ಕೂಲಿ ಕಾರ್ಮಿಕ ಆತ್ಮಹತ್ಯೆ
ಪುತ್ತೂರು, ಅ. 7: ಕೂಲಿ ಕಾರ್ಮಿಕರೊಬ್ಬರು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ನಗರದ ಹೊರವಲಯದಲ್ಲಿರುವ ಕಬಕ ಗ್ರಾಮದ ಪೋಳ್ಯ ಎಂಬಲ್ಲಿ ಶನಿವಾರ ನಡೆದಿದೆ.
ಕಬಕ ಗ್ರಾಮದ ಪೋಳ್ಯ ನಿವಾಸಿ ಚಂದ್ರಶೇಖರ್ (35) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಚಂದ್ರಶೇಖರ್ ಕೆಲ ದಿನ ಗಳಿಂದ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರ ಪತ್ನಿ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story