Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಶೇಕ್ಸ್‌ಪಿಯರ್‌ಗೆ ನಮಸ್ಕಾರ

ಶೇಕ್ಸ್‌ಪಿಯರ್‌ಗೆ ನಮಸ್ಕಾರ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ7 Oct 2017 12:15 AM IST
share
ಶೇಕ್ಸ್‌ಪಿಯರ್‌ಗೆ ನಮಸ್ಕಾರ

ಈ ಜಗತ್ತು ಶೇಕ್ಸ್‌ಪಿಯರ್‌ನನ್ನು ಬರೆದಷ್ಟು ಇನ್ನಾವ ಲೇಖಕನನ್ನೂ ಬರೆಯಲಿಲ್ಲ. ಇಂದು ಜಗತ್ತಿನ ಎಲ್ಲ ಭಾಷೆಗಳಲ್ಲೂ ವಿಲಿಯಂ ಶೇಕ್ಸ್‌ಪಿಯರ್ ಜನಪ್ರಿಯ. ಕನ್ನಡದಲ್ಲೂ ಶೇಕ್ಸ್‌ಪಿಯರ್‌ನ ಬರಹಗಳು ಸಾಕಷ್ಟು ಬಂದಿವೆ. ಬೇರೆ ಬೇರೆ ಲೇಖಕರು ಶೇಕ್ಸ್‌ಪಿಯರ್‌ನನ್ನು ಮತ್ತೆ ಮತ್ತೆ ಬರೆದಿದ್ದಾರೆ. ಮೊಗೆದಷ್ಟೂ ನೀರು ಕೊಡುವ ಬಾವಿ ಅವನು. ಶೇಕ್ಸ್‌ಪಿಯರ್‌ನ ನಾನೂರನೆ ವರ್ಧಂತಿಯ ನೆನಪಾಗಿ ಕನ್ನಡ ಭಾರತಿಯು ‘ಶೇಕ್ಸ್‌ಪಿಯರಿಗೆ ನಮಸ್ಕಾರ’ ಬೃಹತ್ ಕೃತಿಯನ್ನು ಹೊರತಂದಿತ್ತು. ಖ್ಯಾತ ಕವಿ ಶಾ. ಬಾಲುರಾವ್ ಈ ಕೃತಿಯನ್ನು ಸಂಪಾದಿಸಿದ್ದರು. 1966ರಲ್ಲಿ ಹೊರಬಂದಿರುವ ಈ ಕೃತಿಯನ್ನು ಇದೀಗ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಮರುಮುದ್ರಣಗೊಳಿಸಿದೆ.

ಕನ್ನಡ ನಾಡಿನ ಖ್ಯಾತ ಬರಹ ಗಾರರು ಈ ಕೃತಿಯಲ್ಲಿ ಶೇಕ್ಸ್‌ಪಿಯರ ನಿಗೆ ತಮ್ಮ ನುಡಿ ನಮನಗಳನ್ನು ಸಲ್ಲಿಸಿದ್ದಾರೆ. ಇದರಲ್ಲಿ ಮೂರು ಭಾಗಗಳಿವೆ. ಮೊದಲ ಲೇಖನ ವಿಭಾಗದಲ್ಲಿ ಶೇಕ್ಸ್‌ಪಿಯರನ ಸಾಹಿತ್ಯ ಸೃಷ್ಟಿಯ ಬೇರೆ ಬೇರೆ ಮುಖಗಳ ಮೇಲೆ ಬೆಳಕು ಚೆಲ್ಲುವ, ಕನ್ನಡ ಸಾಹಿತ್ಯ ರಂಗಭೂಮಿಗಳ ಮೇಲೆ ಅವನ ಪ್ರಭಾವ ಎಷ್ಟೆಂದು ಅಳೆದು ತೋರಿಸುವ ಹದಿನಾರು ಬರಹಗಳಿವೆ. ಎರಡನೆಯ ಭಾಷಾಂತರ ವಿಭಾಗದಲ್ಲಿ ಮುಖ್ಯವಾಗಿ ಈವರೆಗೆ ಹೊಸಗನ್ನಡದಲ್ಲಿ ಅನುವಾದವಾಗದೆ ಉಳಿದ ಕವನಗಳ, ಗೀತಗಳ, ನಾಟಕಗಳಿಂದ ಆರಿಸಿದ ರಸಭಾಗಗಳ ಮೂವತ್ತಕ್ಕೂ ಹೆಚ್ಚು ಭಾಷಾಂತರಗಳಿವೆ. ಕನ್ನಡ ದಲ್ಲೇ ಮೊತ್ತ ಮೊದಲ ಬಾರಿಗೆ ಕವಿಯ ಹದಿನಾರು ಸಾನೆಟ್ಟುಗಳು ಇಲ್ಲಿ ಅನುವಾದಿತವಾಗಿವೆ. ಈಗ ದುರ್ಲಭವಾದ ಹಿಂದಿನ ಒಂದೆರಡು ಕಾವ್ಯಾನುವಾದಗಳೂ ಇಲ್ಲಿವೆ. ಮೂರನೆಯದಾದ ‘ಕೃತಿ ಪರಿಚಯ’ ದಲ್ಲಿ ಶೇಕ್ಸ್‌ಪಿಯರನ ಒಂದೊಂದು ಕೃತಿಯನ್ನು ಪ್ರತ್ಯೇಕವಾಗಿ ಎತ್ತಿಕೊಂಡು ಸ್ಥೂಲವಾಗಿ ಪರಿಚಯ ಮಾಡಿಕೊಡಲಾಗಿದೆ. ಪ್ರಸ್ತಾವನೆಯಲ್ಲಿ ಕವಿಯ ಜೀವನ, ಕೃತಿ, ಸಾಧನೆಗಳ ಒಂದು ಹಕ್ಕಿ ನೋಟವಿದೆ. 394 ಪುಟಗಳ ಈ ಕೃತಿಯ ಮುಖಬೆಲೆ 200 ರೂಪಾಯಿ.
 

share
-ಕಾರುಣ್ಯಾ
-ಕಾರುಣ್ಯಾ
Next Story
X