Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೂಡೆ ಕಾಂಕ್ರೀಟ್ ರಸ್ತೆಯ ಸುರಕ್ಷಾ...

ಹೂಡೆ ಕಾಂಕ್ರೀಟ್ ರಸ್ತೆಯ ಸುರಕ್ಷಾ ತಡೆಗೋಡೆ ಧ್ವಂಸ ಆರೋಪದ ಬಗ್ಗೆ ಪಂಚಾಯತ್ ಅಧ್ಯಕ್ಷೆಯ ಸ್ಪಷ್ಟೀಕರಣ

ವಾರ್ತಾಭಾರತಿವಾರ್ತಾಭಾರತಿ5 Oct 2017 10:48 PM IST
share
ಹೂಡೆ ಕಾಂಕ್ರೀಟ್ ರಸ್ತೆಯ ಸುರಕ್ಷಾ ತಡೆಗೋಡೆ ಧ್ವಂಸ ಆರೋಪದ ಬಗ್ಗೆ ಪಂಚಾಯತ್ ಅಧ್ಯಕ್ಷೆಯ ಸ್ಪಷ್ಟೀಕರಣ

ಉಡುಪಿ, ಅ.5: ಕೆಮ್ಮಣ್ಣು ಗ್ರಾ.ಪಂ. ವ್ಯಾಪ್ತಿಯ ಹೂಡೆಯ ಲೋಕೋಪಯೋಗಿ ಇಲಾಖೆಯ ಕಾಂಕ್ರೀಟ್ ರಸ್ತೆಗೆ ನಿರ್ಮಿಸಲಾಗಿರುವ ಸುರಕ್ಷ ತಡೆಗೋಡೆ ಯನ್ನು ಕೆಡವಿರುವ ಸುದ್ದಿಯ ಬಗ್ಗೆ ತೊನ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಫೌಝಿಯ ಸಾದಿಕ್ ಸ್ಪಷ್ಟನೆ ನೀಡಿದ್ದಾರೆ.

ಅವರ ಹೇಳಿಕೆ ಇಲ್ಲಿದೆ

ತೊನ್ಸೆ ಗ್ರಾಮ ಪಂಚಾಯತ್‍ನ ಹೂಡೆ ಲೋಕೋಪಯೋಗಿ ರಸ್ತೆಯನ್ನು ಸಚಿವ ಪ್ರಮೋದ್ ಮಧ್ವರಾಜ್‍ ಅವರು ವಿಶೇಷ ಮುತುವರ್ಜಿ ವಹಿಸಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಿರುತ್ತಾರೆ. ಈ ರಸ್ತೆಯ ತೆಪ್ಪತೋಡಿನ ಬಳಿಯ ಅಪಾಯಕಾರಿ ತಿರುವಿನಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಗ್ರಾಮ ಪಂಚಾಯತ್ ಹಾಗೂ ಪಂಚಾಯತ್ ವ್ಯಾಪ್ತಿಯ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ಮನವಿ ಸಲ್ಲಿಸಿದ್ದು, ಗ್ರಾ.ಪಂ. ಕೂಡ ಕಾಮಗಾರಿಯನ್ನು ತ್ವರಿತವಾಗಿ ಕೈಗೊಳ್ಳಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದೆ.  ಸಚಿವರು ಸಂಬಂಧಪಟ್ಟ ಇಲಾಖೆಗೆ ಆದಷ್ಟು ಬೇಗ ಸ್ಥಳ ಪರಿಶೀಲಿಸಿ ಕಾಮಗಾರಿ ಪ್ರಾರಂಭಿಸಬೇಕೆಂದು ಸೂಚಿಸಿದ್ದಾರೆ.

ಸೆ.6 ರಂದು ನಡೆದ ಪಂಚಾಯತ್‍ನ ಸಾಮಾನ್ಯ ಸಭೆಯಲ್ಲಿ ಸದಸ್ಯರೊಬ್ಬರು ಈ ಸ್ಥಳದಲ್ಲಿ ದಾನಿಗಳ ಸಹಕಾರದಿಂದ ಸುರಕ್ಷಾ ತಡೆಗೋಡೆ ನಿರ್ಮಿಸುವ ಬಗ್ಗೆ ಪ್ರಸ್ತಾವಿಸಿದಾಗ ಲೋಕೋಪಯೋಗಿ ರಸ್ತೆಯಾಗಿರುವುದರಿಂದ ಸ್ಥಳ ಪರಿಶೀಲನೆ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿತ್ತು.

ಆದರೆ ಅ.4ರಂದು ಬೆಳಗ್ಗೆ ಕರೆ ಮಾಡಿ ಸುರಕ್ಷಾ ತಡೆ ಗೋಡೆಯ ಕಾಮಗಾರಿ ಪ್ರಾರಂಭಿಸುತ್ತೇವೆ ಎಂದು ಸದಸ್ಯರು ತಿಳಿಸಿದ್ದರು. ಆದರೆ ಕಾಂಕ್ರೀಟ್ ರಸ್ತೆಯ ಮೇಲೆಯೇ ತಡೆಗೋಡೆ ನಿರ್ಮಿಸುತ್ತಿದ್ದು, ಇದರಿಂದ ಸಾರ್ವಜನಿಕರಿಗೆ, ಪಾದಚಾರಿಗಳಿಗೆ ತೊಂದರೆಯಾಗುತ್ತದೆ. ಅಪಾಯಕಾರಿಯಾದ ತಿರುವಿನಲ್ಲಿ ಈ ಕಾಮಗಾರಿಯಿಂದ ರಕ್ಷಣೆಯಾಗುವುದಕ್ಕಿಂತ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ. ಆದ್ದರಿಂದ ತಡೆಗೋಡೆಯನ್ನು  ತೆರವುಗೊಳಿಸಬೇಕೆಂದು ದೂರುಗಳು ಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸದಸ್ಯರಿಗೆ ಬೆಳಗ್ಗೆ 8:30ಕ್ಕೆ ಕಾಮಗಾರಿಯ ಪರಿಶೀಲನೆ ಮಾಡುವ ಬಗ್ಗೆ ತಿಳಿಸಲಾಗಿತ್ತು.

ಆದರೆ ನಾವು ಸ್ಥಳಕ್ಕೆ ಬರುವಾಗ ತಡೆಗೊಡೆ ತೆರವಾಗಿತ್ತು. ನಂತರ ಈ ಬಗ್ಗೆ ಪಂಚಾಯತ್‍ನಲ್ಲಿ ಚರ್ಚೆಯಾಗಿದ್ದು, ಜಿಲ್ಲಾ ವರಿಷ್ಟಾಧಿಕಾರಿಗಳು  ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಇಲ್ಲಿನ ಪೊಲೀಸ್ ಠಾಣೆಗೆ ಸಂಬಂಧಪಟ್ಟವರನ್ನು ಕರೆಸಿ, ಮಾತುಕತೆಯನ್ನು ನಡೆಸಿ ವಿಷಯವನ್ನು ಉತ್ತಮ ರೀತಿಯಲ್ಲಿ ಮುಕ್ತಾಯ ಮಾಡಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಈ ಸ್ಥಳದಲ್ಲಿ ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆಯಿಂದಲೇ ಸುರಕ್ಷಾ ತಡೆಗೊಡೆ ನಿರ್ಮಿಸಲು ಸಚಿವರಿಗೆ ಮನವಿ ಮಾಡಿ ಆದಷ್ಟು ಬೇಗ ಕಾಮಗಾರಿಯನ್ನು ನಡೆಸುತ್ತೇವೆ ಎಂದು ತೊನ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಫೌಝಿಯ ಸಾದಿಕ್ ಅವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X