿಲ್ಲ. ಇದಕ್ಕೆ ಕಾರಣ ಏನೂ ಎಂದು ಪ್ರಶ್ನಿಸಿದ ಅವರು, ಕೇಂದ್ರ ಸರಕಾರದ ಹಣದ ಅಭಿವೃದ್ಧಿ ಕಾಮಗಾರಿಗಳು ನಡೆಯಬಾರದೆಂದು ಈ ರೀತಿ ಮಾಡಲಾಗುತ್ತಿದೆ ಎಂಬ ಅಸಮಧಾನ ವ್ಯಕ್ತಪಡಿಸಿದರು.

ರಾಜ್ಯ ಸರಕಾರದಿಂದಲೇ 2000 ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಸಚಿವರು ಹೇಳಿಕೆ ನೀಡಿದ್ದಾರೆ. ಈ ಹಣ ಬಳಕೆಯ ಬಗ್ಗೆ ಶ್ವೇತ ಪತ್ರ ಹೊರಡಿಸಿಬೇಕು. ಇದರಿಂದ ಯಾವ ಯೋಜನೆಯ ಹಣ ಎಷ್ಟು ಎಲ್ಲಿಂದ ಬಂದಿದೆ, ಎಷ್ಟು ಬಳಕೆಯಾಗಿದೆ, ಉಳಿದಿದೆ ಎಂಬುದು ತಿಳಿಯುತ್ತದೆ ಎಂದು ಹೇಳಿದರು.
ಡಾ.ಎ.ಹೆಚ್. ಶಿವಯೋಗಿಸ್ವಾಮಿ ಮಾತನಾಡಿ, ನಗರದಲ್ಲಿ ಸುರಿದ ಮಳೆಯಿಂದ ಅತಿವೃಷ್ಠಿಯುಂಟಾಗಿದ್ದು, ಇದಕ್ಕೆ ರಾಜ ಕಾಲುವೆ ಒತ್ತುವರಿ ಇದಕ್ಕೆ ಕಾರಣವಾಗಿದೆ. ರಾಜ ಕಾಲುವೆಯ ಬಗ್ಗೆ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮಾಹಿತಿ ಕೇಳಿದರೆ, ಅವರು ತಹಸೀಲ್ದಾರ್ ಅವರಿಗೆ ಈ ಅರ್ಜಿ ಕಳುಹಿಸುತ್ತಾರೆ. ಅವರು ಈ ವಿಷಯದ ಬಗ್ಗೆ ತಮ್ಮಲ್ಲಿ ಮಾಹಿತಿ ಇಲ್ಲ ಎಂದು ಹೇಳುತ್ತಾರೆ. ಹೀಗಾದರೆ ಹೇಗೆ? ಎಂದು ಅಸಮಧಾನ ವ್ಯಕ್ತಪಡಿಸಿದ ಅವರು, ಈಗ ಎದುರಾಗಿರುವ ಸಮಸ್ಯೆಯ ಬಗ್ಗೆ ಸರಿಯಾಗಿ ತಿಳಿದುಕೊಂಡು, ಯಾವುದೇ ರಾಜಿಕೀಯ ಮಾಡದೆ ಅವುಗಳಿಗೆ ಸ್ಪಂದಿಸಬೇಕಾಗಿದೆ. ಯುದ್ದೋಪಾದಿಯಲ್ಲಿ ಅಧಿಕಾರಿಗಳು ಸಿಬ್ಬಂದಿ ಕಾರ್ಯ ನಿರ್ವಹಿಸಬೇಕೆಂದರು.

ಜಿಪಂ ಅಧ್ಯಕ್ಷರ ಬದಲಾವಣೆ ವಿಷಯ ಪಕ್ಷದ ಆಂತರಿಕ ವಿಷಯವಾಗಿದ್ದು, ಇದನ್ನು ಪಕ್ಷದ ವೇದಿಕೆಯಲ್ಲೇ ಚರ್ಚಿಸಲಾಗುವುದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಮಾಜಿ ಶಾಸಕ ಬಸವರಾಜ ನಾಯ್ಕ್, ಎಚ್.ಎಸ್. ನಾಗರಾಜ್, ಗೀತಾ ಗಂಗಾನಾಯ್ಕ್, ಮುಕುಂದಪ್ಪ, ಧನಂಜಯ್ ಕಡ್ಲೆಬಾಳ್, ಶಾಮನೂರು ಲಿಂಗರಾಜ್, ವಿ.ಎಸ್. ಜಗದೀಶ್, ಕೆ. ಸತೀಶ್, ಹನುಮಂತಪ್ಪ, ಸಂತೋಷ್, ಶ್ರೀನಿವಾಸ್, ಶಿವರಾಜ್ ಪಾಟೀಲ್ ಮತ್ತಿತರರು ಇದ್ದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X