Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಾಂತ್ರಿಕ ಟೆಂಡರ್ ಮುಗಿದ ಕೂಡಲೇ ಮುಂದಿನ...

ತಾಂತ್ರಿಕ ಟೆಂಡರ್ ಮುಗಿದ ಕೂಡಲೇ ಮುಂದಿನ ಎರಡು ತಿಂಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು: ಸಿದ್ದಗಂಗಪ್ಪ

ವಾರ್ತಾಭಾರತಿವಾರ್ತಾಭಾರತಿ7 Oct 2017 6:26 PM IST
share
ತಾಂತ್ರಿಕ ಟೆಂಡರ್ ಮುಗಿದ ಕೂಡಲೇ ಮುಂದಿನ ಎರಡು ತಿಂಗಳಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು: ಸಿದ್ದಗಂಗಪ್ಪ

ಹನೂರು, ಅ.7: ಕೊಳ್ಳೇಗಾಲ- ಹನೂರು ಭಾಗದ 24 ಕಿ.ಮೀ ರಸ್ತೆಯನ್ನು ಕೆ-ಶಿಪ್ ಯೋಜನೆಯಡಿ 80 ಅಡಿ ರಸ್ತೆ ನಿರ್ಮಾಣ ಮಾಡಲು ಹಣಕಾಸು ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ತಾಂತ್ರಿಕ ಟೆಂಡರ್ ಮುಕ್ತಾಯವಾದ ಕೂಡಲೇ ಮುಂದಿನ 2 ತಿಂಗಳೊಳಗಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕೋಪಯೋಗಿ ಇಲಾಖಾ ಕಾರ್ಯದರ್ಶಿ ಸಿದ್ದಗಂಗಪ್ಪ ಭರವಸೆ ನೀಡಿದ್ದಾರೆ.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಂಡಿರುವ ಕಾಮಗಾರಿ, ವಡಕೆಹಳ್ಳ - ರಾಮಾಪುರ - ದಿನ್ನಳ್ಳಿ ರಸ್ತೆಗಳನ್ನು ಪರಿಶೀಲನೆ ನಡೆಸಿ ಬಳಿಕ ಹನೂರು ಪಟ್ಟಣದ ಲೋಕೋಪಯೋಗಿ ಇಲಾಖಾ ವಸತಿ ಗೃಹದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಶಾಸಕರ ಬಹು ದಿನದ ಒತ್ತಾಯದ ಮೇರೆಗೆ ಮತ್ತು ಸಚಿವ ಮಹದೇವಪ್ಪ ಅವರ ಸೂಚನೆ ಮೇರೆಗೆ ಹನೂರು ಕ್ಷೇತ್ರದಲ್ಲ್ಲಿ ಪರಿಶೀಲನೆಗಾಗಿ ಆಗಮಿಸಿದ್ದೇವೆ. ಕ್ಷೇತ್ರ ವ್ಯಾಪ್ತಿಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದವತಿಯಿಂದ ಕೈಗೆತ್ತಿಕೊಂಡಿರುವ 500 ಕೊಠಡಿಗಳ ವಸತಿ ಸಮುಚ್ಛಯ, ಡಾರ್ಮಿಟರಿ ಕಟ್ಟಡ, ರಂಗಮಂದಿರದ ಮುಂಭಾಗದ ಪ್ರದೇಶಕ್ಕೆ ಶೆಲ್ಟರ್ ಅಳವಡಿಸುವ ಕಾಮಗಾರಿ ಸೇರಿದಂತೆ ಬಹುತೇಕ ಕಾಮಗಾರಿಗಳು ಅಚ್ಚುಕಟ್ಟಾಗಿ ನಡೆಯುತ್ತಿದ್ದು, ರಂಗಂದಿರ ಪ್ರದೇಶದ ಕಾಮಗಾರಿ ದೀಪಾವಳಿ ಜಾತ್ರಾ ಮಹೋತ್ಸವದ ವೇಳೆಗೆ ಮುಗಿಲಿದೆ. ಇನ್ನು ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರವಾಗಿ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಕೊಳ್ಳೇಗಾಲ-ಹನೂರು ರಸ್ತೆ ಕಾಮಗಾಮರಿ 2 ತಿಂಗಳಲ್ಲಿ ಪ್ರಾರಂಭ:  ಕೊಳ್ಳೇಗಾಲ-ಹನೂರು ಭಾಗದ ರಸ್ತೆಯನ್ನು 80 ಅಡಿ ರಸ್ತೆಯಾಗಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದ್ದು, ಈ ಕಾಮಗಾರಿ ಸೇರಿದಂತೆ ರಾಜ್ಯದ ವಿವಿಧೆಡೆ ರಸ್ತೆಗಳನ್ನು ಕೆ-ಶಿಪ್ ಯೋಜನೆಯಡಿ 5.200 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲು ಟೆಂಡರ್ ಆಹ್ವಾನಿಸಲಾಗಿತ್ತು. ಈ ಟೆಂಡರ್‍ನಲ್ಲಿ 8-10 ಏಜೆನ್ಸಿಗಳು ಭಾಗವಹಿಸಿದ್ದು, ದರ ವ್ಯತ್ಯಾಸ ಅನುಮೋದನೆಯಾಧ ಕೂಡಲೇ ದೆಹಲಿಯ ಕೇಂದ್ರ ಸರ್ಕಾರದ ಸ್ವಾಮ್ಯದ ಸಂಸ್ಥೆಯೊಂದಿಗೆ ಒಪ್ಪಂದ ಕರಾರು ಪತ್ರಕ್ಕೆ ಸಹಿ ಹಾಕಿದ ಬಳಿಕ ಕಾಮಗಾರಿಗೆ ಚಾಲನೆ ನೀಡಲಾಗುವುದು ಮತ್ತು ಯೋಜನೆಗೆ ಅವಶ್ಯಕವಾದ ಶೇ.50 ಭೂಮಿಯನ್ನು ವಶಪಡಿಸಿಕೊಳ್ಳಲು ಕ್ರಮವಹಿಸಲಾಗಿದೆ. ಇನ್ನು ಬಾಕಿ ಉಳಿದಿರುವ ಕಾರ್ಯಗಳನ್ನು ಮುಂದಿನ 2 ತಿಂಗಳೊಳಗಾಗಿ ಮುಗಿಸಿ ಬಳಿಕ ಚಾಲನೆ ನೀಡಲಾಗುವುದು ಎಂದರು.

ದಿನ್ನಳ್ಳಿ ರಸ್ತೆಗೆ ಅನುದಾನ ನೀಡಲು ಕ್ರಮ: ರಾಮಾಪುರ- ದಿನ್ನಳ್ಳಿ ಭಾಗದ ರಸ್ತೆಯನ್ನೂ ಪರಿಶೀಲನೆ ನಡೆಸಲಾಗಿದ್ದು, ಈ ಪ್ರದೇಶವು ಅರಣ್ಯ ಪ್ರದೇಶದಿಂದ ಹೆಚ್ಚು ಆವೃತ್ತವಾಗಿರುವುದರಿಂದ ರಸ್ತೆ ಹದಗೆಡಲು ಕಾರಣವಾಗಿದೆ. ಆದರೆ 72 ಕಿ.ಮೀ ಉದ್ದದ ಜಿಲ್ಲಾ ರಸ್ತೆಯನ್ನು ಏಕಕಾಲಕ್ಕೆ ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಈಗಾಗಲೇ 55 ಕೋಟಿ ರೂ. ವೆಚ್ಚದಲ್ಲಿ 55 ಕಿ.ಮೀ ರಸ್ತೆ ಅಭಿವೃದ್ಧಿಯಾಗಿದ್ದು, ಮುಂದಿನ 15 ದಿನಗಳೊಳಗಾಗಿ ಇನ್ನೂ 6 ಕಿ.ಮೀ ರಸ್ತೆ ಅಭಿವೃದ್ಧಿಯಾಗಲಿದೆ. ಬಳಿಕ ಆರ್ಥಿಕ ಇಲಾಖೆ ನೀಡುವ ಅನುದಾನದ ಆಧಾರದ ಮೇಲೆ ರಾಮಾಪುರ - ದಿನ್ನಳ್ಳಿ ಮಾರ್ಗದ ಬಾಕಿ ಉಳಿದಿರುವ 15 ಕಿ.ಮೀ ರಸ್ತೆಯನ್ನು ಅಭಿವೃದ್ಧಿ ಪಡಿಸಲು ಶೀಘ್ರ ಕ್ರಮವಹಿಸುವುದಾಗಿ ಭರವಸೆ ನೀಡಿದರು.

ಕೊಳ್ಳೇಗಾಲ ವಿಭಾಗದ ಎಇಇ ದೊರಸ್ವಾಮಿ ಮಾತನಾಡಿ, ಈಗಾಗಲೇ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮಕ್ಕೆ 18 ಸೇತುವೆಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂಗಾರು ಪ್ರಾರಂಭವಾಗುವ ಮುನ್ನ ಮತ್ತು ಮುಕ್ತಾಯದ ಬಳಿಕ ಪ್ರತಿಮುಳುಗು ಸೇತುವೆಗಳನ್ನು ಪರಿಶೀಲನೆ ನಡೆಸಿ ಶುಚಿತ್ದವ ಅವಶ್ಯಕತೆಯಿರುವೆಡೆ ಶುಚಿತ್ವ ಮತ್ತು ನಿರ್ವಹಣೆ ಅವಶ್ಯವಾಗಿದ್ದಲ್ಲಿ ನಿರ್ವಹಣೆ ಮಾಡುವಂತೆ ಸೂಚಿಸಿದರು.

ಶಾಸಕ ನರೇಂದ್ರ ಮಾತನಾಡಿ, ಕ್ಷೇತ್ರದಲ್ಲಿ ಕಳೆದ 20 ದಿನಗಳಿಂದ ಸುರಿಯುತ್ತಿರುವ ಮಳೆಗೆ ಸತ್ತೇಗಾಲ - ಉಗನೀಯ ಮತ್ತು ಗುಂಡಾಪುರ – ಮಣಗಳ್ಳಿ ಗ್ರಾಮಗಖ ಸಂಪರ್ಕ ರ್ಸತೆಗಳು ಶೊಚನೀಯ ಸ್ಥಿತಿಗೆ ತಲುಪಿದ್ದು, ಶೀಘ್ರವಾಗಿ ಗ್ರಾಹೋಲ್ ಹಾಕಿ ಅಭಿವೃದ್ಧಿ ಪಡಿಸಲು ಸೂಚಿಸಿದರು. ಇನ್ನು ರಾಮಾಪುರ ರಸ್ತೆಯ ಅಭಿವೃದ್ಧಿಗಾಗಿ 8 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಆ ರಸ್ತೆಯು ನಿರ್ಮಾಣ ವಾದ ಬಳಿಕ ರಸ್ತೆ ಸುಧಾರಿಸಲಿದೆ. ಎಲ್ಲೇಮಾಳ – ಮಹದೇಶ್ವರ ಬೆಟ್ಟ ರಸ್ತೆಯ ನಿರ್ವಹಣೆಗಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿಯಲಿದ್ದು ಮಳೆ ನಿಲುಗಡೆಯಾದ ಕೂಡಲೇ ಎಲ್ಲಾ ರಸ್ತೆಗಳ ಕಾಮಗಾರಿಗಳು ಆರಂಭವಾಗಲಿವೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖಾ ಮುಖ್ಯ ಅಭಿಯಂತರ ಶ್ರೀನಿವಾಸ್, ಎಇಇಗಳಾದ ಕುಮಾರ್, ದೊರೆಸ್ವಾಮಿ, ಜೆಇ ರಮೇಶ್, ಪಪಂ ಸದಸ್ಯ ರಾಜೂಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಮಾದೇಶ್ ರಾಜೇಶ್ ರಾಜೂ ಇನ್ನಿತರರು ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X