ಮೋದಿ ವಿರುದ್ಧ ಬಿಜೆಪಿಗರಿಂದಲೇ ಅಪಸ್ವರ: ಕೋಡಿಜಾಲ್
ಮಂಗಳೂರು, ಅ.6: ಪ್ರಧಾನಿ ನರೇಂದ್ರ ಮೋದಿಯ ಆಡಳಿತದ ಕಾರ್ಯವೈಖರಿಯ ವಿರುದ್ಧ ಸ್ವಪಕ್ಷೀಯರೇ ಅಪಸ್ವರ ಎತ್ತುತ್ತಿದ್ದಾರೆ ಎಂದು ಮುಡಾ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಹೇಳಿದ್ದಾರೆ.
ಪಕ್ಷದ ಜಿಲ್ಲಾ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನಾಯಕರಾದ ಸುಬ್ರಹ್ಮಣ್ಯಂಸ್ವಾಮಿ, ಯಶವಂತ ಸಿನ್ಹಾ, ಉಮಾಭಾರತಿ ಹಾಗು ಎನ್ಡಿಎ ಅಂಗಪಕ್ಷವಾದ ಶಿವಸೇನೆಯ ನಾಯಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ನಾಯಕರನ್ನು ಗಣನೆಗೆ ತೆಗೆದುಕೊಳ್ಳದೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ೆಗೆದುಕೊಳ್ಳುವ ನಿರ್ಧಾರಗಳು ದೇಶಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದರು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಮೋದಿಯ ವೌನದ ಬಗ್ಗೆ ನಟ ಪ್ರಕಾಶ್ ರೈ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನೋಟು ಅಪವೌಲ್ಯ ಮತ್ತು ಜಿಎಸ್ಟಿಯಿಂದ ದೇಶದ ಆರ್ಥಿಕ ಸ್ಥಿತಿಗೆ ಗಂಡಾಂತರ ಎದುರಾಗಿದೆ. ಹೀಗೆ ಎಲ್ಲ ಸ್ತರದಲ್ಲೂ ವಿಫಲರಾಗಿರುವ ಮೋದಿಯ ವಿರುದ್ಧ ಎಲ್ಲೆಡೆ ಅಪಸ್ವರ ಕೇಳಿ ಬರುತ್ತಿದೆ ಎಂದರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಉತ್ತಮ ಆಡಳಿತ ನೀಡುತ್ತಿದೆ. ಉದ್ರಿಕ್ತ ಭಾಷಣ ಮಾಡುವವರಿಂದಾಗಿ ಜಿಲ್ಲೆಯಲ್ಲಿ 50ಕ್ಕೂ ಅಧಿಕ ದಿನ ಸೆ.144 ವಿಧಿಸುವಂತಾಯಿತು. ಇಂತಹವರು ಜಿಲ್ಲಾ ಉಸ್ತುವಾರಿ ಸಚಿವರ ಸಹಿ ಕಾಂಗ್ರೆಸ್ ಶಾಸಕರ ರಾಜೀನಾಮೆ ಕೇಳುತ್ತಿರುವುದು ವಿಪ ರ್ಯಾಸ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಉಪಾಧ್ಯಕ್ಷರಾದ ಹರ್ಷರಾಜ ಮುದ್ಯ, ಬಲರಾಜ ರೈ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ. ಅಬ್ದುಲ್ ಸಲೀಂ, ಜಿಲ್ಲಾ ಕಾರ್ಯದರ್ಶಿ ನಝೀರ್ ಬಜಾಲ್ ಉಪಸ್ಥಿತರಿದ್ದರು.